Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ 5 ಹಣ್ಣಿನ ಸಂಯೋಜನೆಗಳು ನಿಮ್ಮ ಆರೋಗ್ಯಕ್ಕೆ ಹಾನಿ ತರಬಹುದು! ಆರೋಗ್ಯದ ಕುರಿತು ಗಮನವಿರಲಿ

ಸಾಮಾನ್ಯವಾಗಿ ಹಣ್ಣುಗಳೆಲ್ಲವನ್ನು ಮಿಶ್ರಣ ಮಾಡಿ ಸಲಾಡ್​ ಮಾಡಿ ಸ್ವೀಕರಿಸುತ್ತೇವೆ. ತಿನ್ನಲು ರುಚಿಯಾಗಿರುವುದಂತೂ ಸತ್ಯ. ಆದರೆ ಕೆಲವು ವಿರುದ್ಧ ಪೋಷಕಾಂಶಗಳು ಒಟ್ಟಿಗೆ ಸೇರಿಸಿ ಸೇವಿಸುವುದು ನಮ್ಮ ದೇಹದ ಆರೋಗ್ಯಕ್ಕೆ ಸಮಸ್ಯೆಯನ್ನು ತಂದೊಡ್ಡಬಹುದು.

Health Tips: ಈ 5 ಹಣ್ಣಿನ ಸಂಯೋಜನೆಗಳು ನಿಮ್ಮ ಆರೋಗ್ಯಕ್ಕೆ ಹಾನಿ ತರಬಹುದು! ಆರೋಗ್ಯದ ಕುರಿತು ಗಮನವಿರಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Jul 10, 2021 | 8:13 AM

ಸಾಮಾನ್ಯವಾಗಿ ಹಣ್ಣುಗಳೆಂದರೆ ಎಲ್ಲರಿಗೂ ಇಷ್ಟ. ಹಸಿದಾಗ ಮೊದಲು ನೆನಪಾಗುವುದೇ ಹಣ್ಣುಗಳು. ಅದರಲ್ಲಿಯೂ ನಮಗಿಷ್ಟವಾದ ಹಣ್ಣುಗಳ ಸಲಾಡ್​, ಜ್ಯೂಸ್​ ಮಾಡಿ ಸವಿಯುತ್ತೇವೆ. ಆದರೆ ಈ ಒಂದು ವಿಷಯವನ್ನು ಮಾತ್ರ ನೆನಪಿನಲ್ಲಿಡಿ. ಒಂದು ಹಣ್ಣಿನಲ್ಲಿರುವ ಪೋಷಕಾಂಶ ಮತ್ತು ಇನ್ನೊಂದು ಹಣ್ಣಿನಲ್ಲಿರುವ ವಿರುದ್ಧ ಪೋಷಕಾಂಶಗಳು ನಮ್ಮ ದೇಹಕ್ಕೆ ಒಂದೇ ಬಾರಿ ಸೇರಿದಾಗ ಅದು ಆರೋಗ್ಯವನ್ನು ಹಾನಿಗೊಳಿಸುತ್ತದೆ.

ಸಾಮಾನ್ಯವಾಗಿ ಹಣ್ಣುಗಳೆಲ್ಲವನ್ನು ಮಿಶ್ರಣ ಮಾಡಿ ಸಲಾಡ್​ ಮಾಡಿ ಸ್ವೀಕರಿಸುತ್ತೇವೆ. ತಿನ್ನಲು ರುಚಿಯಾಗಿರುವುದಂತೂ ಸತ್ಯ. ಆದರೆ ಕೆಲವು ವಿರುದ್ಧ ಪೋಷಕಾಂಶಗಳು ಒಟ್ಟಿಗೆ ಸೇರಿಸಿ ಸೇವಿಸುವುದು ನಮ್ಮ ದೇಹದ ಆರೋಗ್ಯಕ್ಕೆ ಸಮಸ್ಯೆಯನ್ನು ತಂದೊಡ್ಡಬಹುದು. ಹಾಗಿರುವಾಗ ಆಹಾರ ಸೇವನೆಯ ಕುರಿತಾಗಿ ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ.

ಈ 5 ವಿಧದ ಆಹಾರ ಪದಾರ್ಥಗಳನ್ನು ಮಿಶ್ರಣ ಮಾಡಬೇಡಿ ಕಿತ್ತಳೆ ಮತ್ತು ಕ್ಯಾರೆಟ್​: ಈ ಎರಡು ಆಹಾರ ಪದಾರ್ಥಗಳನ್ನು ಮಿಶ್ರಣ ಮಾಡಿ ಸೇವಿಸದಿರಿ. ಇದು ಎದೆಯುರಿ ಮತ್ತು ಮೂತ್ರಪಿಂಡ ಸಮಸ್ಯೆಯನ್ನು ತಂದೊಡ್ಡಬಹುದು.

ಪಪ್ಪಾಯಿ ಮತ್ತು ಲಿಂಬು: ಹುಳಿ ಮತ್ತು ಸಿಹಿ ಅಂಶಗಳನ್ನು ಯಾವಾಗಲೂ ಒಟ್ಟಿಗೆ ಸೇವಿಸಬಾರದು. ಇವುಗಳೆರಡನ್ನು ಒಟ್ಟಿಗೆ ಮಿಶ್ರಣ ಮಾಡಿ ಸೇವಿಸುವುದರಿಂದ ರಕ್ತಹೀನತೆ ಮತ್ತು ಹಿಮೋಗ್ಲೋಬಿನ್​ ಅಸಮತೋಲನ ಉಂಟಾಗುತ್ತದೆ.

ಕಿತ್ತಳೆ ಮತ್ತು ಹಾಲು: ಸಾಮಾನ್ಯವಾಗಿ ಹಾಲಿನ ಜತೆ ಹಣ್ಣುಗಳನ್ನು ಮಿಶ್ರಣ ಮಾಡಿ ಸೇವಿಸಬಾರದು ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದು ಜೀರ್ಣಕ್ರಿಯೆ ಸಮಸ್ಯೆಯನ್ನು ತಂದೊಡ್ಡುತ್ತದೆ. ಜತೆಗೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ತರಬಹುದು. ಕಿತ್ತಳೆ ಹಣ್ಣಿನಲ್ಲಿರುವ ಆಮ್ಲವು ಜೀರ್ಣಕ್ರಿಯೆಗೆ ಬೇಕಾದ ಕಿಣ್ವಗಳನ್ನು ನಾಶ ಪಡಿಸುತ್ತದೆ.

ಪೇರಲ ಮತ್ತು ಬಾಳೆ ಹಣ್ಣು: ಇವೆರಡು ಹಣ್ಣುಗಳನ್ನು ಒಟ್ಟಿಗೆ ಸೇವಿಸಿದಾಗ ವಾಕರಿಗೆ, ಹೊಟ್ಟೆ ಉಬ್ಬುವುದು, ನಿರಂತರ ತಲೆನೋವಿನ ಸಮಸ್ಯೆಗಳು ಕಂಡು ಬರುತ್ತವೆ. ಹಾಗಾಗಿ ಈ ಎರಡು ಹಣ್ಣುಗಳನ್ನು ಒಟ್ಟಿಗೆ ಸೇವಿಸದಿರುವುದು ಒಳಿತು.

ಅನಾನಸ್​ ಮತ್ತು ಹಾಲು: ಅನಾನಸ್​ ಹಣ್ಣಿನಲ್ಲಿ ಬ್ರೊಮೆಲೇನ್​ ಸಂಯುಕ್ತ ಸಮೃದ್ಧಯವಾಗಿರುತ್ತದೆ. ಇದು ಹಾಲಿನೊಂದಿಗೆ ಬೆರೆತಾಗ ದೇಹದಲ್ಲಿ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಇದು ಹೊಟ್ಟೆನೋವು, ವಾಕರಿಕೆ, ತಲೆನೋವು ಸಮಸ್ಯೆಗಳಿಗೆ ಕಾರಣವಾಗುತ್ತವೆ.

ಇದನ್ನೂ ಓದಿ:

ಹಾಲಿನ ಜತೆ ಬಾಳೆಹಣ್ಣು ಮಿಶ್ರಣ ಸೇವಿಸುತ್ತಿದ್ದೀರಾ? ಆರೋಗ್ಯಕ್ಕೆ ಹಾನಿ ಎಂಬುದನ್ನು ಮರೆಯದಿರಿ!

Health Tips: ಬಾಳೆಹಣ್ಣು ಸೇವಿಸುವ ಅಭ್ಯಾಸ ಇದೆಯೇ? ಖಾಯಿಲೆಗಳಿಂದ ದೂರವಿರಲು ಹಣ್ಣುಗಳ ಸೇವನೆ ಉತ್ತಮ

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ