AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Dengue Day 2024 :ಡೆಂಗ್ಯೂವಿನ ರೋಗ ಲಕ್ಷಣ, ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ.

National Dengue Day 2024 :ಡೆಂಗ್ಯೂವಿನ ರೋಗ ಲಕ್ಷಣ, ಚಿಕಿತ್ಸೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು
National Dengue Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 15, 2024 | 6:03 PM

ರಾಜ್ಯದಲ್ಲಿ ಡೆಂಗ್ಯೂವಿನ ಆರ್ಭಟ ಜೋರಾಗಿದೆ. ಡೆಂಗ್ಯೂ ಹೆಸರೇ ಹೇಳುವಂತೆ ಭಯಾನಕ ಕಾಯಿಲೆಯಾಗಿದ್ದು, ಒಮ್ಮೆ ದೇಹದೊಳಗೆ ಒಕ್ಕರಿಸಿಕೊಂಡು ಬಿಟ್ಟರೆ ದೇಹದ ಶಕ್ತಿಯನ್ನು ಕುಗ್ಗಿಸಿ ಬಿಡುತ್ತವೆ. ಈ ಡೆಂಗ್ಯೂ ಜ್ವರವೂ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯೇ ಹೆಚ್ಚು.

ರಾಷ್ಟ್ರೀಯ ಡೆಂಗ್ಯೂ ದಿನದ ಇತಿಹಾಸ ಹಾಗೂ ಮಹತ್ವ:

ರಾಷ್ಟ್ರೀಯ ಡೆಂಗ್ಯೂ ದಿನವು ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಯೋಜನೆಯಾಗಿದ್ದು, ಡೆಂಗ್ಯೂ ವಿರೋಧಿ ದಿನ ಅಥವಾ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಪ್ರತಿ ವರ್ಷ ಮೇ 16 ರಂದು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ರೋಗ, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ. ಈ ದಿನದಂದು ಡೆಂಗ್ಯೂ ತಡೆಗಟ್ಟುವ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಡೆಂಗ್ಯೂ ರೋಗ ಹೇಗೆ ಬರುತ್ತದೆ?

ಭಾರತದಲ್ಲಿ ಪ್ರತಿ ವರ್ಷ ಡೆಂಗ್ಯೂ ರೋಗಕ್ಕೆ ತುತ್ತಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಡೆಂಗ್ಯೂ ವೈರಸ್‌ನಿಂದ ಉಂಟಾಗುವ ವೈರಲ್ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾಗಿರುವ ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಕಚ್ಚಿದ 3-14 ದಿನಗಳ ನಂತರ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ರೋಗ ಕಕಾಣಿಸಿಕೊಂಡ ತಕ್ಷಣವೇ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ರೋಗದಿಂದ ಗುಣಮುಖರಾಗಬಹುದು.

ಡೆಂಗ್ಯೂವಿನ ರೋಗಲಕ್ಷಣಗಳೇನು?

  • ಜ್ವರ
  • ವಾಂತಿ
  • ವಾಕರಿಕೆ
  • ದದ್ದುಗಳು
  • ವಿಪರೀತವಾದ ಮೈ ಕೈ ನೋವು, ಕೀಲು ನೋವು
  • ತಲೆನೋವು ಈ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗ್ಯೂ ಚಿಕಿತ್ಸೆ ಹೇಗೆ?

ಸೋಂಕಿತ ವ್ಯಕ್ತಿಯಲ್ಲಿ ವಿಪರೀತ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಬೇಕು. ಅದಲ್ಲದೇ ಈ ಡೆಂಗ್ಯೂ ಕಾಯಿಲೆ ಬಂದ ವ್ಯಕ್ತಿಯು ವಿಶ್ರಾಂತಿ ತೆಗೆದುಕೊಳ್ಳುವುದು ಅವಶ್ಯಕ. ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಹಣ್ಣಿನ ಜ್ಯೂಸ್​ ಕುಡಿಯುತ್ತಿರಬೇಕು. ಜ್ವರ ಕಡಿಮೆಯಾಗಲು ಪ್ಯಾರಸಿಟಮಾಲ್ ಮಾತ್ರೆಯೇ ಮುಖ್ಯವಾದ ಔಷಧ. ಅದರೊಂದಿಗೆ ಪಪ್ಪಾಯಿ ಹಾಗೂ ಕೀವಿ ಹಣ್ಣುಗಳ ಸೇವನೆಯಿಂದ ರೋಗವನ್ನು ಗುಣಪಡಿಸಿಕೊಳ್ಳಬಹುದು.

ಮುನ್ನೆಚ್ಚರಿಕೆ ಕ್ರಮಗಳು:

  • ಏಡಿಸ್ ಈಜಿಪ್ಟಿ ಸೊಳ್ಳೆಗಳು ಹೂಕುಂಡಗಳು, ನೀರಿನ ತೊಟ್ಟಿಗಳು, ಟೈರ್ ಗಳಲ್ಲಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಹೀಗಾಗಿ ಕುಂಡಗಳು, ಟೈರ್‌ಗಳು ಮತ್ತಿತರ ವಸ್ತುಗಳನ್ನು ಸ್ವಚ್ಛಗೊಳಿಸಬೇಕು.
  • ಮನೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಮಾಡುವ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಬಹುದಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ