AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Onion Day: ಮಧುಮೇಹ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಈರುಳ್ಳಿಯ ಪ್ರಯೋಜನಗಳು

ಪ್ರತೀ ವರ್ಷ ಜೂನ್​​ 27ರಂದು ಈರುಳ್ಳಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಮಧುಮೇಹದಿಂದ ಹಿಡಿದು ಸಂಧಿವಾತದವರೆಗಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಈರುಳ್ಳಿ ಸೇವನೆ ಎಷ್ಟು ಪ್ರಯೋಜನಕಾರಿಯಾಗಿದೆ ಎಂಬುದನ್ನು ಈ ಲೇಖದಲ್ಲಿ ತಿಳಿದುಕೊಳ್ಳಿ.

National Onion Day: ಮಧುಮೇಹ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಈರುಳ್ಳಿಯ ಪ್ರಯೋಜನಗಳು
ಈರುಳ್ಳಿಯ ಪ್ರಯೋಜನಗಳುImage Credit source: Healthifyme
ಅಕ್ಷತಾ ವರ್ಕಾಡಿ
|

Updated on: Jun 27, 2023 | 2:46 PM

Share

ಈರುಳ್ಳಿಯನ್ನು ಪ್ರತಿಯೊಂದು ಭಾರತೀಯ ಮನೆಗಳ ವಿವಿಧ ಬಗೆಗಳ ಪಾಕ ವಿಧಾನದಲ್ಲಿ ಬಳಸಲಾಗುತ್ತದೆ. ಹಸಿಯಾಗಿ, ಹುರಿದ, ಬೇಯಿಸಿದ ಹೀಗೆ ರೀತಿಯಲ್ಲಿ ದೈನಂದಿನ ಆಹಾರ ಕ್ರಮದಲ್ಲಿ ಜೋಡಿಸಿಕೊಳ್ಳಲಾಗುತ್ತದೆ. ಪಾಕ ವಿಧಾನದ ಹೊರತಾಗಿ ಈರುಳ್ಳಿಯನ್ನು ಸಾಂಪ್ರದಾಯಿಕ ಔಷಧದಲ್ಲಿ ಹಸಿವಿನ ಕೊರತೆ, ಪಿತ್ತಕೋಶದ ಅಸ್ವಸ್ಥತೆಗಳಂತಹ ಜೀರ್ಣಕಾರಿ ಸಮಸ್ಯೆಗಳಿಗೆ ವ್ಯಾಪಕವಾಗಿ ಬಳಸಲಾಗುತ್ತದೆ. ಎದೆ ನೋವು ಮತ್ತು ಅಧಿಕ ರಕ್ತದೊತ್ತಡದಂತಹ ಹೃದಯ ಮತ್ತು ರಕ್ತನಾಳಗಳ ಸಮಸ್ಯೆಗಳ ಚಿಕಿತ್ಸೆಯಲ್ಲಿ ಈರುಳ್ಳಿಯನ್ನು ಬಳಸಲಾಗುತ್ತದೆ. ಜೊತೆಗೆ ಈರುಳ್ಳಿ ಹೇರ್ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಕೂದಲಿನ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ, ನೆತ್ತಿಯ ತುರಿಕೆ, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು ಚಿಕಿತ್ಸೆಗೆ ಚಿಕಿತ್ಸೆ ನೀಡುತ್ತದೆ.

ಮಧುಮೇಹ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಈರುಳ್ಳಿಯ ಪ್ರಯೋಜನಗಳು:

ನಿಯಮಿತ ಅಡುಗೆಯಲ್ಲಿ ಈರುಳ್ಳಿಯನ್ನು ಸೇರಿಸುವುದು ರಕ್ತದಲ್ಲಿನ ಸಕ್ಕರೆಯ ಮೌಲ್ಯವನ್ನು ವಿಶೇಷವಾಗಿ ಪ್ರಿಡಿಯಾಬಿಟಿಸ್‌ನಲ್ಲಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಒಂದು ಅಧ್ಯಯನದ ಪ್ರಕಾರ, ಹಸಿ ಈರುಳ್ಳಿ ತಿನ್ನುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದು ಡಾ. ಹರಿಪ್ರಿಯಾ ಹೇಳುತ್ತಾರೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈರುಳ್ಳಿ ಹೇಗೆ ಸಹಾಯ ಮಾಡುತ್ತದೆ ಎಂಬುದು ಇಲ್ಲಿದೆ :

  • ಈರುಳ್ಳಿಯಲ್ಲಿ ಕಂಡುಬರುವ ನಿರ್ದಿಷ್ಟ ಸಂಯುಕ್ತಗಳಾದ ಕ್ವೆರ್ಸೆಟಿನ್ ಮತ್ತು ಸಲ್ಫರ್ ಸಂಯುಕ್ತಗಳು ಸಹ ಮಧುಮೇಹ ವಿರೋಧಿ ಪರಿಣಾಮಗಳನ್ನು ಹೊಂದಿವೆ. ಹೆಚ್ಚಿನ ಪ್ರಮಾಣದ ಫೈಬರ್, ಕಬ್ಬಿಣ, ಪೊಟ್ಯಾಸಿಯಮ್, ವಿಟಮಿನ್ ಸಿ, ಮತ್ತು ಹಲವಾರು ವಿಧಗಳಲ್ಲಿ ಆರೋಗ್ಯವನ್ನು ಉತ್ತೇಜಿಸುವ ವಿವಿಧ ಅಗತ್ಯ ಸೂಕ್ಷ್ಮ ಪೋಷಕಾಂಶಗಳು ಈರುಳ್ಳಿಯಲ್ಲಿ ಸಮೃದ್ಧವಾಗಿದೆ.
  • ಕ್ವೆರ್ಸೆಟಿನ್ ಸಣ್ಣ ಕರುಳು, ಮೇದೋಜ್ಜೀರಕ ಗ್ರಂಥಿ, ಅಸ್ಥಿಪಂಜರದ ಸ್ನಾಯು, ಕೊಬ್ಬಿನ ಅಂಗಾಂಶ ಮತ್ತು ಯಕೃತ್ತಿನ ಜೀವಕೋಶಗಳೊಂದಿಗೆ ಇಡೀ ದೇಹದ ರಕ್ತದಲ್ಲಿನ ಸಕ್ಕರೆಯ ನಿಯಂತ್ರಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈರುಳ್ಳಿ ಪ್ರಿಬಯಾಟಿಕ್‌, ಜೀರ್ಣವಾಗದ ಫೈಬರ್‌ಗಳ ಕಾರಣದಿಂದಾಗಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತವೆ, ಜೀರ್ಣಾಂಗವ್ಯೂಹದ ಮೂಲಕ ದೊಡ್ಡ ಕರುಳಿಗೆ ಹಾದುಹೋಗುವ ಮೂಲಕ ಪ್ರಯೋಜನಕಾರಿ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತವೆ.
  • ಹಸಿ ಈರುಳ್ಳಿ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದ್ದು, ಇದರ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾಗಿದ ಈರುಳ್ಳಿ ರಸವು ಮಧುಮೇಹ-ವಿರೋಧಿ ಗುಣಲಕ್ಷಣಗಳನ್ನು ಒದಗಿಸುತ್ತದೆ ಮತ್ತು ಹೈಪರ್ಗ್ಲೈಸೀಮಿಯಾವನ್ನು ತಡೆಯುತ್ತದೆ.

ಇದನ್ನೂ ಓದಿ: ಎಂಡೊಮೆಟ್ರಿಯೊಸಿಸ್‌ಗೆ ಪರಿಹಾರ ನೀಡಬಲ್ಲ ಮನೆಮದ್ದು ಇಲ್ಲಿದೆ

ಮಧುಮೇಹ ನಿರ್ವಹಣೆಗೆ ಈರುಳ್ಳಿಯನ್ನು ಹೇಗೆ ಸೇವಿಸಬೇಕು?

ನಿಮ್ಮ ಅಡುಗೆಯ ಹೊರತಾಗಿ ಈರುಳ್ಳಿಯನ್ನು ತಾಜಾ ರೈತಾ, ದೋಸೆ, ಸ್ಟಫ್ಡ್ ಚಪಾತಿ ಅಥವಾ ಸಲಾಡ್‌ಗಳಲ್ಲಿ ಬಳಸಬಹುದು. ಈರುಳ್ಳಿ ಗಂಧಕವನ್ನು ಹೊಂದಿರುವುದರಿಂದ ಮಿತವಾಗಿರುವುದು ಮುಖ್ಯವಾಗಿದೆ ಮತ್ತು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡಾಗ ಜಠರದುರಿತ ಉಲ್ಬಣಗೊಳ್ಳಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ