AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ಸ್ಟೋನ್ ತಡೆಗಟ್ಟುವಿಕೆಗೆ ಸಲಹೆ: ಮೂತ್ರಪಿಂಡದ ಕಲ್ಲುಗಳನ್ನು ತಡೆಗಟ್ಟಲು ಈ ನೈಸರ್ಗಿಕ ಪರಿಹಾರಗಳನ್ನು ಪ್ರಯತ್ನಿಸಿ

Kidney Stone Prevention Tips: ಕಿಡ್ನಿ ಕೇರ್​ - ದಾಳಿಂಬೆ ರಸವನ್ನು ಕುಡಿಯುವುದು ಸಹ ಪ್ರಯೋಜನಕಾರಿಯಾಗಿದೆ. ದಾಳಿಂಬೆಯು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ದೇಹದಿಂದ ಹಾನಿಕಾರಕ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗಾಗಿ ದಾಳಿಂಬೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಈ ಸಮಸ್ಯೆಯನ್ನು ತಡೆಯಬಹುದು.

ಕಿಡ್ನಿ ಸ್ಟೋನ್ ತಡೆಗಟ್ಟುವಿಕೆಗೆ ಸಲಹೆ: ಮೂತ್ರಪಿಂಡದ ಕಲ್ಲುಗಳನ್ನು ತಡೆಗಟ್ಟಲು ಈ ನೈಸರ್ಗಿಕ ಪರಿಹಾರಗಳನ್ನು ಪ್ರಯತ್ನಿಸಿ
ಕಿಡ್ನಿ ಕೇರ್​: ಹೀಗೆ ಮಾಡಿದರೆ ಕಿಡ್ನಿಯಲ್ಲಿನ ಕಲ್ಲು ಕರಗುತ್ತದೆ
ಸಾಧು ಶ್ರೀನಾಥ್​
|

Updated on: Sep 26, 2023 | 4:42 PM

Share

ಇಂದಿನ ಜೀವನಶೈಲಿಯಿಂದಾಗಿ ಚಿಕ್ಕವಯಸ್ಸಿನಲ್ಲಿಯೇ ಅನೇಕರು ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅವುಗಳಲ್ಲಿ ಒಂದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆ. ಮೂತ್ರಪಿಂಡಗಳಲ್ಲಿ ರೂಪುಗೊಳ್ಳುವ ಗಟ್ಟಿಯಾದ ಸ್ಫಟಿಕದಂತಹ ವಸ್ತುವನ್ನು ಕಲ್ಲು ಎಂದು ಕರೆಯಲಾಗುತ್ತದೆ. ಈ ಕಲ್ಲುಗಳು ಕ್ರಮೇಣ ಬೆಳೆದು ಮೂತ್ರನಾಳದ ಕಾರ್ಯನಿರ್ವಹಣೆಯನ್ನು ತಡೆಯುತ್ತವೆ. ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯದ ಕಾರಣ ಪ್ರಧಾನವಾಗಿ ಈ ಸಮಸ್ಯೆ ಉಂಟಾಗುತ್ತದೆ.

ಈ ಸಮಸ್ಯೆಗಳನ್ನು ಹೋಗಲಾಡಿಸಲು ಅನುಸರಿಸಬೇಕಾದ ಪ್ರಮುಖ ನಿಯಮವೆಂದರೆ ಸಾಕಷ್ಟು ನೀರು ಕುಡಿಯುವುದು. ನೀವು ದಿನಕ್ಕೆ ನಾಲ್ಕರಿಂದ ಐದು ಲೀಟರ್ ನೀರನ್ನು ಕುಡಿಯಬೇಕು. ಅಲ್ಲದೆ ತುಳಸಿ ಎಲೆಗಳ ರಸವನ್ನು ನಿಯಮಿತವಾಗಿ ಸೇವಿಸಬೇಕು. ಇದು ಅಸಿಟಿಕ್ ಆಮ್ಲವನ್ನು ಹೊಂದಿರುತ್ತದೆ. ಇದಲ್ಲದೆ, ಇದರ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ.

ದಾಳಿಂಬೆ ರಸವನ್ನು ಕುಡಿಯುವುದು ಸಹ ಪ್ರಯೋಜನಕಾರಿಯಾಗಿದೆ. ದಾಳಿಂಬೆಯು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ದೇಹದಿಂದ ಹಾನಿಕಾರಕ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗಾಗಿ ದಾಳಿಂಬೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಈ ಸಮಸ್ಯೆಯನ್ನು ತಡೆಯಬಹುದು.

ಇದನ್ನೂ ಓದಿ: ಅತಿಯಾಗಿ ಓಡುವುದು ದೇಹಕ್ಕೆ ಒಳ್ಳೆಯದೇ? ಈ ಆರೋಗ್ಯ ವಿಷಯಗಳನ್ನು ತಿಳಿದುಕೊಳ್ಳಿ

ನಿಂಬೆ ರಸದಲ್ಲಿರುವ ಸಿಟ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳ ರಚನೆಯನ್ನು ತಡೆಯುತ್ತದೆ. ಇದಲ್ಲದೆ, ನಿಂಬೆ ರಸವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಾಗಾಗಿ ನಿತ್ಯವೂ ನಿಂಬೆ ರಸವನ್ನು ಕುಡಿಯುವುದನ್ನು ರೂಢಿಸಿಕೊಳ್ಳಿ. ಹೆಚ್ಚಿನ ಜನರು ಆಪಲ್ ಸೈಡರ್ ವಿನೆಗರ್ ಅನ್ನು ಇಷ್ಟಪಡುವುದಿಲ್ಲ. ವಾಸ್ತವವಾಗಿ, ಇದರಲ್ಲಿರುವ ಅಸಿಟಿಕ್ ಆಮ್ಲವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.

ಪ್ರತಿದಿನ ಬೆಳಿಗ್ಗೆ 2 ಚಮಚ ಆಪಲ್ ಸೈಡರ್ ವಿನೆಗರ್ ಅನ್ನು ನೀರಿಗೆ ಹಾಕಿಕೊಂಡು ಕುಡಿಯುವುದು ಮೂತ್ರಪಿಂಡದ ಕಲ್ಲುಗಳನ್ನು ತಡೆಯುತ್ತದೆ. ಮೆಂತ್ಯ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಸಹ ಸಹಾಯ ಮಾಡುತ್ತದೆ. ಮೆಂತ್ಯವು ಕಿಡ್ನಿಯಲ್ಲಿ ಖನಿಜಾಂಶಗಳು ಸಂಗ್ರಹವಾಗುವುದನ್ನು ತಡೆಯುತ್ತದೆ. ಪ್ರತಿದಿನ ಬೆಳಗ್ಗೆ ನೆನೆಸಿದ ಮೆಂತ್ಯ ನೀರನ್ನು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ