AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ 2 ಕಪ್ ಕಾಫಿ ಕುಡಿದರೆ ಆಯಸ್ಸು ಹೆಚ್ಚುತ್ತದೆಯೇ? ಸಂಶೋಧನೆಯಿಂದ ತಿಳಿದುಬಂದ ಅಚ್ಚರಿ ಮಾಹಿತಿ

ಪ್ರತಿದಿನ 1–2 ಕಪ್ ಕಾಫಿ ಸೇವಿಸುವುದು ಕೆಲವು ಜನರಲ್ಲಿ ದೀರ್ಘಾಯುಷ್ಯ ಮತ್ತು ಹೃದಯದ ಆರೋಗ್ಯದೊಂದಿಗೆ ಸಂಬಂಧ ಹೊಂದಿರಬಹುದು ಎಂದು ಹೊಸ ಅಧ್ಯಯನ ತಿಳಿಸಿದೆ. ಆದರೆ, ಕೇವಲ ಕಾಫಿಯನ್ನೇ ಅವಲಂಬಿಸಿ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಹಾಗೂ ಆರೋಗ್ಯಕರ ಜೀವನಶೈಲಿಯೇ ಉತ್ತಮ ಆರೋಗ್ಯದ ಮೂಲಾಧಾರ.

ದಿನಕ್ಕೆ 2 ಕಪ್ ಕಾಫಿ ಕುಡಿದರೆ ಆಯಸ್ಸು ಹೆಚ್ಚುತ್ತದೆಯೇ? ಸಂಶೋಧನೆಯಿಂದ ತಿಳಿದುಬಂದ ಅಚ್ಚರಿ ಮಾಹಿತಿ
Coffee And LongevityImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Aug 04, 2026 | 3:42 PM

Share

ಮುಖ್ಯಾಂಶಗಳು

  • ಕಾಫಿ ಕುಡಿಯುವುದರಿಂದ ಹೃದಯಕ್ಕೂ ಲಾಭವೇ? ಹೊಸ ಅಧ್ಯಯನ ಹೇಳಿದ್ದೇನು?
  • ಕಾಫಿ ಪ್ರಿಯರಿಗೆ ಗುಡ್ ನ್ಯೂಸ್! ಪ್ರತಿದಿನ ಕಾಫಿ ಕುಡಿಯುವುದರಿಂದ ಈ ಆರೋಗ್ಯ ಲಾಭಗಳಿರಬಹುದು
  • ಕಾಫಿ ಕುಡಿಯುವಾಗ ಯಾವ ರೀತಿಯ ತಪ್ಪುಗಳನ್ನು ಮಾಡಬಾರದು

ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೋಟ್ಯಂತರ ಜನರು ತಮ್ಮ ದಿನವನ್ನು ಒಂದು ಕಪ್ ಕಾಫಿಯೊಂದಿಗೆ ಆರಂಭಿಸುತ್ತಾರೆ. ಕೆಲವರಿಗೆ ಕಾಫಿ ಕುಡಿಯದೇ ದಿನವೇ ಶುರುವಾಗುವುದಿಲ್ಲ. ಆದರೆ, ಪ್ರತಿದಿನ ಕಾಫಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ? ಇದರಿಂದ ನಿಜವಾಗಿಯೂ ಆಯಸ್ಸು ಹೆಚ್ಚುತ್ತದೆಯೇ? ಎಂಬ ಪ್ರಶ್ನೆ ಹಲವರಲ್ಲಿದೆ. ಇದೀಗ Public Health Nutrition ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವೊಂದು ಈ ಪ್ರಶ್ನೆಗೆ ಕುತೂಹಲಕಾರಿ ಉತ್ತರ ನೀಡಿದೆ. ಅಧ್ಯಯನದ ಪ್ರಕಾರ, ಪ್ರತಿದಿನ ಮಿತ ಪ್ರಮಾಣದಲ್ಲಿ ಕಾಫಿ ಸೇವಿಸುವವರಲ್ಲಿ ದೀರ್ಘಾಯುಷ್ಯದ ಸಾಧ್ಯತೆ ಹೆಚ್ಚಿರಬಹುದು ಎಂಬುದು ಕಂಡುಬಂದಿದೆ. ಆದರೆ, ಕಾಫಿಯೇ ಆಯಸ್ಸು ಹೆಚ್ಚಿಸುತ್ತದೆ ಎಂಬುದಾಗಿ ಅರ್ಥೈಸಬಾರದು ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಅಧ್ಯಯನದಲ್ಲಿ ಏನು ಹೇಳಲಾಗಿದೆ? ದಿನಕ್ಕೆ ಎಷ್ಟು ಕಾಫಿ ಕುಡಿಯಬಹುದು? ಸೇವನೆ ಮಾಡುವಾಗ ಯಾರು ಎಚ್ಚರ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಧ್ಯಯನದಲ್ಲಿ ಏನು ಬಹಿರಂಗವಾಯಿತು?

Public Health Nutrition ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ಸಾವಿರಾರು ಜನರ ಆರೋಗ್ಯದ ಮಾಹಿತಿಯನ್ನು ಸಂಶೋಧಕರು ವಿಶ್ಲೇಷಿಸಿದ್ದಾರೆ. ಅಧ್ಯಯನದ ಪ್ರಕಾರ, ಪ್ರತಿದಿನ 1 ರಿಂದ 2 ಕಪ್ ಕಾಫಿ ಕುಡಿಯುವವರಲ್ಲಿ ಕಾಫಿ ಸೇವಿಸದವರಿಗಿಂತ ಹೆಚ್ಚು ಕಾಲ ಬದುಕುವ ಸಾಧ್ಯತೆ ಕಂಡುಬಂದಿದೆ. ಜೊತೆಗೆ ಹೃದಯ ಸಂಬಂಧಿತ ಕಾಯಿಲೆಗಳಿಂದ ಸಾವನ್ನಪ್ಪುವ ಅಪಾಯವೂ ತುಸು ಕಡಿಮೆ ಕಂಡುಬಂದಿದೆ. ಸಂಶೋಧಕರ ಅಭಿಪ್ರಾಯದಂತೆ, ಕಾಫಿಯಲ್ಲಿ ಇರುವ ಆಂಟಿಆಕ್ಸಿಡೆಂಟ್‌ಗಳು ಮತ್ತು ಸಸ್ಯ ಮೂಲದ ನೈಸರ್ಗಿಕ ಸಂಯುಕ್ತಗಳು ದೇಹದ ಕೋಶಗಳನ್ನು ಹಾನಿಯಿಂದ ರಕ್ಷಿಸುವುದರ ಜೊತೆಗೆ ಹೃದಯದ ಆರೋಗ್ಯಕ್ಕೂ ನೆರವಾಗಬಹುದು.

ಆದರೆ, ಈ ಅಧ್ಯಯನವು ಸಂಬಂಧವನ್ನು (Association) ಮಾತ್ರ ತೋರಿಸುತ್ತದೆ. ಕಾಫಿ ಕುಡಿಯುವುದರಿಂದಲೇ ಆಯಸ್ಸು ಹೆಚ್ಚುತ್ತದೆ ಎಂದು ಇದು ಸಾಬೀತುಪಡಿಸುವುದಿಲ್ಲ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮವೂ ದೀರ್ಘಾಯುಷ್ಯದಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ದಿನಕ್ಕೆ ಎಷ್ಟು ಕಾಫಿ ಕುಡಿಯಬಹುದು?

ಈ ಅಧ್ಯಯನದಲ್ಲಿ ಹೆಚ್ಚು ಲಾಭ ಕಂಡುಬಂದವರು ದಿನಕ್ಕೆ 1 ರಿಂದ 2 ಕಪ್ ಕಾಫಿ ಸೇವಿಸಿದವರಾಗಿದ್ದಾರೆ. ಆದರೆ, ಪ್ರತಿಯೊಬ್ಬರ ದೇಹ ವಿಭಿನ್ನವಾಗಿರುವುದರಿಂದ ಕಾಫಿಯ ಪ್ರಮಾಣವು ಈ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಅಂದರೆ ವಯಸ್ಸು, ಒಟ್ಟಾರೆ ಆರೋಗ್ಯ, ಕ್ಯಾಫೀನ್ ಸಹಿಸುವ ಸಾಮರ್ಥ್ಯ, ಇತರ ಆರೋಗ್ಯ ಸಮಸ್ಯೆಗಳು ಎಲ್ಲವೂ ಇವುಗಳ ಮೇಲೆ ಪ್ರಭಾವ ಬೀರಬಹುದು. ಹಾಗಾಗಿ ಕಾಫಿ ಕುಡಿದ ನಂತರ ಹೃದಯ ಬಡಿತ ಹೆಚ್ಚಾಗುವುದು, ಆತಂಕ, ನಿದ್ರಾಹೀನತೆ ಅಥವಾ ಕೈ ನಡುಗುವಿಕೆ ಕಂಡುಬಂದರೆ ಅದರ ಪ್ರಮಾಣವನ್ನು ಕಡಿಮೆ ಮಾಡುವುದು ಉತ್ತಮ.

ಯಾರಿಗೆ ಕಾಫಿ ಕುಡಿಯುವಾಗ ಹೆಚ್ಚು ಎಚ್ಚರಿಕೆ ಅಗತ್ಯ?

ಈ ಕೆಳಗಿನವರು ಕಾಫಿ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.

  • ಗರ್ಭಿಣಿಯರು
  • ಅಧಿಕ ರಕ್ತದೊತ್ತಡ ಇರುವವರು
  • ಹೃದಯ ಸಂಬಂಧಿ ಕಾಯಿಲೆ ಇರುವವರು
  • ಆತಂಕ (Anxiety) ಸಮಸ್ಯೆ ಇರುವವರು
  • ನಿದ್ರಾಹೀನತೆ (Insomnia) ಇರುವವರು
  • ಕ್ಯಾಫೀನ್‌ಗೆ ಅತಿಸೂಕ್ಷ್ಮ ಪ್ರತಿಕ್ರಿಯೆ ಇರುವವರು

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಮಾಡಬೇಡಿ

  • ದಿನಕ್ಕೆ 3–4 ಕಪ್‌ಗಿಂತ ಹೆಚ್ಚು ಕಾಫಿ ಸೇವಿಸಬೇಡಿ
  • ರಾತ್ರಿ ಮಲಗುವ ಮುನ್ನ ಕಾಫಿ ಕುಡಿಯುವುದನ್ನು ತಪ್ಪಿಸಿ.
  • ಕಾಫಿಗೆ ಹೆಚ್ಚು ಸಕ್ಕರೆ, ಸಿರಪ್ ಅಥವಾ ವಿಪ್ಪಿಂಗ್ ಕ್ರೀಮ್ ಸೇರಿಸುವುದನ್ನು ಕಡಿಮೆ ಮಾಡಿ.
  • ಖಾಲಿ ಹೊಟ್ಟೆಯಲ್ಲಿ ಹೆಚ್ಚು ಕಾಫಿ ಕುಡಿಯುವುದರಿಂದ ಕೆಲವರಿಗೆ ಅಸಿಡಿಟಿ ಉಂಟಾಗಬಹುದು.
  • ಸಾಕಷ್ಟು ನೀರು ಕುಡಿಯುವುದನ್ನು ಮರೆಯಬೇಡಿ.

ಸೂಚನೆ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ನಿಮ್ಮ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆಯಂತೆ ಆಹಾರ ಪದ್ಧತಿಯನ್ನು ಅನುಸರಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ
ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ