AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಸಾತ್ಮಕ ನಡವಳಿಕೆ ತೋರುವ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನಿರಾಕರಿಸಬಹುದು- ಎನ್​ಎಂಸಿ

NMC ನೋಂದಾಯಿತ ವೈದ್ಯಕೀಯ ಪ್ರಾಕ್ಟೀಷನರ್ ನಿಯಮಗಳು 2023 ರಲ್ಲಿ ವಿವರಿಸಿರುವ ಈ ಕ್ರಮವು ರೋಗಿಗಳು ವೈದ್ಯರ ಮೇಲೆ ನಡೆಸುವ ದಾಳಿಯನ್ನು ತಡೆಗಟ್ಟವ ಗುರಿಯನ್ನು ಹೊಂದಿದೆ.

ಹಿಂಸಾತ್ಮಕ ನಡವಳಿಕೆ ತೋರುವ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನಿರಾಕರಿಸಬಹುದು- ಎನ್​ಎಂಸಿ
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on: Aug 11, 2023 | 1:01 PM

Share

ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಇತ್ತೀಚಿನ ಗೆಜೆಟ್ ಅಧಿಸೂಚನೆಯ ಪ್ರಕಾರ, ಅಶಿಸ್ತಿನ ಅಥವಾ ಹಿಂಸಾತ್ಮಕ ನಡವಳಿಕೆಯನ್ನು ಪ್ರದರ್ಶಿಸುವ ರೋಗಿಗಳಿಗೆ ಚಿಕಿತ್ಸೆಯನ್ನು ನಿರಾಕರಿಸುವ ಅಧಿಕಾರವನ್ನು ವೈದ್ಯರಿಗೆ ನೀಡಿದೆ. NMC ನೋಂದಾಯಿತ ವೈದ್ಯಕೀಯ ಪ್ರಾಕ್ಟೀಷನರ್ ನಿಯಮಗಳು 2023 ರಲ್ಲಿ (NMC Registered Medical Practitioner Regulations 2023) ವಿವರಿಸಿರುವ ಈ ಕ್ರಮವು ರೋಗಿಗಳು ವೈದ್ಯರ ಮೇಲೆ ನಡೆಸುವ ದಾಳಿಯನ್ನು ತಡೆಗಟ್ಟವ ಗುರಿಯನ್ನು ಹೊಂದಿದೆ.

ಈ ನಿಯಮಗಳ ಅಡಿಯಲ್ಲಿ, ಚಿಕಿತ್ಸೆಯನ್ನು ನಿರಾಕರಿಸುವ ಅವರ ನಿರ್ಧಾರದ ಜೊತೆಗೆ ರೋಗಿಗಳ ಹಿಂಸೆ ಅಥವಾ ಅಶಿಸ್ತಿನ ನಡವಳಿಕೆಯ ಯಾವುದೇ ನಿದರ್ಶನಗಳನ್ನು ದಾಖಲಿಸಲು ವೈದ್ಯರಿಗೆ ಸೂಚಿಸಲಾಗಿದೆ. ನಂತರ ಪರ್ಯಾಯ ಆರೋಗ್ಯ ಸೌಲಭ್ಯಗಳಿಗೆ ರೋಗಿಯನ್ನು ಶಿಫಾರಸು ಮಾಡಲಾಗುತ್ತದೆ. ಈ ಬೆಳವಣಿಗೆಯು 2002 ರಿಂದ ಪಾಲಿಸುತ್ತಿರುವ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (MCI) ವೈದ್ಯಕೀಯ ನೀತಿ ಸಂಹಿತೆಯನ್ನು ಬದಲಿಸುತ್ತದೆ.

ಹೆಚ್ಚುವರಿಯಾಗಿ ಈ ನಿಯಮವು, ಶುಲ್ಕವನ್ನು ಪಾವತಿಸದಿದ್ದರೆ ಚಿಕಿತ್ಸೆಯನ್ನು ತಡೆಹಿಡಿಯಲು ವೈದ್ಯರಿಗೆ ಅಧಿಕಾರ ನೀಡುತ್ತವೆ. ಆದಾಗ್ಯೂ, ಈ ನಿಯಮವು ಸರ್ಕಾರಿ ವೈದ್ಯರು ಅಥವಾ ತುರ್ತು ಪರಿಸ್ಥಿತಿಗಳಿಗೆ ಅನ್ವಯಿಸುವುದಿಲ್ಲ. ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ನಂತರ ಹೊಸ ನಿಯಮಗಳು ಆಗಸ್ಟ್ 2, 2023 ರಿಂದ ಜಾರಿಯಾಗಿದೆ.

ಇದನ್ನೂ ಓದಿ: ಕೋರಿಕೆಯ ಮೇರೆಗೆ ನೆರೆಯ ಹೈಕೋರ್ಟ್​​ಗೆ ಕರ್ನಾಟಕ ನ್ಯಾಯಮೂರ್ತಿ ವರ್ಗಾಯಿಸಲು ಶಿಫಾರಸು

ಈ ಮಾರ್ಗಸೂಚಿಯನ್ನು ಅನುಸರಿಸುವ ಮೂಲಕ, ವೈದ್ಯರ ಹಕ್ಕುಗಳನ್ನು ರಕ್ಷಿಸಲು ಮತ್ತು ರೋಗಿಯ-ವೈದ್ಯರ ನಡುವಿನ ಸಂಬಂಧಗಳನ್ನು ಹೆಚ್ಚಿಸಲು NMC ಗುರಿಯನ್ನು ಹೊಂದಿದೆ. ವೈದ್ಯಕೀಯ ವೃತ್ತಿಪರರು ಕೆಲವೊಮ್ಮೆ ಎದುರಿಸುವ ಸವಾಲುಗಳನ್ನು ಈ ಕ್ರಮವು ಅಂಗೀಕರಿಸುತ್ತದೆ ಮತ್ತು ಗುಣಮಟ್ಟದ ಆರೈಕೆಯನ್ನು ನೀಡುವಾಗ ಅವರು ತಮ್ಮ ಸುರಕ್ಷತೆ ಮತ್ತು ನೈತಿಕ ಅಭ್ಯಾಸಗಳಿಗೆ ಆದ್ಯತೆ ನೀಡಬಹುದೆಂದು ಖಚಿತಪಡಿಸುತ್ತದೆ.

ಇನ್ನಷ್ಟು ರಾಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!