AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆಸ್ಪತ್ರೆಗಳಲ್ಲಿ H1N1 ರೋಗಿಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಎಚ್​1 ಎನ್​1 ಹಾಗೂ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೇ ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಯಿಂದಾಗಿ ನಗರದಲ್ಲಿ ಹಲವು ರೀತಿಯ ಕಾಯಿಲೆಗಳು ಶುರುವಾಗುತ್ತಿವೆ. 

ಬೆಂಗಳೂರಿನ ಆಸ್ಪತ್ರೆಗಳಲ್ಲಿ H1N1 ರೋಗಿಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ
H1N1
Follow us
TV9 Web
| Updated By: ನಯನಾ ರಾಜೀವ್

Updated on: Aug 09, 2022 | 12:23 PM

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹಂದಿ ಜ್ವರ( ಎಚ್​1ಎನ್​1) ಹಾಗೂ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೇ ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಯಿಂದಾಗಿ ನಗರದಲ್ಲಿ ಹಲವು ರೀತಿಯ ಕಾಯಿಲೆಗಳು ಶುರುವಾಗುತ್ತಿವೆ.  ಕಳೆದ ತಿಂಗಳು ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದವು. ಹಾಗೆಯೇ ಎಚ್​1ಎನ್​1 ಹಾಗೂ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚಾಗಿದ್ದವು.

ಇನ್ನು ಅಪೋಲೊ ಆಸ್ಪತ್ರೆಯಲ್ಲಿ ಶೇ.50 ರಷ್ಟು ರೋಗಿಗಳು ಎಚ್​1ಎನ್​1 ಹಾಗೂ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದಾರೆ ಎಂದು ಡಾ. ರವೀಂದ್ರ ಮೆಹ್ತಾ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್​ ವರದಿ ಮಾಡಿದೆ.

ಒಪಿಡಿಯಲ್ಲಿ ನಿತ್ಯ 50 ರಿಂದ 70 ಜ್ವರಕ್ಕೆ ಸಂಬಂಧಿಸಿದ ರೋಗಿಗಳು ದಾಖಲಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ,. ಹಂದಿಜ್ವರದ ಲಕ್ಷಣಗಳೇನು? * ಅತಿಯಾದ ಮೈ ಕೈ ನೋವು * ಕೆಮ್ಮು ಮತ್ತು ಹಳದಿ ಕಫ * ನೆಗಡಿ ಮತ್ತು ಗಂಟಲು ಕೆರೆತ * ಉಸಿರಾಟ ತೊಂದರೆ

* ತೀವ್ರ ಸ್ವರೂಪದ ಜ್ವರ * ಅತಿ ಭೇದಿ ಮತ್ತು ವಾಂತಿ

ಅನುಸರಿಸಬೇಕಾದ ಕ್ರಮಗಳು * ಧಾರಾಳ ನೀರು ಕುಡಿಯಿತಿ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸಿ * ಜನಸಂದಣಿ ಸ್ಥಳಕ್ಕೆ ತೆರಳಿದಾಗ ಮಾಸ್ಕ್ ಧರಿಸುವುದು ಒಳ್ಳೆಯದು

* ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಿ * ಬಾಯಿ ಅಥವಾ ಮೂಗನ್ನು ಮುಟ್ಟಿಕೊಳ್ಳುವ ಮೊದಲು ಮತ್ತು ನಂತರ ಕೈಗಳನ್ನು ಚೆನ್ನಾಗಿ ತೊಳೆಯಿರಿ * ಚೆನ್ನಾಗಿ ನಿದ್ದೆಮಾಡಿ, ಒತ್ತಡವನ್ನು ನಿವಾರಿಸಿಕೊಳ್ಳಿ, ಚಟುವಟಿಕೆಯಿಂದಿರಿ

ಏನೇನು ಮಾಡಬಾರದು ?

* ಹಸ್ತ ಲಾಘವ ಅಥವಾ ಇತರೆ ರೂಪದ ದೈಹಿಕ ಸಂಪರ್ಕದ ಶುಭಕೋರಿಕೆ

* ವೈದ್ಯರ ಸಲಹೆ ಇಲ್ಲದೇ ಔಷಧಿ ತೆಗೆದುಕೊಳ್ಳಬೇಡಿ

* ರಸ್ತೆಯಲ್ಲಿ ಮತ್ತು ಎಲ್ಲೆಂದರಲ್ಲಿ ಉಗುಳಬೇಡಿ

* ಅನಾವಶ್ಯಕವಾಗಿ ಜನಸಂದಣಿ ಪ್ರದೇಶಕ್ಕೆ ತೆರಳಬೇಡಿ

* ಜ್ವರ ಸೋಂಕು ಕಾಣಿಸಿಕೊಂಡ ಮಕ್ಕಳನ್ನು ಶಾಲೆಗೆ ಕಳುಹುಸಬೇಡಿ

ಡೆಂಗೀ ಜ್ವರದ ಲಕ್ಷಣಗಳು: ಅಜೀರ್ಣ, ಹಸಿವು ಕುಂದುವುದು, ಚಡಪಡಿಕೆ, ಬಿಸಿ-ಶೀತಗಳ ಇಚ್ಛೆ, ಮೈಭಾರ, ತಲೆಭಾರ, ಆಲಸ್ಯ ಇತ್ಯಾದಿ ಪೂರ್ವಲಕ್ಷಣಗಳನ್ನೂ ತೋರುವುದಿಲ್ಲ. ಹಾಗಾಗಿ ತಕ್ಷಣ 103 ಡಿಗ್ರಿಗಿಂತಲೂ ಏರುವ ತೀವ್ರತಾಪ, ಕಣ್ಣುಗುಡ್ಡೆಯ ಹಿಂದೆ ಸೆಳೆತ, ನೋವು, ಬೆನ್ನುಹುರಿಯ ಗುಂಟ ನೋವು, ಸೊಂಟ ಮೊದಲಾದ ಸಂದುಗಳ ನೋವು, ತಲೆನೋವು, ಮಾಂಸಖಂಡ ಮತ್ತು ಸ್ನಾಯುಗಳ ಸೆಳೆತ, ಹಸಿವು ಅತಿಯಾಗಿ ಕುಂದುವುದು, ಹೊಟ್ಟೆಯ ನೋವು – ಅಸ್ವಸ್ಥತೆ, ಮಕ್ಕಳಲ್ಲಿ ಹೆಚ್ಚಾಗಿ ವಾಂತಿ, ಭೇದಿ, ತುರಿಕೆ, ಸುಸ್ತಾಗುವುದು.

ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ