AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆಸ್ಪತ್ರೆಗಳಲ್ಲಿ H1N1 ರೋಗಿಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಎಚ್​1 ಎನ್​1 ಹಾಗೂ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೇ ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಯಿಂದಾಗಿ ನಗರದಲ್ಲಿ ಹಲವು ರೀತಿಯ ಕಾಯಿಲೆಗಳು ಶುರುವಾಗುತ್ತಿವೆ. 

ಬೆಂಗಳೂರಿನ ಆಸ್ಪತ್ರೆಗಳಲ್ಲಿ H1N1 ರೋಗಿಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ
H1N1
TV9 Web
| Edited By: |

Updated on: Aug 09, 2022 | 12:23 PM

Share

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹಂದಿ ಜ್ವರ( ಎಚ್​1ಎನ್​1) ಹಾಗೂ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೇ ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಯಿಂದಾಗಿ ನಗರದಲ್ಲಿ ಹಲವು ರೀತಿಯ ಕಾಯಿಲೆಗಳು ಶುರುವಾಗುತ್ತಿವೆ.  ಕಳೆದ ತಿಂಗಳು ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದವು. ಹಾಗೆಯೇ ಎಚ್​1ಎನ್​1 ಹಾಗೂ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚಾಗಿದ್ದವು.

ಇನ್ನು ಅಪೋಲೊ ಆಸ್ಪತ್ರೆಯಲ್ಲಿ ಶೇ.50 ರಷ್ಟು ರೋಗಿಗಳು ಎಚ್​1ಎನ್​1 ಹಾಗೂ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದಾರೆ ಎಂದು ಡಾ. ರವೀಂದ್ರ ಮೆಹ್ತಾ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್​ ವರದಿ ಮಾಡಿದೆ.

ಒಪಿಡಿಯಲ್ಲಿ ನಿತ್ಯ 50 ರಿಂದ 70 ಜ್ವರಕ್ಕೆ ಸಂಬಂಧಿಸಿದ ರೋಗಿಗಳು ದಾಖಲಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ,. ಹಂದಿಜ್ವರದ ಲಕ್ಷಣಗಳೇನು? * ಅತಿಯಾದ ಮೈ ಕೈ ನೋವು * ಕೆಮ್ಮು ಮತ್ತು ಹಳದಿ ಕಫ * ನೆಗಡಿ ಮತ್ತು ಗಂಟಲು ಕೆರೆತ * ಉಸಿರಾಟ ತೊಂದರೆ

* ತೀವ್ರ ಸ್ವರೂಪದ ಜ್ವರ * ಅತಿ ಭೇದಿ ಮತ್ತು ವಾಂತಿ

ಅನುಸರಿಸಬೇಕಾದ ಕ್ರಮಗಳು * ಧಾರಾಳ ನೀರು ಕುಡಿಯಿತಿ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸಿ * ಜನಸಂದಣಿ ಸ್ಥಳಕ್ಕೆ ತೆರಳಿದಾಗ ಮಾಸ್ಕ್ ಧರಿಸುವುದು ಒಳ್ಳೆಯದು

* ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಿ * ಬಾಯಿ ಅಥವಾ ಮೂಗನ್ನು ಮುಟ್ಟಿಕೊಳ್ಳುವ ಮೊದಲು ಮತ್ತು ನಂತರ ಕೈಗಳನ್ನು ಚೆನ್ನಾಗಿ ತೊಳೆಯಿರಿ * ಚೆನ್ನಾಗಿ ನಿದ್ದೆಮಾಡಿ, ಒತ್ತಡವನ್ನು ನಿವಾರಿಸಿಕೊಳ್ಳಿ, ಚಟುವಟಿಕೆಯಿಂದಿರಿ

ಏನೇನು ಮಾಡಬಾರದು ?

* ಹಸ್ತ ಲಾಘವ ಅಥವಾ ಇತರೆ ರೂಪದ ದೈಹಿಕ ಸಂಪರ್ಕದ ಶುಭಕೋರಿಕೆ

* ವೈದ್ಯರ ಸಲಹೆ ಇಲ್ಲದೇ ಔಷಧಿ ತೆಗೆದುಕೊಳ್ಳಬೇಡಿ

* ರಸ್ತೆಯಲ್ಲಿ ಮತ್ತು ಎಲ್ಲೆಂದರಲ್ಲಿ ಉಗುಳಬೇಡಿ

* ಅನಾವಶ್ಯಕವಾಗಿ ಜನಸಂದಣಿ ಪ್ರದೇಶಕ್ಕೆ ತೆರಳಬೇಡಿ

* ಜ್ವರ ಸೋಂಕು ಕಾಣಿಸಿಕೊಂಡ ಮಕ್ಕಳನ್ನು ಶಾಲೆಗೆ ಕಳುಹುಸಬೇಡಿ

ಡೆಂಗೀ ಜ್ವರದ ಲಕ್ಷಣಗಳು: ಅಜೀರ್ಣ, ಹಸಿವು ಕುಂದುವುದು, ಚಡಪಡಿಕೆ, ಬಿಸಿ-ಶೀತಗಳ ಇಚ್ಛೆ, ಮೈಭಾರ, ತಲೆಭಾರ, ಆಲಸ್ಯ ಇತ್ಯಾದಿ ಪೂರ್ವಲಕ್ಷಣಗಳನ್ನೂ ತೋರುವುದಿಲ್ಲ. ಹಾಗಾಗಿ ತಕ್ಷಣ 103 ಡಿಗ್ರಿಗಿಂತಲೂ ಏರುವ ತೀವ್ರತಾಪ, ಕಣ್ಣುಗುಡ್ಡೆಯ ಹಿಂದೆ ಸೆಳೆತ, ನೋವು, ಬೆನ್ನುಹುರಿಯ ಗುಂಟ ನೋವು, ಸೊಂಟ ಮೊದಲಾದ ಸಂದುಗಳ ನೋವು, ತಲೆನೋವು, ಮಾಂಸಖಂಡ ಮತ್ತು ಸ್ನಾಯುಗಳ ಸೆಳೆತ, ಹಸಿವು ಅತಿಯಾಗಿ ಕುಂದುವುದು, ಹೊಟ್ಟೆಯ ನೋವು – ಅಸ್ವಸ್ಥತೆ, ಮಕ್ಕಳಲ್ಲಿ ಹೆಚ್ಚಾಗಿ ವಾಂತಿ, ಭೇದಿ, ತುರಿಕೆ, ಸುಸ್ತಾಗುವುದು.

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!