AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

ದೇಹಕ್ಕೆ ಬೇಕಾಗುವಷ್ಟು ನೀರು ಕುಡಿಯದಿರುವುದರಿಂದ ಮಾನವನಿಗೆ ಹೆಚ್ಚಿನ ಕಾಯಿಲೆಗಳು ಬರುತ್ತವೆ ಎಂದು ವೈದ್ಯರು ಹೇಳುತ್ತಾರೆ. ದೇಹವು ಕೇವಲ ಎರಡು ದಿನಗಳವರೆಗೆ ಸಾಕಷ್ಟು ನೀರನ್ನು ತೆಗೆದುಕೊಳ್ಳದಿದ್ದರೆ, ಅದರ ಪ್ರತಿಕ್ರಿಯೆಗಳು ದೇಹದಲ್ಲಿ ಕಾಣಿಸಿಕೊಳ್ಳಲು ಶುರುವಾಗುತ್ತದೆ.

ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ
ಸಾಂಕೇತಿಕ ಚಿತ್ರ
TV9 Web
| Updated By: preethi shettigar|

Updated on: Oct 29, 2021 | 8:46 AM

Share

ಮಾನವನ ಬದುಕಿಗೆ ಗಾಳಿಯಷ್ಟೇ ನೀರು ಕೂಡ ಮುಖ್ಯ. ಆರೋಗ್ಯಕರ ಜೀವನ ನಡೆಸಲು ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ. ದೇಹಕ್ಕೆ ಬೇಕಾಗುವಷ್ಟು ನೀರು ಕುಡಿಯದಿರುವುದರಿಂದ ಮಾನವನಿಗೆ ಹೆಚ್ಚಿನ ಕಾಯಿಲೆಗಳು ಬರುತ್ತವೆ ಎಂದು ವೈದ್ಯರು ಹೇಳುತ್ತಾರೆ. ದೇಹವು ಕೇವಲ ಎರಡು ದಿನಗಳವರೆಗೆ ಸಾಕಷ್ಟು ನೀರನ್ನು ತೆಗೆದುಕೊಳ್ಳದಿದ್ದರೆ, ಅದರ ಪ್ರತಿಕ್ರಿಯೆಗಳು ದೇಹದಲ್ಲಿ ಕಾಣಿಸಿಕೊಳ್ಳಲು ಶುರುವಾಗುತ್ತದೆ. ದಿನನಿತ್ಯ ಸಾಕಷ್ಟು ನೀರು ಕುಡಿಯದಿದ್ದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎಂದು ನಿಮಗೆ ತಿಳಿದಿದೆಯೇ? ಅದಕ್ಕೆ ಉತ್ತರ ಇಲ್ಲಿದೆ.

ತಲೆತಿರುಗುವಿಕೆ ದೇಹದಲ್ಲಿ ರಕ್ತ ಪೂರೈಕೆಯನ್ನು ಸರಿಯಾಗಿ ನಿರ್ವಹಿಸುವಲ್ಲಿ ನೀರು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಅಗತ್ಯವಿರುವಷ್ಟು ನೀರು ಕುಡಿಯದಿದ್ದರೆ ರಕ್ತ ಪೂರೈಕೆಯು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಜತೆಗೆ ರಕ್ತವು ದೇಹದ ಭಾಗಗಳು ಮತ್ತು ಜೀವಕೋಶಗಳಿಗೆ ಸರಿಯಾಗಿ ತಲುಪುವುದಿಲ್ಲ. ಇದರಿಂದ ಆಮ್ಲಜನಕದ ಪೂರೈಕೆಯೂ ಕಡಿಮೆಯಾಗುತ್ತದೆ. ಇದು ತಲೆತಿರುಗುವಿಕೆ ಮತ್ತು ತೀವ್ರ ತಲೆನೋವಿಗೆ ಕಾರಣವಾಗಬಹುದು. ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡರೆ ನೀವು ಸಾಕಷ್ಟು ನೀರು ಕುಡಿಯುತ್ತಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು.

ನಿರ್ಜಲೀಕರಣ ದೇಹಕ್ಕೆ ಸಾಕಷ್ಟು ನೀರು ಸಿಗದಿದ್ದರೆ ನಿರ್ಜಲೀಕರಣಕ್ಕೆ ಒಳಗಾಗುತ್ತೇವೆ. ದೇಹವು ಈ ಸ್ಥಿತಿಗೆ ಹೋದರೆ, ತೀವ್ರವಾದ ಹಸಿವು, ತೀವ್ರ ತಲೆನೋವು, ಕಾಲು ಮತ್ತು ತೋಳುಗಳಲ್ಲಿ ನೋವು ಹೀಗೆ ಅನೇಕ ಸಮಸ್ಯೆಗಳು ಎದುರಾಗುತ್ತದೆ.

ಮೂತ್ರದ ಬಣ್ಣದಲ್ಲಿ ಬದಲಾವಣೆ ದಿನನಿತ್ಯ ಕುಡಿಯುವ ನೀರು ಕಡಿಮೆಯಾದರೆ ಮೂತ್ರ ಕಡು ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುತ್ತದೆ. ಅಂತಹ ರೋಗಲಕ್ಷಣವು ಕಾಣಿಸಿಕೊಂಡರೆ, ದೇಹವು ಅಗತ್ಯಕ್ಕಿಂತ ಕಡಿಮೆ ನೀರನ್ನು ತೆಗೆದುಕೊಳ್ಳುತ್ತಿದೆ ಎಂದು ಅರ್ಥ. ಹೀಗಾಗಿ ಇಂತಹ ಸಮಯದಲ್ಲಿ ಎಚ್ಚರಿಕೆಯಿಂದ ಅತಿ ಹೆಚ್ಚು ನೀರು ಕುಡಿಯಿರಿ.

ಮೂಗಿನಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ ದೇಹವು ಸಾಕಷ್ಟು ದ್ರವವನ್ನು ಪಡೆಯದಿದ್ದರೆ, ಬಾಯಿ ಹೆಚ್ಚಾಗಿ ತೆರೆದಿರುತ್ತದೆ. ಇದರಿಂದ ಮೂಗಿನಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ. ಪರಿಣಾಮ ಕೆಟ್ಟ ಉಸಿರು ಉಂಟಾಗುತ್ತದೆ ಈ ರೀತಿ ಸಮಸ್ಯೆ ಎದುರಾದರೆ ನೀರು ಹೆಚ್ಚು ಕುಡಿಯಬೇಕು ಎಂದು ಅರ್ಥ.

ದಣಿವು ನೀವು ಬೇಗನೆ ಸುಸ್ತಾಗಿದ್ದರೆ ಮತ್ತು ಬೇಸರಗೊಂಡಿದ್ದರೆ ಅಥವಾ ಒಂದು ಸಣ್ಣ ಕೆಲಸದಿಂದ ನೀವು ತುಂಬಾ ದಣಿದಿದ್ದರೂ ನೀವು ಸಾಕಷ್ಟು ನೀರು ಕುಡಿಯುತ್ತಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು.

ಇದನ್ನೂ ಓದಿ: Drinking Water: ನಿಂತು ನೀರು ಕುಡಿಯುವ ಅಭ್ಯಾಸ ಇದೆಯೇ? ಅಪಾಯದ ಬಗ್ಗೆ ಇರಲಿ ಎಚ್ಚರ

Curry Leaves Tea: ಕರಿಬೇವಿನ ಚಹಾದ ಆಶ್ಚರ್ಯಕರ ಆರೋಗ್ಯ ಪ್ರಯೋಜನಗಳು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!