AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಈ ಆಹಾರ ಸೇವಿಸಿದರೆ, ನಿಮ್ಮ ಮೆದುಳು ಸೂಪರ್ ಫಾಸ್ಟ್ ಆಗಿ ಕೆಲಸ ಮಾಡುತ್ತೆ

ಪ್ರತಿದಿನ ಬೆಳಿಗ್ಗೆ ನಾವು ಸೇವಿಸುವ ಆಹಾರವು ನಮ್ಮ ಮೆದುಳು ವೇಗವಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಬೆಳಗಿನ ಸಮಯದಲ್ಲಿ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಂತಹ ಆಹಾರಗಳ ಸೇವನೆ ಮಾಡಬೇಕು ಎಂದು ಹೇಳಲಾಗುತ್ತದೆ. ಹಾಗಾದರೆ ಮೆದುಳಿನ ಶಕ್ತಿಯನ್ನು ಹೆಚ್ಚಿಸುವ ಈ ಆಹಾರಗಳು ಯಾವವು? ಮೆದುಳು ಸೂಪರ್ ಫಾಸ್ಟ್ ಆಗಲು ಯಾವ ಆಹಾರ ಬೆಸ್ಟ್ ಎಂಬುದನ್ನು ತಿಳಿದುಕೊಳ್ಳಿ.

ನೀವು ಈ ಆಹಾರ ಸೇವಿಸಿದರೆ, ನಿಮ್ಮ ಮೆದುಳು ಸೂಪರ್ ಫಾಸ್ಟ್ ಆಗಿ ಕೆಲಸ ಮಾಡುತ್ತೆ
Nourish Your MindImage Credit source: freepik
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Apr 20, 2025 | 8:15 AM

ಪ್ರತಿನಿತ್ಯ ಬೆಳಗಿನ ಸಮಯದಲ್ಲಿ ನಾವು ಸೇವನೆ ಮಾಡುವ ಆಹಾರವು (food) ನಮ್ಮ ದೇಹಕ್ಕೆ ಮಾತ್ರವಲ್ಲ, ಬದಲಾಗಿ ನಮ್ಮ ಮೆದುಳಿನ ಕಾರ್ಯನಿರ್ವಹಣೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಗಿನ ಉಪಾಹಾರ ಯಾವಾಗಲೂ ಪೋಷಕಾಂಶಯುಕ್ತವಾಗಿರಬೇಕು. ಜೊತೆಗೆ ಬುದ್ಧಿವಂತಿಕೆಯನ್ನು ವೇಗಗೊಳಿಸುವ, ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಆಯಾಸವನ್ನು ಕಡಿಮೆ ಮಾಡುವ ಆಹಾರವನ್ನು ನೀವು ತೆಗೆದುಕೊಂಡರೆ, ಮೆದುಳು ಚೆನ್ನಾಗಿ ಕೆಲಸ ಮಾಡುವುದರ ಜೊತೆಗೆ ನಿಮ್ಮ ದೇಹ ಕೂಡ ಆರೋಗ್ಯವಾಗಿರುತ್ತದೆ. ಹಾಗಾದರೆ ನಾವು ಬೆಳಗ್ಗೆ ಯಾವ ರೀತಿಯ ತಿಂಡಿ ಅಥವಾ ಉಪಹಾರಗಳ ಸೇವನೆ ಮಾಡಬೇಕು? ಮೆದುಳು ಸೂಪರ್ ಫಾಸ್ಟ್ ಆಗಲು ಯಾವ ಆಹಾರ ಬೆಸ್ಟ್ ಎಂಬುದನ್ನು ತಿಳಿದುಕೊಳ್ಳಿ.

ಓಟ್ಸ್

ಇದರಲ್ಲಿ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದರ ಸೇವನೆಯಿಂದ ಮೆದುಳಿಗೆ ಸಾಕಷ್ಟು ಶಕ್ತಿ ಸಿಗುತ್ತದೆ. ಓಟ್ಸ್ ಅನ್ನು ಉಪಾಹಾರವಾಗಿ ಬಳಕೆ ಮಾಡುವುದರಿಂದ, ಮೆದುಳು ನಿಧಾನವಾಗಿ ಚುರುಕಾಗುತ್ತದೆ. ಅಲ್ಲದೆ ನೀವು ದಿನವಿಡೀ ಸಕ್ರಿಯವಾಗಿರಲು ಇದು ಸಹಾಯ ಮಾಡುತ್ತದೆ. ಜೊತೆಗೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಶಕ್ತಿಯನ್ನು ನೀಡುತ್ತದೆ.

ಆವಕಾಡೊ

ಇದು ನಿಮ್ಮ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ತುಂಬಾ ಉಪಯುಕ್ತವಾಗಿವೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಜೊತೆಗೆ ಮೆದುಳಿಗೆ ಅಗತ್ಯವಾದ ಆಮ್ಲಜನಕ ಮತ್ತು ಪೋಷಕಾಂಶಗಳು ಸರಿಯಾಗಿ ಸಿಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇದು ನಮಗೆ ತ್ವರಿತವಾಗಿ ಯೋಚಿಸಲು ಮತ್ತು ಏನನ್ನಾದರೂ ನೆನಪಿಟ್ಟುಕೊಳ್ಳಲು ಸುಲಭ ಮಾಡುವ ಆಹಾರಗಳಲ್ಲಿ ಒಂದಾಗಿದೆ. ಹಾಗಾಗಿ ಇವುಗಳನ್ನು ವಿವಿಧ ರೀತಿಯ ಉಪಹಾರಗಳಲ್ಲಿ ಬಳಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ
Image
ಎದೆ ಹಾಲನ್ನು ಹೆಚ್ಚಿಸಿಕೊಳ್ಳಲು ಈ ಆಹಾರಗಳೇ ಬೆಸ್ಟ್
Image
ಪುರುಷರು ಬಿಸಿನೀರಿನ ಸ್ನಾನ ಮಾಡಿದರೆ ಬಂಜೆತನ ಬರುತ್ತಾ?
Image
CT Scan: ಕಾಯಿಲೆ ಪತ್ತೆ ಮಾಡುವ ಈ ಸ್ಕ್ಯಾನಿಂಗ್ ನಿಂದಲೇ ಬರಬಹುದು ಮಾರಕ ರೋಗ
Image
ಮಾವಿನ ಹಣ್ಣಿನ ಮಿಲ್ಕ್ ಶೇಕ್ ಯಾರಿಗೆ ಒಳ್ಳೆಯದು? ಯಾರು ಸೇವನೆ ಮಾಡಬಾರದು?

ವಾಲ್ನಟ್ಸ್

ಇದರಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವು ನರಮಂಡಲಕ್ಕೆ ಸಹಾಯ ಮಾಡುವ ಮೂಲಕ ಜ್ಞಾಪಕ ಶಕ್ತಿಯನ್ನು ಬಲಪಡಿಸುತ್ತವೆ. ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.

ಬ್ಲೂಬೆರ್ರಿ

ಇವುಗಳಲ್ಲಿ ಹೇರಳವಾಗಿರುವ ಉತ್ಕರ್ಷಣ ನಿರೋಧಕಗಳು ಮೆದುಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತವೆ. ದೀರ್ಘಾವಧಿಯಲ್ಲಿ ಮೆದುಳನ್ನು ಆರೋಗ್ಯಕರವಾಗಿರಿಸಲು ಇದು ಸಹಾಯ ಮಾಡುತ್ತದೆ. ಜೊತೆಗೆ ವಯಸ್ಸಾದಂತೆ ಬರುವ ಮರೆವನ್ನು ಕಡಿಮೆ ಮಾಡಲು ಸಹಕಾರಿಯಾಗಿವೆ.

ಚಿಯಾ ಬೀಜ

ಇವು ನೋಡುವುದಕ್ಕೆ ಚಿಕ್ಕದಾಗಿ ಕಂಡರೂ ಕೂಡ, ಪೋಷಕಾಂಶಗಳ ವಿಷಯದಲ್ಲಿ ಇವು ಸಾಕಷ್ಟು ಪ್ರಮಾಣದ ಶಕ್ತಿಯನ್ನು ಹೊಂದಿವೆ. ಇದರಲ್ಲಿರುವ ಒಮೆಗಾ -3 ಆಮ್ಲಗಳು ಮತ್ತು ಫೈಬರ್ ಅಂಶ ಮೆದುಳಿಗೆ ಶಕ್ತಿಯನ್ನು ನೀಡುತ್ತದೆ ಮತ್ತು ಅದನ್ನು ಆರೋಗ್ಯಕರವಾಗಿರಿಸುತ್ತದೆ. ಜೊತೆಗೆ ಇವು ನಿಮಗೆ ದಿನವಿಡೀ ಉತ್ಸಾಹದಿಂದ ಇರಲು ಸಹಾಯ ಮಾಡುತ್ತದೆ.

ಕುಂಬಳಕಾಯಿ ಬೀಜ

ಇದರಲ್ಲಿ ಸತು ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳು ಸಮೃದ್ಧವಾಗಿವೆ. ಮೆದುಳಿನ ಕಾರ್ಯವನ್ನು ಸುಧಾರಿಸುವುದರ ಹೊರತಾಗಿ, ಅವು ಒತ್ತಡವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತವೆ. ಹಾಗಾಗಿ ಬೆಳಗಿನ ಉಪಾಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳುವುದು ಬಹಳ ಒಳ್ಳೆಯದು.

ಇದನ್ನೂ ಓದಿ: ಶುಂಠಿ ಚಹಾ ಅಂದ್ರೆ ಇಷ್ಟನಾ? ಮೇ ತಿಂಗಳು ಮುಗಿಯುವ ತನಕ ಕುಡಿಯಲೇಬೇಡಿ ಯಾಕೆ ಗೊತ್ತಾ?

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿರುವ ವಿಟಮಿನ್ ಕೆ ಮತ್ತು ಫೋಲೇಟ್ ನಂತಹ ಪೋಷಕಾಂಶಗಳು ಮೆದುಳಿಗೆ ಅತ್ಯಗತ್ಯವಾಗಿದೆ. ಇವು ಮೆದುಳಿನ ಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಈ ಆಹಾರಗಳು ನಮ್ಮ ಮೆದುಳನ್ನು ಆರೋಗ್ಯಕರವಾಗಿರಿಸುವುದಲ್ಲದೆ ದಿನವಿಡೀ ಸಕ್ರಿಯವಾಗಿ ಮತ್ತು ಸಕಾರಾತ್ಮಕ ಯೋಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ನಿಮ್ಮ ಉಪಾಹಾರ ದಿನಚರಿಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಮೂಲಕ, ಮೆದುಳನ್ನು ಆರೋಗ್ಯವಾಗಿ ಇರಿಸಿಕೊಳ್ಳಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ