AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನಗಳ ಕಾಲ ಈ ಒಂದು ಅಭ್ಯಾಸ ರೂಢಿಸಿಕೊಂಡ್ರೆ ನಿಮ್ಮಲ್ಲಾಗುವ ಬದಲಾವಣೆಯನ್ನು ನೀವೇ ನಂಬಲ್ಲ!

ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಅನೇಕ ರೀತಿಯ ರೋಗಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿರುತ್ತದೆ. ಆದರೆ, ಅವುಗಳ ಉಪಯೋಗಗಳ ಬಗ್ಗೆ ನಮಗೆ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಅಂತಹ ಒಂದು ಪದಾರ್ಥವೆಂದರೆ ಅದು ಮೆಂತ್ಯ. ಅದರಲ್ಲಿಯೂ ಮೆಂತ್ಯ ನೀರಿನ ನಿಯಮಿತ ಸೇವನೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಹಾಗಾದರೆ ಇದರ ನೀರನ್ನು ಸತತ 15 ದಿನಗಳ ಸೇವನೆ ಮಾಡಿದರೆ ಏನಾಗುತ್ತದೆ, ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

15 ದಿನಗಳ ಕಾಲ ಈ ಒಂದು ಅಭ್ಯಾಸ ರೂಢಿಸಿಕೊಂಡ್ರೆ ನಿಮ್ಮಲ್ಲಾಗುವ ಬದಲಾವಣೆಯನ್ನು ನೀವೇ ನಂಬಲ್ಲ!
ಮೆಂತ್ಯ ನೀರಿನ ಆರೋಗ್ಯ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Nov 25, 2025 | 12:40 PM

Share

ನಮ್ಮ ಅಡುಗೆ ಮನೆಯಲ್ಲಿರುವ ಅನೇಕ ಮಸಾಲೆ ಪದಾರ್ಥಗಳು (spice) ದೇಹದ ವಿವಿಧ ಕಾಯಿಲೆಗಳಿಗೆ ಶಾಶ್ವತ ಪರಿಹಾರ ನೀಡಲು ಸಹಾಯ ಮಾಡುತ್ತದೆ ಆದರೆ, ಅವುಗಳ ಉಪಯೋಗಗಳ ಬಗ್ಗೆ ನಮಗೆ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಅಂತಹ ಒಂದು ಪದಾರ್ಥವೆಂದರೆ ಅದು ಮೆಂತ್ಯ. ಇದರ ನಿಯಮಿತ ಸೇವನೆ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಅದರಲ್ಲಿಯೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯ (Fenugreek Seed) ನೀರನ್ನು ಕುಡಿಯುವುದರಿಂದ ಸಾಕಷ್ಟು ಪ್ರಯೋಜನವಿದೆ. ಅದಕ್ಕಾಗಿಯೇ ಪ್ರಾಚೀನ ಕಾಲದಿಂದಲೂ ಮೆಂತ್ಯವನ್ನು ಔಷಧೀಯ ಗಿಡಮೂಲಿಕೆಯಾಗಿ ಬಳಸಲಾಗುತ್ತಿದೆ. ಹಾಗಾದರೆ ಇದರ ನೀರನ್ನು ಸತತ 15 ದಿನಗಳ ಸೇವನೆ ಮಾಡಿದರೆ ಏನಾಗುತ್ತದೆ, ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮೆಂತ್ಯ ನೀರಿನ ಆರೋಗ್ಯ ಪ್ರಯೋಜನ:

ಮೆಂತ್ಯ ಬೀಜಗಳಲ್ಲಿ ಕಂಡುಬರುವ ನಾರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಮೆಂತ್ಯವು ದೇಹದಲ್ಲಿ ಈಸ್ಟ್ರೊಜೆನ್ ಹಾರ್ಮೋನ್‌ನಂತೆ ಕಾರ್ಯನಿರ್ವಹಿಸುವ ನೈಸರ್ಗಿಕ ಸಂಯುಕ್ತವಾಗಿದೆ. ಅವು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಇದರ ನೀರನ್ನು ಕುಡಿಯುವುದು ಹೊಟ್ಟೆಯನ್ನು ಶುದ್ಧಗೊಳಿಸಿ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಮೆಂತ್ಯ ನೀರಿನ ನಿರ್ವಿಶೀಕರಣ ಮತ್ತು ಉರಿಯೂತ ನಿವಾರಕ ಗುಣಗಳು ಚರ್ಮದ ಮೇಲೂ ಗೋಚರಿಸುತ್ತವೆ. ಇದು ದೇಹದಿಂದ ವಿಷ ಮತ್ತು ಹೆಚ್ಚುವರಿ ಎಣ್ಣೆಯನ್ನು ತೆಗೆದುಹಾಕುತ್ತದೆ. ಪರಿಣಾಮವಾಗಿ, ಮೊಡವೆಗಳು ಮಾಯವಾಗುತ್ತವೆ ಮತ್ತು ಚರ್ಮವು ನೈಸರ್ಗಿಕವಾಗಿ ಹೊಳೆಯುತ್ತದೆ. ಅದರಲ್ಲಿಯೂ ಮಧುಮೇಹ ಇರುವವರು ಈ ನೀರನ್ನು ಕುಡಿಯಲೇಬೇಕು, ಆರೋಗ್ಯಕ್ಕೆ ಬಹಳ ಒಳ್ಳೆಯದು.

ಇದನ್ನೂ ಓದಿ: ಅತಿಯಾದ ಒತ್ತಡದಿಂದ ಮುಕ್ತಿ ಪಡೆಯಲು ನೀವು ಕುಡಿಯಬೇಕಾದ ಪಾನೀಯಗಳಿವು

ಮಾಡುವುದು ಹೇಗೆ?

ಒಂದು ಟೀ ಚಮಚ ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ಒಂದು ಲೋಟ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ನೀರನ್ನು ಸೋಸಿ, ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಈ ಮೆಂತ್ಯ ಬೀಜಗಳನ್ನು ಸಹ ತಿನ್ನಬಹುದು. ಇದು ಫೈಬರ್ ಅಂಶವನ್ನು ಹೆಚ್ಚಿಸುತ್ತದೆ. ಈ ರೀತಿ 15 ದಿನ ತಪ್ಪದೆ ಮಾಡಿದರೆ ನಿಮ್ಮ ದೇಹದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತೆ. ನೀವು ಕೂಡ ಟ್ರೈ ಮಾಡಿ ನೋಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ