AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID19: ಒಮಿಕ್ರಾನ್​ ಉಪತಳಿ BA.2 ಹೆಚ್ಚು ಸಾಂಕ್ರಾಮಿಕವಾಗಿದೆ; ಅಧ್ಯಯನ

ವಿಶ್ವ ಆರೋಗ್ಯ ಸಂಸ್ಥೇಯ ಪ್ರಕಾರ ಮನೆಯೊಳಗೆ BA.2 ಸೋಂಕು ಹರಡುವ ಸಂಭವನೀತೆಯು ಶೇ. 39ರಷ್ಟಿದೆ. ಮತ್ತು BA.1 ತಳಿ ಹರಡುವ ಪ್ರಮಾಣ ಶೇ. 29ರಷ್ಟಿದೆ.

COVID19: ಒಮಿಕ್ರಾನ್​ ಉಪತಳಿ BA.2 ಹೆಚ್ಚು ಸಾಂಕ್ರಾಮಿಕವಾಗಿದೆ; ಅಧ್ಯಯನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Feb 02, 2022 | 11:45 AM

ಕೊರೊನಾ, ಒಮಿಕ್ರಾನ್​ ಬಳಿಕ ಈಗ ಓಮಿಕ್ರಾನ್ ಉಪತಳಿ BA.2 ವೇಗವಾಗಿ ಹರುಡುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ. BA.1 ತಳಿಗಿಂತ ಸೋಂಕು ವೇಗವಾಗಿ ಹರಡಲಿದ್ದು ಲಸಿಕೆ ಪಡೆಯವದವರಲ್ಲಿ ಮಾತ್ರವಲ್ಲ ಲಸಿಕೆ ಪಡೆದವರಿಗೂ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ಡ್ಯಾನಿಶ್​ ಆರೋಗ್ಯ ಸಚಿವಾಲಯದ ಅಧ್ಯಯನದ ವರದಿಯಲ್ಲಿ ಹೇಳಲಾಗಿದೆ. ಆದರೆ ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳಿಗೆ BA.2  ಕಾಣಿಸಿಕೊಂಡರೆ ಅವರು ಬೇರೆಯವರಿಗೆ ಹರಡುವ ಸಾಧ್ಯತೆ ಕಡಿಮೆ ಎಂದು ಸಿಎನ್​ಬಿಸಿ ವರದಿ ಮಾಡಿದೆ. BA.1 ತಳಿಯು ಲಸಿಕೆ ಪಡೆದವರಿಗೆ ತಗುಲುವ ಸಾಧ್ಯತೆ ಕಡಿಮೆ ಆದರೆ BA.2 ತಳಿಯ ಸೋಂಕು ಲಸಿಕೆ ಪಡೆದರೂ ಕಾಣಿಸಿಕೊಳ್ಳುತ್ತದೆ. ಬೂಸ್ಟರ್​ ಲಸಿಕೆ ಪಡೆದವರಿಗೆ BA.2 ಸೋಂಕಿನ ಅಪಾಯ ಕಡಿಮೆ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಲಸಿಕೆ ಪಡೆಯದ ವ್ಯಕ್ತಿಗಳಲ್ಲಿ BA.2 ಅಪಾಯ ಹೆಚ್ಚು. ಬೂಸ್ಟರ್​ ಡೋಸ್​ ಲಸಿಕೆಯನ್ನು ಪಡೆದರೆ BA.2 ಮತ್ತು BA.1 ರೀತಿಯ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಅಧ್ಯಯನದಲ್ಲಿ ಓಮಿಕ್ರಾನ್​ ಮತ್ತು BA.2 ತಳಿಯು ಹೆಚ್ಚಾಗಿ ಶಾಲೆಗಳಲ್ಲಿ ಮತ್ತು ಡೇ ಕೇರ್​ಗಳಲ್ಲಿ ಸೋಂಕು ಹರಡುತ್ತದೆ. ಏಕೆಂದರೆ ಅಲ್ಲಿರುವ ಮಕ್ಕಳು ಲಸಿಕೆಯನ್ನು ಪಡೆದಿರುವುದಿಲ್ಲ ಎಂದು ಹೇಳಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೇಯ ಪ್ರಕಾರ ಮನೆಯೊಳಗೆ BA.2 ಸೋಂಕು ಹರಡುವ ಸಂಭವನೀತೆಯು ಶೇ. 39ರಷ್ಟಿದೆ. ಮತ್ತು BA.1 ತಳಿ ಹರಡುವ ಪ್ರಮಾಣ ಶೇ. 29ರಷ್ಟಿದೆ. ಜಾಗತಿಕ ಆರೋಗ್ಯ ಸಂಸ್ಥೆ ಈವರೆಗೆ BA.2 ತಳಿಯನ್ನು ಓಮಿಕ್ರಾನ್​ನ ಉಪತಳಿ ಎಂದು ಅಧಿಕೃತವಾಗಿ ಹೇಳಿಲ್ಲ. ಆದರೂ ವಿಶ್ವ ಆರೋಗ್ಯ ಸಂಸ್ಥೆಯು ಓಮಿಕ್ರಾನ್ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದರ ಉಪತಳಿಯು ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಸದ್ಯಕ್ಕೆ BA.2 ತಳಿಯು BA.1ಗಿಂತ ಹೆಚ್ಚು ತೀವ್ರವಾಗಿದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದೂ ಸಿಡಿಸಿ ವಕ್ತಾರ ಕ್ರಿಸ್ಟನ್​ ನಾಡಲಂಡ್​ ತಿಳಿಸಿದ್ದಾರೆ ಎಂದು ಇಂಡಿಯಾ ಟಿವಿ ವರದಿ ತಿಳಿಸಿದೆ.

ಇದನ್ನೂ ಓದಿ:

NeoCoV: ನಿಯೋ ಕೊವ್​ ಬಗ್ಗೆ ಹೆದರುವ ಅಗತ್ಯ ಇಲ್ಲವೇ ಇಲ್ಲ, ಇದು ಕೊರೊನಾದ ರೂಪಾಂತರಿ ಅಲ್ಲ; ಅಧ್ಯಯನ ತಿಳಿಸಿದೆ ಒಂದು ಗುಡ್​ ನ್ಯೂಸ್ !

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?