AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹದಿಂದ ಬಳಲುತ್ತಿರುವ 5ರಲ್ಲಿ ಒಬ್ಬರು 18-30 ವರ್ಷ ವಯಸ್ಸಿನವರು: ಸಂಶೋಧನೆ

ಸಂಶೋಧನೆಯೊಂದರ ಪ್ರಕಾರ ಶೇಕಡಾ 30 ರಲ್ಲಿ 22 ರಷ್ಟು ಮಧುಮೇಹಿಗಳು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಲಿಲ್ಲ ಮತ್ತು ಪರ್ಯಾಯಗಳನ್ನು ಹುಡುಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೇ ಯುವ ಪೀಳಿಗೆಯಲ್ಲಿ ಮಧುಮೇಹ ಹರಡುವಿಕೆ ಹೆಚ್ಚುತ್ತಿದೆ ಎಂದು ಬಹಿರಂಗ ಪಡಿಸಿದೆ.

ಮಧುಮೇಹದಿಂದ ಬಳಲುತ್ತಿರುವ 5ರಲ್ಲಿ ಒಬ್ಬರು 18-30 ವರ್ಷ ವಯಸ್ಸಿನವರು: ಸಂಶೋಧನೆ
ಮಧುಮೇಹ
ಅಕ್ಷತಾ ವರ್ಕಾಡಿ
|

Updated on: Aug 01, 2023 | 6:58 PM

Share

ಫಿಟರ್‌ಫ್ಲೈ, ಡಿಜಿಟಲ್ ಥೆರಪ್ಯೂಟಿಕ್ಸ್‌ನಲ್ಲಿ (DTx) ಪರಿಣತಿ ಹೊಂದಿರುವ ಆರೋಗ್ಯ-ತಂತ್ರಜ್ಞಾನ ಕಂಪನಿಯು, ಮಧುಮೇಹ ಪೂರ್ವ ಮತ್ತು ಮಧುಮೇಹ ಹೊಂದಿರುವ ವ್ಯಕ್ತಿಗಳನ್ನು ಒಳಗೊಂಡ ಸುಮಾರು 16,000 ಡಿಜಿಟಲ್ ಸಂವಹನಗಳ ವಿಶ್ಲೇಷಣೆಯಿಂದ ಮಧುಮೇಹದಿಂದ ಬಳಲುತ್ತಿರುವವರ ಅಂಕಿ ಅಂಶವನ್ನು ಬಿಡುಗಡೆ ಮಾಡಿದೆ. ಪ್ಲಾಟ್‌ಫಾರ್ಮ್‌ನ ಮಧುಮೇಹ ರಿವರ್ಸಲ್ ಕ್ಯಾಲ್ಕುಲೇಟರ್ ಅನ್ನು ಬಳಸಿಕೊಂಡು ಒಂದು ವರ್ಷದಲ್ಲಿ ನಡೆಸಿದ ವಿಶ್ಲೇಷಣೆಯು ಮೌಲ್ಯಯುತವಾದ ಸಂಶೋಧನೆಗಳನ್ನು ಒದಗಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ 101 ಮಿಲಿಯನ್ ಮೀರಿದೆ ಎಂದು ಇತ್ತೀಚಿನ ವರದಿಯು ತೋರಿಸಿದ ಸಮಯದಲ್ಲಿ ಈ ಒಳನೋಟಗಳು ಬಂದಿವೆ, ಹೆಚ್ಚುವರಿಯಾಗಿ 136 ಮಿಲಿಯನ್ ಅನ್ನು ಪ್ರಿ-ಡಯಾಬಿಟಿಕ್ ಎಂದು ವರ್ಗೀಕರಿಸಲಾಗಿದೆ.

ಪ್ರಮುಖವಾಗಿ ಸಂಶೋಧನೆಯಲ್ಲಿ, ವಿಶ್ಲೇಷಿಸಿದ ದತ್ತಾಂಶದ ಪ್ರಕಾರ ಈ ಉನ್ನತ ಮಟ್ಟದ ಶೇಕಡಾ 30 ರಲ್ಲಿ 22 ರಷ್ಟು ರೋಗಿಗಳು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಲಿಲ್ಲ ಮತ್ತು ಪರ್ಯಾಯಗಳನ್ನು ಹುಡುಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೇ ಯುವ ಪೀಳಿಗೆಯಲ್ಲಿ ಮಧುಮೇಹ ಹರಡುವಿಕೆ ಹೆಚ್ಚುತ್ತಿದೆ ಎಂದು ಬಹಿರಂಗ ಪಡಿಸಿದೆ. ಮಧುಮೇಹ ಹೊಂದಿರುವ ಐದು ವ್ಯಕ್ತಿಗಳಲ್ಲಿ ಒಬ್ಬರು (20%) 18 ರಿಂದ 30 ವರ್ಷ ವಯಸ್ಸಿನೊಳಗಿನವರು ಹಾಗೂ ಶೇಕಡಾ 60ರಷ್ಟು ಜನರು 18-45 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದುಬಂದಿದೆ. ಕಿರಿಯ ವಯಸ್ಸಿನಲ್ಲಿ ಕಾಣಿಸಿಕೊಳ್ಳುವ ಮಧುಮೇಹವು ಜನಸಂಖ್ಯಾ ಲಾಭಾಂಶ ಮತ್ತು ಆರ್ಥಿಕ ಬೆಳವಣಿಗೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೀಲು ನೋವು, ಮೊಣಕಾಲುಗಳ ಊತ: ಮಕ್ಕಳಲ್ಲೂ ಕಂಡು ಬರುತ್ತಿದೆ ಈ ಸಮಸ್ಯೆ, ಅಧ್ಯಯನದ ವರದಿ ಇಲ್ಲಿದೆ

ದತ್ತಾಂಶದಲ್ಲಿ ಮುಖ್ಯವಾಗಿ ತಿಳಿಸಲಾದ ಮತ್ತೊಂದು ಅಂಶವೆಂದರೆ ರೋಗನಿರ್ಣಯವನ್ನು ಲೆಕ್ಕಿಸದೆ ಮಧುಮೇಹವನ್ನು ನಿರ್ಲಕ್ಷ್ಯಿಸುವುದು. ಶೇಕಡಾ 70 ರಷ್ಟು ವ್ಯಕ್ತಿಗಳು ಮಧುಮೇಹದ ಕುಟುಂಬದ ಇತಿಹಾಸವನ್ನು ಹೊಂದಿದ್ದರೂ, ಸಮಸ್ಯೆಯನ್ನು ಪರಿಹರಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!