AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bathing Tips: ಬೆಳಿಗ್ಗೆ ಅಥವಾ ರಾತ್ರಿ ಯಾವಾಗ ಸ್ನಾನ ಮಾಡುವುದು ಒಳ್ಳೆಯದು?

ಆಯುರ್ವೇದದಲ್ಲಿ, ಸ್ನಾನವು ದೇಹ ಮತ್ತು ಮನಸ್ಸನ್ನು ತಾಜಾ ಮತ್ತು ಶಾಂತವಾಗಿಡುವ ಕ್ರಿಯೆಯಾಗಿದೆ. ಆದರೆ ಯಾವ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದು ಎಂಬುದನ್ನುತಿಳಿದಿರಬೇಕಾಗುತ್ತದೆ. ಅದರಲ್ಲಿಯೂ ಊಟದ ನಂತರವೂ ಸ್ನಾನ ಮಾಡಬಾರದು ಎಂಬ ಮಾತನ್ನು ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ, ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಹಾಗಾದರೆ ಸ್ನಾನ ಯಾವಾಗ ಮಾಡಬೇಕು? ಬೆಳಿಗ್ಗೆ ಮತ್ತು ರಾತ್ರಿ ಸ್ನಾನ, ಇವೆರಡರಲ್ಲಿ ಯಾವುದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

Bathing Tips: ಬೆಳಿಗ್ಗೆ ಅಥವಾ ರಾತ್ರಿ ಯಾವಾಗ ಸ್ನಾನ ಮಾಡುವುದು ಒಳ್ಳೆಯದು?
ಸಾಂದರ್ಭಿಕ ಚಿತ್ರImage Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
|

Updated on: May 07, 2025 | 3:20 PM

ಪ್ರತಿದಿನ ಸ್ನಾನ ಮಾಡುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ನಮ್ಮ ಆರೋಗ್ಯ (Health) ಚೆನ್ನಾಗಿರಲು ಸ್ನಾನ ಮಾಡುವುದು ಅತ್ಯಗತ್ಯ. ಸ್ನಾನವು ದೇಹವನ್ನು ಶುದ್ಧೀಕರಿಸುವುದು ಮಾತ್ರವಲ್ಲ ನಮ್ಮ ಮನಸ್ಸಿಗೂ ನೆಮ್ಮದಿ ಕೊಡುತ್ತದೆ. ಆದರೆ ಹೆಚ್ಚಿನವರು ಬೆಳಿಗ್ಗೆ ಸ್ನಾನ (Morning bath) ಮಾಡುತ್ತಾರೆ. ಇನ್ನು ಕೆಲವರು ರಾತ್ರಿ ಸಮಯದಲ್ಲಿ ಸ್ನಾನ ಮಾಡುತ್ತಾರೆ. ಭಾರತೀಯರಾದ ನಾವು ಹೆಚ್ಚಾಗಿ ಬೆಳಿಗ್ಗೆ ಸ್ನಾನ ಮಾಡುವುದಕ್ಕೆ ಇಚ್ಚಿಸುತ್ತೇವೆ. ಆದರೆ ಚೀನಾ (China), ಜಪಾನ್ (Japan), ಮತ್ತು ಕೊರಿಯಾದಂತಹ ದೇಶಗಳ ಜನರು ರಾತ್ರಿ ಸಮಯದಲ್ಲಿ ಸ್ನಾನ ಮಾಡುತ್ತಾರೆ. ಆದರೆ, ನೀವು ಎಂದಾದರೂ ಇವೆರಡರಲ್ಲಿ ಯಾವುದು ಉತ್ತಮ ಎಂದು ಯೋಚಿಸಿದ್ದೀರಾ? ವೈಜ್ಞಾನಿಕವಾಗಿ ಯಾವುದು ಒಳ್ಳೆಯದು ತಿಳಿದುಕೊಳ್ಳಿ.

ರಾತ್ರಿ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದೇ?

ಸಾಮಾನ್ಯವಾಗಿ ಅನೇಕರು ಸಂಜೆ ಅಥವಾ ರಾತ್ರಿ ಸಮಯದಲ್ಲಿ ಸ್ನಾನ ಮಾಡುತ್ತಾರೆ. ಈ ರೀತಿ ಮಾಡುವುದರಿಂದ ಹಗಲಿನಲ್ಲಿ ದೇಹದ ಮೇಲೆ ಸಂಗ್ರಹವಾದ ವಿಷ ಮತ್ತು ಕೊಳೆ ಸಂಪೂರ್ಣವಾಗಿ ಹೋಗುತ್ತದೆ. ಜೊತೆಗೆ ರಾತ್ರಿ ಸಮಯದಲ್ಲಿ ವಿಶ್ರಾಂತಿ ಬೇಕಾಗಿರುವುದರಿಂದ ನಿದ್ದೆ ಚೆನ್ನಾಗಿ ಬರಲು ಈ ರೀತಿ ಮಾಡುತ್ತಾರೆ. ಇದರಿಂದ ಒತ್ತಡ ಕಡಿಮೆಯಾಗುತ್ತದೆ ಎಂಬ ನಂಬಿಕೆ ಹಲವರದ್ದು. ಅದರಲ್ಲಿಯೂ ಚೀನಾದಂತಹ ದೇಶ ಆರ್ದ್ರ ಮತ್ತು ಉಷ್ಣವಲ ಪ್ರದೇಶವಾಗಿರುವುದರಿಂದ ಇಲ್ಲಿನ ಜನ ಹೆಚ್ಚು ಬೆವರುತ್ತಾರೆ ಅದಕ್ಕಾಗಿಯೇ ಅವರು ರಾತ್ರಿ ಸಮಯದಲ್ಲಿ ಸ್ನಾನ ಮಾಡಲು ಇಷ್ಟಪಡುತ್ತಾರೆ. ತಜ್ಞರು ಕೂಡ ರಾತ್ರಿ ಸಮಯದಲ್ಲಿ ಸ್ನಾನ ಮಾಡುವುದು ಒಳ್ಳೆಯದು ಎಂದು ಹೇಳುತ್ತಾರೆ. ದಿನವಿಡೀ ಕಷ್ಟಪಟ್ಟು ಕೆಲಸ ಮಾಡಿದ ಬಳಿಕ ಸ್ನಾನ ಮಾಡುವುದರಿಂದ ಆಯಾಸ ಮಾಯವಾಗುತ್ತದೆ ಜೊತೆಗೆ ಚೆನ್ನಾಗಿ ನಿದ್ರೆ ಬರುತ್ತದೆ.

ಯಾವಾಗ ಸ್ನಾನ ಮಾಡಬೇಕು, ಯಾವಾಗ ಮಾಡಬಾರದು?

ಇನ್ನು ಹಲವರು ಬೆಳಿಗ್ಗೆ ಮತ್ತು ರಾತ್ರಿ ಎರಡು ಸಮಯದಲ್ಲಿಯೂ ಸ್ನಾನ ಮಾಡುತ್ತಾರೆ. ಆಯುರ್ವೇದದಲ್ಲಿ ಬೆಳಿಗ್ಗೆ ಸೂರ್ಯೋದಯಕ್ಕೆ ಮೊದಲು ಮತ್ತು ಸಂಜೆ ಸೂರ್ಯಾಸ್ತದ ಮೊದಲು ಸ್ನಾನ ಮಾಡುವುದು ಉತ್ತಮ ಎಂದು ಹೇಳಲಾಗುತ್ತದೆ. ಅಲ್ಲದೆ, ಆಯುರ್ವೇದದ ಪ್ರಕಾರ ಮಧ್ಯಾಹ್ನ ಸ್ನಾನ ಮಾಡುವುದು ಸೂಕ್ತವಲ್ಲ. ಮಧ್ಯಾಹ್ನ ಸ್ನಾನ ಮಾಡುವುದರಿಂದ ಅನೇಕ ರೋಗಗಳು ಬರಬಹುದು. ಜೊತೆಗೆ ಉರಿಯೂತಕ್ಕೆ ಕಾರಣವಾಗುತ್ತದೆ ಇದನ್ನು ಮಯೋಸಿಟಿಸ್ ಎಂದು ಕರೆಯಲಾಗುತ್ತದೆ. ಮಧ್ಯಾಹ್ನ ಸ್ನಾನ ಮಾಡುವುದರಿಂದ ಬೆನ್ನು ನೋವು, ಮೊಣಕಾಲು ನೋವು ಮತ್ತು ಕಣ್ಣಿನ ಸಮಸ್ಯೆಗಳು ಕೂಡ ಉಂಟಾಗಬಹುದು.

ಇದನ್ನೂ ಓದಿ
Image
ಯಾವುದೇ ರೀತಿಯ ಕ್ಯಾನ್ಸರ್‌ ಬರಬಾರದು ಎಂದರೆ ಈ ಹಣ್ಣನ್ನು ತಿಂದು ನೋಡಿ
Image
ಕಣ್ಣಿನಲ್ಲಿ ಕಾಣಿಸಿಕೊಳ್ಳುವ ನೋವಿಗೆ ಬಾಣಂತಿಯರ ಎದೆ ಹಾಲಿನಲ್ಲಿದೆ ಮದ್ದು
Image
ಮಗುವಿಗೆ ಮೊಲೆ ಹಾಲು ನೀಡುವ ಮೊದಲು ಹೊರಗೆ ಸ್ಪಲ್ಪ ಚೆಲ್ಲಬೇಕು, ಯಾಕೆ ?
Image
ಸಿಸೇರಿಯನ್‌, ನಾರ್ಮಲ್ ಡೆಲಿವರಿಯಾದ ಬಾಣಂತಿಯರಿಗೆ ಡಾ. ಶಿಲ್ಪಾ ಹೇಳೋದೇನು?

ಇದನ್ನೂ ಓದಿ: ಸ್ತನ, ಅನ್ನನಾಳ, ಶ್ವಾಸಕೋಶ ಯಾವುದೇ ರೀತಿಯ ಕ್ಯಾನ್ಸರ್‌ ಬರಬಾರದು ಎಂದರೆ ಈ ಹಣ್ಣನ್ನು ತಿನ್ನಿ

ಊಟದ ನಂತರವೂ ಸ್ನಾನ ಮಾಡಬಾರದು ಎಂದು ತಜ್ಞರು ಹೇಳುತ್ತಾರೆ. ಊಟದ ನಂತರ, ಆಹಾರವನ್ನು ಜೀರ್ಣಿಸಿಕೊಳ್ಳಲು ಹೊಟ್ಟೆಗೆ ಹೆಚ್ಚಿನ ಶಕ್ತಿ ಮತ್ತು ಸರಿಯಾದ ಪ್ರಮಾಣದ ದೇಹದ ತಾಪಮಾನ ಬೇಕು. ಜೊತೆಗೆ ಆಹಾರ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಊಟ ಆದ ಮೇಲೆ ಸ್ನಾನ ಮಾಡುವುದು ಒಳ್ಳೆಯದಲ್ಲ. ಇದು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಊಟವಾದ ಮೇಲೆ, ಒಂದು ಗಂಟೆ ಅಥವಾ ಒಂದೂವರೆ ಗಂಟೆಯ ನಂತರ ತಲೆ ಕೂದಲನ್ನು ಮಾತ್ರ ತೊಳೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ