AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಹಲ್ಲುಜ್ಜದೇ ಮಲಗ್ತೀರಾ? ಇದು ನಿಮ್ಮ ಹೃದಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?

ರಾತ್ರಿ ಹಲ್ಲುಜ್ಜದೇ ಮಲಗುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ಹೇಳಿರುವುದಾಗಿ ಡಾ. ಕುನಾಲ್ ಸೂದ್ ರೀಲ್ ಒಂದನ್ನು ಹಂಚಿಕೊಂಡಿದ್ದಾರೆ. ರಾತ್ರಿ ನಿದ್ರೆ ಬಂದುಬಿಡ್ತು ಹಾಗಾಗಿ ಹಲ್ಲುಜ್ಜಲು ಮರೆತುಹೋಯಿತು ಎಂಬುವ ಸಬೂಬು ನೀಡಬೇಡಿ ಇದು ದೀರ್ಘಾವಧಿಯಲ್ಲಿ ನಿಮ್ಮ ಹೃದಯದ ಆರೋಗ್ಯಕ್ಕೆ ಹಾನಿ ಮಾಡಬಹುದು, ಹೃದಯಾಘಾತಕ್ಕೂ ಕಾರಣವಾಗಬಹುದು ಎಂದು ಹೇಳಿದ್ದಾರೆ.

ರಾತ್ರಿ ಹಲ್ಲುಜ್ಜದೇ ಮಲಗ್ತೀರಾ? ಇದು ನಿಮ್ಮ ಹೃದಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?
ಹಲ್ಲುಜ್ಜುವುದು Image Credit source: Dr Michael Dental Clinic
ನಯನಾ ರಾಜೀವ್
|

Updated on:Mar 17, 2025 | 8:20 AM

Share

ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು ನಮಗೆಲ್ಲಾ ತಿಳಿದಿರುವ ಬಾಯಿ ಸ್ವಚ್ಛತೆ ಮಂತ್ರ. ಇದು ಹಲ್ಲಿನ ಹುಳುಕು, ದುರ್ವಾಸನೆ ಸೇರಿದಂತೆ ಹಲವು ಸಮಸ್ಯೆಗಳನ್ನು ತಡೆಯುತ್ತದೆ. ಹಾಗಾದರೆ ರಾತ್ರಿ ಹಲ್ಲುಜ್ಜುವುದು ಹಾಗೂ ಹೃದಯದ ಆರೋಗ್ಯ ಎರಡಕ್ಕೂ ಏನು ಸಂಬಂಧವಿದೆ ಅದಕ್ಕೆ ಉತ್ತರ ಇಲ್ಲಿದೆ. ರಾತ್ರಿ ನಿದ್ರೆ ಬಂದುಬಿಡ್ತು ಹಾಗಾಗಿ ಹಲ್ಲುಜ್ಜಲು ಮರೆತುಹೋಯಿತು ಎಂಬುವ ಸಬೂಬು ನೀಡಬೇಡಿ ಇದು ದೀರ್ಘಾವಧಿಯಲ್ಲಿ ನಿಮ್ಮ ಹೃದಯದ ಆರೋಗ್ಯಕ್ಕೆ ಹಾನಿ ಮಾಡಬಹುದು, ಹೃದಯಾಘಾತಕ್ಕೂ ಕಾರಣವಾಗಬಹುದು.

ಡಾ. ಕುನಾಲ್​ ಸೂದ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಒಂದು ರೀಲ್ ಹಂಚಿಕೊಂಡಿದ್ದು, ಅದರಲ್ಲಿ ನಿಮ್ಮ ಬಾಯಿಯ ಆರೋಗ್ಯ ಎಷ್ಟು ಮುಖ್ಯ ಎಂಬುದರ ಬಗ್ಗೆ ವಿವರಿಸಿದ್ದಾರೆ. ರಾತ್ರಿ ವೇಳೆ ಹಲ್ಲುಜ್ಜುವುದನ್ನು ನಿರ್ಲಕ್ಷಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರಬಹುದು. ರಾತ್ರಿ ಹಲ್ಲುಜ್ಜುವುದುನ್ನು ಕೇವಲ ಹುಳುಕು ಹಲ್ಲಾಗುವುದನ್ನು ತಪ್ಪಿಸುವುದಕ್ಕಾಗಿ ಅಲ್ಲ. ಅದಕ್ಕಿಂತ ಹೆಚ್ಚು ಅಪಾಯವನ್ನು ತಂದುಕೊಳ್ಳುವ ಸಾಧ್ಯತೆ ಇದೆ.

ನಿಮ್ಮ ಬಾಯಿಯಿಂದ ಬ್ಯಾಕ್ಟೀರಿಯಾಗಳು ನಿಮ್ಮ ರಕ್ತನಾಳವನ್ನು ಪ್ರವೇಶಿಸಬಹುದು, ಇದು ಕಾಲಾನಂತರದಲ್ಲಿ ನಿಮ್ಮ ಹೃದಯದ ಮೇಲೆ ಪರಿಣಾಮ ಬೀರಬಹುದು. ಉರಿಯೂತ ಉಂಟು ಮಾಡಬಹುದು. ಮೌಖಿಕ ನೈರ್ಮಲ್ಯವು ನೇರವಾಗಿ ಹೃದಯ ಕಾಯಿಲೆಗೆ ಕಾರಣವಾಗುತ್ತದೆ ಎಂದು ಸಾಬೀತುಪಡಿಸದಿದ್ದರೂ ಬಲವಾದ ಸಂಬಂಧವಿದೆ ಎಂಬುದನ್ನು ಹೇಳಿದ್ದಾರೆ.

ಇದನ್ನೂ ಓದಿ
Image
ತೊಗರಿ ಬೇಳೆ ಸೇವಿಸುವ ಮುನ್ನ ಎಚ್ಚರ: ಕ್ಯಾನ್ಸರ್​ ಕಾರಕ ಅಂಶ ಪತ್ತೆ
Image
ಮದುವೆಯಾದ ಮೇಲೆ ಗಂಡಸರಿಗೆ ಹೊಟ್ಟೆ ಭಾಗದಲ್ಲಿ ಬೊಜ್ಜು ಕಂಡು ಬರಲು ಇದೆ ಕಾರಣ
Image
ಮದ್ಯಪಾನ ತ್ಯಜಿಸುವುದರಿಂದ ಒಳ್ಳೆಯ ಕೊಲೆಸ್ಟ್ರಾಲ್‌ಗೆ ಹಾನಿ!
Image
ಸಿಗರೇಟ್ ಸೇದುವುದರಿಂದ ಮಾನಸಿಕ ಒತ್ತಡ ಕಡಿಮೆ ಆಗುತ್ತದೆ ಎಂಬುದು ಸತ್ಯವೇ?

ಮತ್ತಷ್ಟು ಓದಿ: ಹೋಟೆಲ್ಅಂಗಡಿಗಳಲ್ಲಿ ಪೇಪರ್ ಕಪ್ ಗಳಲ್ಲಿ ಟೀ ಹೀರೋರು ಇನ್ಮುಂದೆ ಹುಷಾರಾಗಿರಿ!

ಅಧ್ಯಯನಗಳನ್ನು ಉಲ್ಲೇಖಿಸಿ ವಿಡಿಯೋ ಮಾಡಿದ್ದಾರೆ. 2023ರಲ್ಲಿ ಪ್ರಕಟವಾದ ಅಧ್ಯಯನದ ವರದಿ ಬಗ್ಗೆ ಮಾತನಾಡಿರುವ ಅವರು ರಾತ್ರಿ ಹಲ್ಲುಜ್ಜದೇ ಇರುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದ್ದಾರೆ.

ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು ಕೇವಲ ನಿಮ್ಮ ಮುಖದಲ್ಲಿ ನಿಮ್ಮ ನಗು ಮತ್ತು ಉತ್ತಮ ಉಸಿರಾಟ ಕಾಪಾಡಿಕೊಳ್ಳುವುದು ಮಾತ್ರವಲ್ಲದೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಂದ ದೂರವಿಡುತ್ತದೆ. ಕೇವಲ ಎರಡು ಬಾರಿಯಲ್ಲ ಅದಕ್ಕಿಂತ ಹೆಚ್ಚು ಮಾಡಿ ಬಾಯಿಯನ್ನು ಸ್ವಚ್ಛಗೊಳಿಸಬೇಕು, ಆದರೆ ಅಧ್ಯಯನದಲ್ಲಿ ಕನಿಷ್ಠ 2 ಬಾರಿಯಾದರೂ ಹಲ್ಲುಜ್ಜುವುದು ನಿಮ್ಮ ಹೃದಯದ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ.

ಸೂಚನೆ: ಇದು ಟಿವಿ9ನ ವೈಯಕ್ತಿಕ ಅಭಿಪ್ರಾಯವಾಗಿರುವುದಿಲ್ಲ, ಅಧ್ಯಯನ ವರದಿಯಲ್ಲಿ ಹೇಳಲಾದ ಮಾಹಿತಿಯನ್ನು ಇಲ್ಲಿ ನೀಡಿದ್ದೇವೆ. ಹೆಚ್ಚಿನ ಮಾಹಿತಿಗಾಗಿ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:20 am, Mon, 17 March 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!