AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oral Health: ಬಾಯಿಯೊಳಗೆ ಈ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ

ಪ್ರತಿನಿತ್ಯ ನೀವು ಹಲ್ಲುಗಳನ್ನು ಸ್ವಚ್ಛಗೊಳಿಸಲು ಬ್ರಷ್ ಮಾಡ್ತೀರ, ಒಂದೊಮ್ಮೆ ಸಿಹಿ ತಿನಿಸುಗಳನ್ನು ತಿಂದಾಗ ಅಥವಾ ಯಾವುದೇ ಆಹಾರವನ್ನು ಸೇವಿಸಿದ ಬಳಿಕವೂ ನೀಟಾಗಿ ಬಾಯಿಯನ್ನು ಸ್ವಚ್ಛಗೊಳಿಸುತ್ತೀರಿ.

Oral Health: ಬಾಯಿಯೊಳಗೆ ಈ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ
Oral Health
TV9 Web
| Updated By: ನಯನಾ ರಾಜೀವ್|

Updated on: Aug 20, 2022 | 12:30 PM

Share

ಪ್ರತಿನಿತ್ಯ ನೀವು ಹಲ್ಲುಗಳನ್ನು ಸ್ವಚ್ಛಗೊಳಿಸಲು ಬ್ರಷ್ ಮಾಡ್ತೀರ, ಒಂದೊಮ್ಮೆ ಸಿಹಿ ತಿನಿಸುಗಳನ್ನು ತಿಂದಾಗ ಅಥವಾ ಯಾವುದೇ ಆಹಾರವನ್ನು ಸೇವಿಸಿದ ಬಳಿಕವೂ ನೀಟಾಗಿ ಬಾಯಿಯನ್ನು ಸ್ವಚ್ಛಗೊಳಿಸುತ್ತೀರಿ. ಆದಾಗ್ಯೂ, ಕೆಲವರಿಗೆ ಬಾಯಿಯ ದುರ್ವಾಸನೆ ಕಡಿಮೆ ಆಗುವುದೇ ಇಲ್ಲ.

ಇನ್ನೂ ಕೆಲವರಿಗೆ ಹುಳುಕಿಲ್ಲದಿದ್ದರೂ ಆಗಾ ಹಲ್ಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಕೆಲವು ಜನರಿಗೆ ಒಸಡುಗಳಲ್ಲಿ ರಕ್ತಸ್ರಾವದಂತಹ ಸಮಸ್ಯೆಗಳು ಸಹ ಕಾಣಿಸಿಕೊಳ್ಳುತ್ತವೆ.

ಆದರೆ ಇವೆಲ್ಲವೂ ಮನೆಮದ್ದುಗಳನ್ನು ಮಾಡಿ ಕಡಿಮೆ ಮಾಡಿಕೊಳ್ಳುವಂತಹ ಸಮಸ್ಯೆಗಳು ಆಗಿರುವುದಿಲ್ಲ, ಅವು ಗಂಭೀರ ಸಮಸ್ಯೆಗಳಾಗಿದ್ದು, ವೈದ್ಯರ ಸಲಹೆ ಪಡೆಯಲೇಬೇಕು.

ದುರ್ಬಲ ಹಲ್ಲುಗಳಂತಹ ಸಮಸ್ಯೆಗಳು ತುಂಬಾ ಮಾರಣಾಂತಿಕ ಕಾಯಿಲೆಗಳನ್ನು ಸೂಚಿಸುತ್ತವೆ ಎಂದು ತಜ್ಞರು ಹೇಳುತ್ತಾರೆ. ಇವುಗಳಿಗೆ ತಕ್ಷಣ ಚಿಕಿತ್ಸೆ ನೀಡದಿದ್ದರೆ ಅವು ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಅಗ್ರ ನಾಲಿಗೆ

ನಾಲಿಗೆಯ ಬಿಳಿಯಾಗುವುದು ಗಂಭೀರ ಕಾಯಿಲೆಗಳ ಸಂಕೇತವಾಗಿದೆ. ನಾಲಿಗೆ ಸ್ವಲ್ಪ ಬಿಳಿಯಾಗಿ ಕಾಣಿಸಿಕೊಳ್ಳುವುದು ಸಹಜ, ಆದರೆ ಅದರ ಮೇಲೆ ದಪ್ಪವಾದ ಬಿಳಿ ಲೇಪನವು ಸೋಂಕಿನ ಚಿಹ್ನೆ ಅಥವಾ ಕ್ಯಾನ್ಸರ್ನಂತಹ ಕಾಯಿಲೆಯ ಸಂಕೇತವಾಗಿರಬಹುದು.

ಬಾಯಿ ಹುಣ್ಣು: ಸಾಮಾನ್ಯವಾಗಿ ದೇಹದಲ್ಲಿ ಉಷ್ಣಾಂಶ ಹೆಚ್ಚಾದರೆ ಹುಣ್ಣು ಕಾಣಿಸಿಕೊಳ್ಳುತ್ತದೆ. ಉಷ್ಣ ಆದರೆ ಕೆಲವೊಮ್ಮೆ ಇದು ಮನೆಮದ್ದುಗಳಲ್ಲಿ ಗುಣಪಡಿಸಬಹುದಾದಂತಹ ಸಾಮಾನ್ಯ ಗುಳ್ಳೆಗಳು ಆಗಿರುವುದಿಲ್ಲ. ಬಿ ಜೀವಸತ್ವಗಳು, ಸತು ಮತ್ತು ಕಬ್ಬಿಣದ ಕೊರತೆಯನ್ನು ಸೂಚಿಸುತ್ತವೆ.

ಒಸಡಿನ ಸಮಸ್ಯೆಗಳು: ಒಸಡುಗಳು ಹಳದಿ ಬಣ್ಣಕ್ಕೆ ತಿರುಗಿದರೆ ಹಲ್ಲುಜ್ಜುವಾಗ ರಕ್ತ ಬರುತ್ತದೆ. ಆದ್ದರಿಂದ ಎಚ್ಚರಿಕೆಯಿಂದಿರಿ. ಇದು ಗಂಭೀರ ಅನಾರೋಗ್ಯದ ಸಂಕೇತವಾಗಿರಬಹುದು. ಅಂತಹ ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಅಪಾಯವಿದೆ.

ಬಾಯಿಯ ದುರ್ವಾಸನೆ: ನಿರಂತರವಾಗಿ ನಿಮ್ಮ ಬಾಯಿಯಿಂದ ಕೆಟ್ಟ ವಾಸನೆ ಬರುತ್ತಿದ್ದರೆ ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಇವುಗಳನ್ನು ಎಂದಿಗೂ ನಿರ್ಲಕ್ಷಿಸಬಾರದು. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ಸರಿಯಾಗಿ ಬ್ರಶ್ ಮಾಡಿಲ್ಲ ಎಂದು ಕೊಳ್ಳುತ್ತೇವೆ. ಆದರೆ ಅದು ಸತ್ಯವಲ್ಲ ನೀವು ಗಂಭೀರ ಸಮಸ್ಯೆಯಿಂದ ಬಳಲುತ್ತಿರಬಹುದು ಎಂದರ್ಥ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್