AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ವೇದಿಕೆಯ ಕಪಾಳಮೋಕ್ಷಕ್ಕೆ ಅಲೋಪೆಸಿಯಾ ಕಾರಣ?! ವಿಲ್ ಸ್ಮಿತ್ ಪತ್ನಿಯ ಕೂದಲು ಹಾಗಿರುವುದೇಕೆ?

ಕ್ರಿಸ್ ಜಾಡಾ ಅವರ ಚಿಕ್ಕ ಕೂದಲಿನ ಬಗ್ಗೆ ಕಮೆಂಟ್ ಮಾಡಿದ್ದಾರೆ. ಇದರಿಂದ ಸಿಟ್ಟಾದ ವಿಲ್ ಸ್ಮಿತ್ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ಹಿನ್ನೆಲೆ ಕ್ರಿಸ್ ಜಾಡಾಳ ಕೂದಲ ಬಗ್ಗೆ ನಾವು ತಿಳಿದುಕೊಳ್ಳಬೇಕಿದೆ. ಜಾಡಾಳ ಕೂದಲು ಯಾಕೆ ಹಾಗಿದೆ? ಅದಕ್ಕೆ ಕಾರಣವೇನು? ಈ ಪ್ರಶ್ನೆಗೆ ಉತ್ತರ ಇಲ್ಲಿ ನೀಡಲಾಗಿದೆ.

ಆಸ್ಕರ್ ವೇದಿಕೆಯ ಕಪಾಳಮೋಕ್ಷಕ್ಕೆ ಅಲೋಪೆಸಿಯಾ ಕಾರಣ?! ವಿಲ್ ಸ್ಮಿತ್ ಪತ್ನಿಯ ಕೂದಲು ಹಾಗಿರುವುದೇಕೆ?
TV9 Web
| Updated By: ganapathi bhat|

Updated on:Mar 28, 2022 | 9:11 PM

Share

ಹಾಲಿವುಡ್ ನಟ ವಿಲ್ ಸ್ಮಿತ್ ಆಸ್ಕರ್ ವೇದಿಕೆಯಲ್ಲಿ ಹಾಸ್ಯನಟ ಕ್ರಿಸ್ ರಾಕ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಕಿಂಗ್ ರಿಚರ್ಡ್ ಚಿತ್ರಕ್ಕಾಗಿ ವಿಲ್ ಸ್ಮಿತ್​ಗೆ 2022 ರ ಅತ್ಯುತ್ತಮ ನಟನೆಗಾಗಿ ಆಸ್ಕರ್ ಪ್ರಶಸ್ತಿ ನೀಡಲಾಗಿದೆ. ಆದರೆ, ಈ ಘಟನೆಯು ಆಸ್ಕರ್ ಪ್ರಶಸ್ತಿ ಸ್ವೀಕರಿಸುವ ಮೊದಲು ಸಂಭವಿಸಿದೆ. ಈ ಘಟನೆ ವಿಶ್ವದಾದ್ಯಂತ ಚರ್ಚೆಯಾಗುತ್ತಿದೆ. ವಾಸ್ತವವಾಗಿ, ಕ್ರಿಸ್ ರಾಕ್ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು. ಈ ಸಮಯದಲ್ಲಿ, ಅವರು ವಿಲ್ ಸ್ಮಿತ್ ಪತ್ನಿ ಪಿಂಕೆಟ್ ಅವರ ಬಗ್ಗೆ ಆಡಿಕೊಂಡಿದ್ದಾರೆ. ಕ್ರಿಸ್ ಜಾಡಾ ಅವರ ಚಿಕ್ಕ ಕೂದಲಿನ ಬಗ್ಗೆ ಕಮೆಂಟ್ ಮಾಡಿದ್ದಾರೆ. ಇದರಿಂದ ಸಿಟ್ಟಾದ ವಿಲ್ ಸ್ಮಿತ್ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ಹಿನ್ನೆಲೆ ಕ್ರಿಸ್ ಜಾಡಾರ ಕೂದಲು ಉದುರುವಿಕೆಯ ಸಮಸ್ಯೆ ಬಗ್ಗೆ ನಾವು ತಿಳಿದುಕೊಳ್ಳೋಣ. ಜಾಡಾರ ಕೂದಲು ಯಾಕೆ ಹಾಗಿದೆ? ಅದಕ್ಕೆ ಕಾರಣವೇನು? ಈ ಪ್ರಶ್ನೆಗೆ ಉತ್ತರ ಇಲ್ಲಿ ನೀಡಲಾಗಿದೆ.

ಜಾಡಾ ಕೂದಲು ಹಾಗಾಗಲು ಕಾರಣವೇನು?

ಇಂಡಿಪೆಂಡೆಂಟ್ ಸುದ್ದಿಸಂಸ್ಥೆಯ ವರದಿಯ ಪ್ರಕಾರ, ವಿಲ್ ಸ್ಮಿತ್ ಪತ್ನಿ ಜಾಡಾ ಅಲೋಪೇಸಿಯಾದೊಂದಿಗೆ ಹೋರಾಡುತ್ತಿದ್ದಾರೆ. ಇದೇ ಆಕೆಯ ಬೋಳು ತಲೆಗೆ ಕಾರಣವಾಗಿದೆ. ಅಲೋಪೇಸಿಯಾ ಎಂಬ ಸಮಸ್ಯೆಯಿಂದ ಕೂದಲು ಉದುರುವಿಕೆ ಆರಂಭವಾಗುತ್ತದೆ. ಅಮೆರಿಕಾದಲ್ಲಿ ಮಾತ್ರವೇ ಸುಮಾರು 68 ಲಕ್ಷ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಕೂದಲು ಉದುರುವುದು ಸಾಮಾನ್ಯ ಸಂಗತಿ ಎನ್ನುತ್ತಾರೆ ತಜ್ಞರು. ಕೂದಲುಗಳು ಒಡೆಯುತ್ತವೆ ಮತ್ತು ಅವುಗಳ ಸ್ಥಳದಲ್ಲಿ ಹೊಸ ಕೂದಲು ಬರುತ್ತವೆ. ಆದರೆ ಕೂದಲು ಒಡೆದ ನಂತರ ಅವುಗಳ ಸ್ಥಳದಲ್ಲಿ ಹೊಸ ಕೂದಲುಗಳು ಬರದಿದ್ದಾಗ ಅದನ್ನೇ ಅಲೋಪೇಸಿಯಾ ಎಂದು ಹೇಳುತ್ತಾರೆ. ಅದರ ರೋಗಿಗಳಲ್ಲಿ ಪರಿಣಾಮವು ವಿಭಿನ್ನ ರೀತಿಯಲ್ಲಿ ಕಂಡುಬರುತ್ತದೆ.

ಉದಾಹರಣೆಗೆ ಕೆಲವು ರೋಗಿಗಳಲ್ಲಿ ತಲೆಯ ಮೇಲೆ ಪ್ಯಾಚ್​ಗಳು ಕಾಣಲು ಆರಂಭವಾಗುತ್ತದೆ. ಅಂದರೆ, ಆ ಭಾಗದಲ್ಲಿ ಕೂದಲು ಬರುವುದಿಲ್ಲ. ಪ್ರತಿದಿನ ಅತಿಯಾಗಿ ಕೂದಲು ಉದುರುವುದನ್ನು ನೋಡುತ್ತೀರಿ. ಕೆಲವರಲ್ಲಿ ಸಂಪೂರ್ಣ ಕೂದಲು ಉದುರುವುದು ಆರಂಭವಾಗುತ್ತದೆ.

ಇದಕ್ಕೆ ಪರೀಕ್ಷೆ ಮತ್ತು ಚಿಕಿತ್ಸೆ ಹೇಗೆ?

ಚರ್ಮರೋಗ ತಜ್ಞರು ವ್ಯಕ್ತಿಯು ಈ ಸಮಸ್ಯೆಯಿಂದ ಬಳಲುತ್ತಿದ್ದಾನೆಯೇ ಇಲ್ಲವೇ ಎಂದು ಪರಿಸ್ಥಿತಿಗೆ ಅನುಗುಣವಾಗಿ ರಕ್ತ ಪರೀಕ್ಷೆ ಅಥವಾ ಬಯಾಪ್ಸಿ ಮೂಲಕ ಪತ್ತೆಮಾಡುತ್ತಾರೆ. ಇಲ್ಲಿಯವರೆಗೆ ಈ ಸಮಸ್ಯೆಗೆ ನಿಖರ ಔಷಧ ಕಂಡುಹಿಡಿದಿಲ್ಲ. ಅದಾಗ್ಯೂ ರೋಗಿಯ ಕೂದಲು ಉದುರುವಿಕೆಯನ್ನು ಕಡಿಮೆ ಮಾಡುವ ಕೆಲವು ಔಷಧಗಳು ಮತ್ತು ಲೋಷನ್​ಗಳನ್ನು ವೈದ್ಯರು ಶಿಫಾರಸು ಮಾಡಬಹುದು. ಅಲ್ಲದೆ ದೇಹದ ರೋಗನಿರೋಧಕ ಶಕ್ತಿ ವೃದ್ಧಿಸುವಂತ ಕೆಲವು ಔಷಧ ಕೊಡಬಹುದು.

ಇದನ್ನೂ ಓದಿ: Oscar: ಆಸ್ಕರ್ ಮತ್ತು ನೊಬೆಲ್ ಪ್ರಶಸ್ತಿ ಎರಡನ್ನೂ ಪಡೆದ ವಿಶ್ವದ ಇಬ್ಬರೇ ವ್ಯಕ್ತಿಗಳು ಇವರು! ಇಲ್ಲಿದೆ ಮಾಹಿತಿ

ಇದನ್ನೂ ಓದಿ: Oscars 2022 Winners: ವಿಲ್​ ಸ್ಮಿತ್​ಗೆ ಅತ್ಯುತ್ತಮ ನಟ ಆಸ್ಕರ್​ ಪ್ರಶಸ್ತಿ; ‘ಕೋಡಾ’ ಅತ್ಯುತ್ತಮ ಸಿನಿಮಾ

Published On - 9:09 pm, Mon, 28 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!