AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paneer In Diabetes: ಮಧುಮೇಹಿಗಳು ಪನೀರ್ ಏಕೆ ತಿನ್ನಬೇಕು, ಕುತೂಹಲಕರ ಸಂಗತಿಗಳು ಇಲ್ಲಿವೆ

ಮಧುಮೇಹವು ಒಮ್ಮೆ ದೇಹವನ್ನು ಆವರಿಸಿಕೊಂಡ ಬಳಿಕ ಸಂಪೂರ್ಣವಾಗಿ ಅದನ್ನು ಕಡಿಮೆ ಮಾಡುವುದು ಕಷ್ಟ ಆದರೆ ನಿಯಂತ್ರಿಸಬಹುದು. ಇದರಲ್ಲಿ ನೀವು ತೆಗೆದುಕೊಳ್ಳುವ ಆಹಾರವು ಪ್ರಮುಖ ಪಾತ್ರವಹಿಸುತ್ತದೆ.

Paneer In Diabetes: ಮಧುಮೇಹಿಗಳು ಪನೀರ್ ಏಕೆ ತಿನ್ನಬೇಕು, ಕುತೂಹಲಕರ ಸಂಗತಿಗಳು ಇಲ್ಲಿವೆ
ಪನೀರ್
TV9 Web
| Edited By: |

Updated on: Jan 05, 2023 | 12:34 PM

Share

ಮಧುಮೇಹವು ಒಮ್ಮೆ ದೇಹವನ್ನು ಆವರಿಸಿಕೊಂಡ ಬಳಿಕ ಸಂಪೂರ್ಣವಾಗಿ ಅದನ್ನು ಕಡಿಮೆ ಮಾಡುವುದು ಕಷ್ಟ ಆದರೆ ನಿಯಂತ್ರಿಸಬಹುದು. ಇದರಲ್ಲಿ ನೀವು ತೆಗೆದುಕೊಳ್ಳುವ ಆಹಾರವು ಪ್ರಮುಖ ಪಾತ್ರವಹಿಸುತ್ತದೆ.ಏಕೆಂದರೆ ಇದರಲ್ಲಿ ನೀವು ಸೇವಿಸುವ ಪ್ರತಿಯೊಂದೂ ರಕ್ತಕ್ಕೆ ಸಕ್ಕರೆಯನ್ನು ಸೇರಿಸುತ್ತದೆ ಮತ್ತು ಮಧುಮೇಹವನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಈ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರವನ್ನು ನಿಯಂತ್ರಿಸುವುದು ಮತ್ತು ಕಾರ್ಬೋಹೈಡ್ರೇಟ್‌ಗಳ ಪ್ರಮಾಣವು ಕಡಿಮೆ ಇರುವಂತಹ ಆಹಾರವನ್ನು ಸೇರಿಸುವುದು ಮುಖ್ಯ. ಪನೀರ್ ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ. ಇದರ ಸೇವನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.

ಮಧುಮೇಹಿಗಳು ಪನೀರ್ ಏಕೆ ತಿನ್ನಬೇಕು? ಪನೀರ್ ಕಡಿಮೆ ಜಿಐ ಇರುವುದರಿಂದ ಮಧುಮೇಹಿಗಳಿಗೆ ಆರೋಗ್ಯಕರ ಆಹಾರ ಆಯ್ಕೆಯಾಗಿದೆ. ಕಾರ್ಬೋಹೈಡ್ರೇಟ್‌ಗಳು ಕಡಿಮೆಯಾಗಿರುವುದರಿಂದ, ಪನೀರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಇದ್ದಕ್ಕಿದ್ದಂತೆ ಹೆಚ್ಚಿಸುವುದಿಲ್ಲ. ಇತ್ತೀಚಿನ ಅಧ್ಯಯನವು ಪನೀರ್ ಸೇವನೆಯು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತೋರಿಸಿದೆ.

ಪನೀರ್ ಪ್ರೋಟೀನ್‌ಗಳು ಮತ್ತು ವಿವಿಧ ಸೂಕ್ಷ್ಮ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ, ಇದು ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದಲ್ಲದೆ, ಪನೀರ್ ಮೂಳೆ ಮತ್ತು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಕ್ರಿಯೆಗೂ ಸಹಾಯ ಮಾಡುತ್ತದೆ.

ಮಧುಮೇಹ ರೋಗಿಗಳು ಯಾವಾಗ ಮತ್ತು ಎಷ್ಟು ಪನೀರ್ ತಿನ್ನಬೇಕು? ಮಧುಮೇಹಿಗಳು ದಿನದಲ್ಲಿ ಅಥವಾ ರಾತ್ರಿಯ ಊಟದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಅವರು ದಿನಕ್ಕೆ 80 ರಿಂದ 100 ಗ್ರಾಂ ಪನೀರ್ ತಿನ್ನಬಹುದು.

ಪನೀರ್ ತಿನ್ನುವುದು ಹೇಗೆ? ಮಧುಮೇಹಿಗಳಿಗೆ ಪನೀರ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪನೀರ್ ಅನ್ನು ಕಚ್ಚಾ ಮತ್ತು ಬೇಯಿಸಿದ ರೂಪದಲ್ಲಿ ಸೇವಿಸಬಹುದು. ಆದರೆ, ಹಸಿ ಪನೀರ್‌ನಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುವುದರಿಂದ ಮಧುಮೇಹಿಗಳಿಗೆ ಇದು ಹೆಚ್ಚು ಪ್ರಯೋಜನಕಾರಿ. ಇದಲ್ಲದೆ, ಪನೀರ್ ಅನ್ನು ಪ್ರತ್ಯೇಕ ಭಕ್ಷ್ಯವಾಗಿಯೂ ತಿನ್ನಬಹುದು. ಪನೀರ್ ಅನ್ನು ತರಕಾರಿಗಳು ಮತ್ತು ತಿಂಡಿಗಳ ರೂಪದಲ್ಲಿಯೂ ಸೇವಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?