AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Benefits: ಪಪ್ಪಾಯಿ ಹಣ್ಣು ತಿನ್ನುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆಯನ್ನು ನಿವಾರಿಸಬಹುದು

ಎಲ್ಲಾ ಹಣ್ಣುಗಳು ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಪ್ರಯೋಜನವನ್ನು ನೀಡುತ್ತವೆ. ಹಾಗೆಯೇ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಹೊಟ್ಟೆ ಉಬ್ಬರದ ಸಮಸ್ಯೆಯನ್ನು ಕಡಿಮೆ ಮಾಡಬಹುದು.

Papaya Benefits: ಪಪ್ಪಾಯಿ ಹಣ್ಣು ತಿನ್ನುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆಯನ್ನು ನಿವಾರಿಸಬಹುದು
Papaya
TV9 Web
| Edited By: |

Updated on: Aug 10, 2022 | 1:19 PM

Share

ಎಲ್ಲಾ ಹಣ್ಣುಗಳು ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಪ್ರಯೋಜನವನ್ನು ನೀಡುತ್ತವೆ. ಹಾಗೆಯೇ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಹೊಟ್ಟೆ ಉಬ್ಬರದ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಪಪ್ಪಾಯಿ ಕೂಡ ರುಚಿ ಮತ್ತು ಪೌಷ್ಟಿಕಾಂಶ ಎರಡರಲ್ಲೂ ಅಗ್ರಸ್ಥಾನದಲ್ಲಿರುವ ಹಣ್ಣುಗಳಲ್ಲಿ ಒಂದು ಎಂದು ಹೇಳಬಹುದು.

ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿಂದರೆ ದೇಹಕ್ಕೆ ಹೆಚ್ಚಿನ ಪ್ರಯೋಜನಗಳಾಗಬಹುದು. ಮಧುಮೇಹದಿಂದ ಬಳಲುತ್ತಿರುವರು ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನಬೇಕು. ಇದರಲ್ಲಿ ನೈಸರ್ಗಿಕ ಸಕ್ಕರೆ ಇದೆ ಮತ್ತು ಇದರ ಆಂಟಿ ಆಕ್ಸಿಡೆಂಟ್ ಗುಣದಿಂದಾಗಿ, ಇದು ಸಕ್ಕರೆ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ.

ಇದು ದೇಹದ ಮೇಲೆ ಹೈಪೋಗ್ಲೈಸೆಮಿಕ್ ಪರಿಣಾಮವನ್ನು ಬೀರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಪಪ್ಪಾಯಿಯಲ್ಲಿ ಕಡಿಮೆ ಕ್ಯಾಲೋರಿಗಳು ಮತ್ತು ಫೈಬರ್ ಅಂಶ ಅಧಿಕವಾಗಿರುತ್ತದೆ. ಇದೇ ಕಾರಣಕ್ಕೆ ಇದು ತೂಕವನ್ನು ಕಡಿಮೆ ಮಾಡಲು ನೆರವಾಗುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಸಹ ನಿಯಂತ್ರಿಸುತ್ತದೆ.

ಜೀರ್ಣಕ್ರಿಯೆ ಸರಿಯಾಗಿರುವುದಿಲ್ಲ ಎಂದು ಹೇಳುವ ಜನರು ದಿನನಿತ್ಯ ಪಪ್ಪಾಯಿ ತಿನ್ನುವುದು ಅತ್ಯಗತ್ಯ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ಆಹಾರವನ್ನು ವೇಗವಾಗಿ ಚಯಾಪಚಯಗೊಳಿಸಲು ಸಹಾಯ ಮಾಡುತ್ತದೆ.

ಪಪ್ಪಾಯಿಯಲ್ಲಿ ಪಪಿನ್ ಎಂಬ ಕಿಣ್ವವಿದೆ, ಇದು ಆಹಾರವನ್ನು ವೇಗವಾಗಿ ಒಡೆಯಲು ಸಹಾಯ ಮಾಡುತ್ತದೆ. ಇದಲ್ಲದೆ, ಪಪ್ಪಾಯಿ ಹೆಚ್ಚಿನ ನೀರಿನ ಅಂಶವನ್ನು ಹೊಂದಿದೆ, ಇದು ಮಲಬದ್ಧತೆಯ ಅಪಾಯವನ್ನು ತಡೆಯುತ್ತದೆ.

ಹೊಟ್ಟೆ ಉಬ್ಬರದ ನಿಯಂತ್ರಣಕ್ಕೆ ಸಹಾಯ ಮಾಡುವ ತರಕಾರಿಗಳು

ಸೌತೆಕಾಯಿ: ಈ ತರಕಾರಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಇರುತ್ತದೆ, ಇದು ಹೊಟ್ಟೆ ಉಬ್ಬರವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ಕಾರಣದಿಂದ, ಸೌತೆಕಾಯಿಯು ದೇಹವನ್ನು ತೇವವಾಗಿಡಲು ಸಹಾಯ ಮಾಡುತ್ತದೆ.

ಮೊಸರು: ಮೊಸರಿನಲ್ಲಿ ಪ್ರೋಬಯಾಟಿಕ್‌ಗಳಿದ್ದು, ಇದು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪ್ರೋಬಯಾಟಿಕ್‌ಗಳು ಉಬ್ಬಸ ಮತ್ತು ಅಜೀರ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಾಳೆಹಣ್ಣು: ಇದರಲ್ಲಿ ನಾರಿನಂಶ ಹೆಚ್ಚಿದ್ದು ಹೊಟ್ಟೆ ಉಬ್ಬರಕ್ಕೆ ಸಹಾಯ ಮಾಡುತ್ತದೆ. ಇದರೊಂದಿಗೆ, ಇದರಲ್ಲಿ ಪೊಟ್ಯಾಸಿಯಮ್ ಕೂಡ ಇದೆ, ಇದು ದೇಹದಲ್ಲಿ ದ್ರವದ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅದು ಉಬ್ಬುವಿಕೆಯನ್ನು ನಿವಾರಿಸುತ್ತದೆ.

ಪಪ್ಪಾಯಿ: ಇದರಲ್ಲಿ ಮತ್ತೆ ನೀರಿನಂಶ ಮತ್ತು ನಾರಿನಂಶ ಅಧಿಕವಾಗಿದ್ದು ಉಬ್ಬುವಿಕೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ