AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಹಣ್ಣು ಸವಿಯಲು ಇಷ್ಟಾನಾ? ಮಧುಮೇಹ ಸಮಸ್ಯೆಯಿಂದ ಪರಿಹಾರ ಪಡೆಯಲು ಉತ್ತಮ ಮಾರ್ಗ

ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ನಿರ್ವಹಿಸಿದರೆ ಮಧುಮೇಹಿಗಳಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ನಿಮ್ಮ ಆಹಾರ ಕ್ರಮ ಬದಲಾಗಬೇಕಿದೆ.

ಪಪ್ಪಾಯಿ ಹಣ್ಣು ಸವಿಯಲು ಇಷ್ಟಾನಾ? ಮಧುಮೇಹ ಸಮಸ್ಯೆಯಿಂದ ಪರಿಹಾರ ಪಡೆಯಲು ಉತ್ತಮ ಮಾರ್ಗ
ಪಪ್ಪಾಯಿ ಹಣ್ಣು
TV9 Web
| Updated By: ಆಯೇಷಾ ಬಾನು|

Updated on:Aug 02, 2021 | 7:27 AM

Share

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಆಹಾರ ಮತ್ತು ಜೀವನ ಶೈಲಿಯ ಬಗ್ಗೆ ಹೆಚ್ಚು ಗಮನವಹಿಸಬೇಕಾಗುತ್ತದೆ. ಅಧಿಕ ಸಕ್ಕರೆ ಅಂಶವನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಸೇವಿಸದಿರುವುದು ಉತ್ತಮ. ಹಾಗಿರುವಾಗ ಪಪ್ಪಾಯಿ ಹಣ್ಣು ಮಧುಮೇಹಿಗಳಿಗೆ ಉತ್ತಮ ಔಷಧವಾಗಿದೆ. ಇದರ ಸೇವನೆಯಿಂದ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯಾಗುತ್ತದೆ. ದೇಹದಲ್ಲಿ ಇನ್ಸುಲಿನ್ ಬಹಳ ಮುಖ್ಯ. ಗ್ಲೂಕೋಸ್ಅನ್ನು ಆಹಾರದ ಮೂಲಕ ಜೀವಕೋಶಗಳಿಗೆ ಸಾಗಿಸಲು ಸಹಾಯ ಮಾಡುತ್ತದೆ. ಇದು ನಮ್ಮ ದೇಹಕ್ಕೆ ಶಕ್ತಿಯನ್ನು ಬಿಡುಗಡೆ ಮಾಡುತ್ತದೆ. ದೇಹದಲ್ಲಿನ ಇನ್ಸುಲಿನ್ ಸೂಕ್ಷ್ಮತೆಯಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗುವ ಸಾಧ್ಯತೆಗಳಿರುತ್ತದೆ.

ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ನಿರ್ವಹಿಸಿದರೆ ಮಧುಮೇಹಿಗಳಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ನಿಮ್ಮ ಆಹಾರ ಕ್ರಮ ಬದಲಾಗಬೇಕಿದೆ. ಪ್ರತಿನಿತ್ಯ ವ್ಯಾಯಾಮದ ಮೂಲಕ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಪಪ್ಪಾಯಿ ಹಣ್ಣಿನಲ್ಲಿ ಜೀವಸತ್ವಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಸಮೃದ್ಧವಾಗಿರುತ್ತದೆ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ. ಪಪ್ಪಾಯವು ಫ್ಲೇವೊನೈಡ್​ಗಳನ್ನು ಹೊಂದಿರುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಒಂದು ಅಥವಾ ಎರಡು ಹಣ್ಣನ್ನು ಸೇವಿಸುವ ಪದ್ಧತಿಯಿರಲಿ ಅಷ್ಟೆ. ಅತಿಯಾದರೆ ಅಮೃತವೂ ವಿಷ ಎಂಬ ಮಾತನಂತೆ ಹೆಚ್ಚಾಗಿ ಪಪ್ಪಾಯಿ ಹಣ್ಣನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ನಿಮ್ಮ ಆರೋಗ್ಯದಲ್ಲಿ ತಾಜಾ ಹಣ್ಣು ಮತ್ತು ತರಕಾರಿಗಳ ಸೇವನೆ ಇರಲಿ. ಏನೇ ಏರು ಪೇರು ಉಂಟಾದರೂ ಹತ್ತಿರದ ವೈದ್ಯರಲ್ಲಿ ಸಲಹೆ ಪಡೆಯುವುದು ಉತ್ತಮ. ಆರೋಗ್ಯಕ್ಕೆ ಪ್ರಮುಖವಾಗಿ ಪೌಷ್ಟಿಕತೆ ಮುಖ್ಯ. ಹಾಗಾಗಿ ನಿಮ್ಮ ಆಹಾರ ಕ್ರಮ ಮತ್ತು ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Papaya: ಪಪ್ಪಾಯಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಹುದೇ?

Health Tips: ಈ 5 ಹಣ್ಣಿನ ಸಂಯೋಜನೆಗಳು ನಿಮ್ಮ ಆರೋಗ್ಯಕ್ಕೆ ಹಾನಿ ತರಬಹುದು! ಆರೋಗ್ಯದ ಕುರಿತು ಗಮನವಿರಲಿ

Published On - 7:26 am, Mon, 2 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ