AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Leaf Juice: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ

ಪಪ್ಪಾಯಿ ಹಣ್ಣು ಮಾತ್ರವಲ್ಲದೆ ಅದರ ಎಲೆಗಳು ಸಹ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಆಯುರ್ವೇದ ತಜ್ಞರ ಪ್ರಕಾರ ಪಪ್ಪಾಯಿ ಸಸ್ಯದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಆದ್ದರಿಂದ ಇದನ್ನು ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಹಾಗಾದರೆ ಪಪ್ಪಾಯಿ ಎಲೆಯ, ರಸವನ್ನು ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Papaya Leaf Juice: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 10, 2024 | 11:45 AM

Share

ಪಪ್ಪಾಯಿ ಹಣ್ಣು ಎಲ್ಲಾ ಋತುಗಳಲ್ಲಿ ಸಾಮಾನ್ಯವಾಗಿ ಲಭ್ಯವಿರುತ್ತದೆ. ಈ ರುಚಿಕರವಾದ ಹಣ್ಣಿನಲ್ಲಿ ಅನೇಕ ಔಷಧೀಯ ಗುಣಗಳು ಮತ್ತು ಪೋಷಕಾಂಶಗಳು ಅಡಗಿವೆ. ಇದು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಪಪ್ಪಾಯಿ ಹಣ್ಣು ಮಾತ್ರವಲ್ಲ, ಅದರ ಎಲೆಗಳು ಸಹ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಪಪ್ಪಾಯಿ ಸಸ್ಯದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇವುಗಳನ್ನು ಆಯುರ್ವೇದದಲ್ಲಿಯೂ ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಹಾಗಾದರೆ ಪಪ್ಪಾಯಿ ಎಲೆಯ, ರಸವನ್ನು ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪಪ್ಪಾಯಿ ಎಲೆಯ ರಸ ಕುಡಿಯುವುದರಿಂದ ಆಗುವ ಪ್ರಯೋಜನಗಳು;

  • ಪಪ್ಪಾಯಿಯಲ್ಲಿ ಪೋಷಕಾಂಶಗಳು, ಫೈಬರ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ವಿಟಮಿನ್ ಇ ಸಮೃದ್ಧವಾಗಿದೆ. ಇದರಲ್ಲಿರುವ ಫೋಲಿಕ್ ಆಮ್ಲವು ದೇಹದಲ್ಲಿನ ಕೆಟ್ಟ ಅಮೈನೋ ಆಮ್ಲಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಡೆಂಗ್ಯೂನಿಂದ ಜ್ವರ ಹೆಚ್ಚಾದಾಗ ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದು ತುಂಬಾ ಒಳ್ಳೆಯದು. ಅಲ್ಲದೆ ಇದು ರಕ್ತದಲ್ಲಿ ಪ್ಲೇಟ್ಲೆಟ್ಗಳನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ.
  • ಪಪ್ಪಾಯಿಯಂತೆ, ಇದರ ಎಲೆಯ ರಸವೂ ಕೂಡ ಜೀರ್ಣಕ್ರಿಯೆಗೆ ಬಹಳ ಒಳ್ಳೆಯದು. ಅಲ್ಲದೆ ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಮತ್ತು ಫೈಬರ್ ಇರುವುದರಿಂದ, ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ತುಂಬಾ ಸಹಾಯಕವಾಗಿವೆ.
  • ಪಪ್ಪಾಯಿ ಎಲೆಯ ರಸದಲ್ಲಿರುವ ಕಿಣ್ವಗಳು ಉರಿಯೂತವನ್ನು ಕಡಿಮೆ ಮಾಡುತ್ತವೆ.
  • ಈ ರಸದಲ್ಲಿ ಪಪೈನ್ ಕಡಿಮೆ ಇದ್ದು. ಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದನ್ನು ಕುಡಿಯುವುದರಿಂದ ಫ್ರೀ ರಾಡಿಕಲ್ಗಳ ಅಪಾಯವನ್ನು ಕಡಿಮೆ ಮಾಡಬಹುದು.
  • ಜ್ಯೂಸ್ ಮಾಡುವ ಮೊದಲು ತಾಜಾ ಪಪ್ಪಾಯಿ ಎಲೆಗಳನ್ನು ತೊಳೆದು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ, ನಂತರ ಅದನ್ನು ಸೋಸಿ ಕುಡಿಯಿರಿ. (ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಬೇಡಿ) ಅದನ್ನು ಮಿತವಾಗಿ ಮಾತ್ರ ಬಳಸಿ.

(ಸೂಚನೆ: ಇಲ್ಲಿ ನೀಡಲಾದ ಆರೋಗ್ಯ ಮಾಹಿತಿಗಳನ್ನು ಅನುಸರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ