AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Papaya Seeds: ಪಪ್ಪಾಯಿ ಬೀಜದ ನೀರನ್ನು ಕುಡಿಯಿರಿ, ಆರೋಗ್ಯವಾಗಿರಿ

ನೀವು ಎಂದಾದರೂ ಪಪ್ಪಾಯಿ ಬೀಜಗಳನ್ನು ನೀರಿನಲ್ಲಿ ನೆನೆಸಿ ಕುಡಿದಿದ್ದೀರಾ? ಇದು ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಡಿಟಾಕ್ಸ್ ಪಾನೀಯವಾಗಿದೆ. ಈ ಬೀಜಗಳಲ್ಲಿ ಫೈಬರ್ ಮತ್ತು ಕಿಣ್ವಗಳು ಅಧಿಕವಾಗಿವೆ. ಆದ್ದರಿಂದ, ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ. ಜೊತೆಗೆ ಮಲಬದ್ಧತೆ ಸಮಸ್ಯೆಗಳಿದ್ದರೆ ಅದನ್ನು ತಡೆಯುತ್ತದೆ.

Papaya Seeds: ಪಪ್ಪಾಯಿ ಬೀಜದ ನೀರನ್ನು ಕುಡಿಯಿರಿ, ಆರೋಗ್ಯವಾಗಿರಿ
Papaya seed water
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 09, 2024 | 10:33 AM

Share

ಪಪ್ಪಾಯಿ ಹಣ್ಣಿನ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಈ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಈ ಬೀಜಗಳನ್ನು ನೆನೆಸಿ ಬೆಳಿಗ್ಗೆ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ನೀವು ಎಂದಾದರೂ ಪಪ್ಪಾಯಿ ಬೀಜಗಳನ್ನು ನೀರಿನಲ್ಲಿ ನೆನೆಸಿ ಕುಡಿದಿದ್ದೀರಾ? ಇದು ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಡಿಟಾಕ್ಸ್ ಪಾನೀಯವಾಗಿದೆ. ಈ ಬೀಜಗಳಲ್ಲಿ ಫೈಬರ್ ಮತ್ತು ಕಿಣ್ವಗಳು ಅಧಿಕವಾಗಿವೆ. ಆದ್ದರಿಂದ, ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ. ಜೊತೆಗೆ ಮಲಬದ್ಧತೆ ಸಮಸ್ಯೆಗಳಿದ್ದರೆ ಅದನ್ನು ತಡೆಯುತ್ತದೆ.

ಪಿತ್ತಜನಕಾಂಗದ ಸಮಸ್ಯೆ ಇರುವವರಿಗೆ ಒಳ್ಳೆಯದು:

ಪಪ್ಪಾಯಿ ಬೀಜಗಳನ್ನು ಜಗಿದು ತಿನ್ನುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಪಪ್ಪಾಯಿ ಬೀಜದ ನೀರಿನಲ್ಲಿ ಪಪೈನ್ ನಂತಹ ಕಿಣ್ವಗಳಿವೆ. ಇವು ದೇಹದಿಂದ ವಿಷವನ್ನು ಪರಿಣಾಮಕಾರಿಯಾಗಿ ಹೊರಹಾಕಲು ಸಹಾಯ ಮಾಡುತ್ತವೆ. ಜೊತೆಗೆ ಇಡೀ ದೇಹವನ್ನು ಶುದ್ಧೀಕರಿಸುತ್ತದೆ. ಆದ್ದರಿಂದ ಪಿತ್ತಜನಕಾಂಗದ ಸಮಸ್ಯೆ ಇರುವವರು ತಮ್ಮ ದಿನವನ್ನು ಒಂದು ಲೋಟ ಪಪ್ಪಾಯಿ ಬೀಜ ನೆನೆಸಿದ ನೀರನ್ನು ಕುಡಿಯುವ ಮೂಲಕ ಪ್ರಾರಂಭಿಸಿ.

ಇದನ್ನು ಉಪಾಹಾರದ ಜೊತೆಗೆ ಸೇವಿಸುವುದು ರೋಗನಿರೋಧಕ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಬೀಜದ ನೀರು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಸೇರಿದಂತೆ ಜೀವಸತ್ವಗಳಿಂದ ಸಮೃದ್ಧವಾಗಿರುವ ನೈಸರ್ಗಿಕ ಪಾನೀಯವಾಗಿದೆ. ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಅಲ್ಲದೆ ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿನ್ನಿ, ಮೂತ್ರಪಿಂಡದ ಕಲ್ಲು ಕರಗುತ್ತವೆ!

ಯಾವ ರೀತಿ ಸೇವನೆ ಮಾಡಬೇಕು?

ಈ ಆರೋಗ್ಯಕರ ಡಿಟಾಕ್ಸ್ ಪಾನೀಯವು ಹಸಿವನ್ನು ಕಡಿಮೆ ಮಾಡಿ, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಅಲ್ಲದೆ ಪಪ್ಪಾಯಿ ಬೀಜಗಳು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದಕ್ಕಾಗಿ ಮಾಗಿದ ಪಪ್ಪಾಯಿಯಿಂದ ಬೀಜಗಳನ್ನು ತೆಗೆದುಕೊಂಡು, ಚೆನ್ನಾಗಿ ತೊಳೆದು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ನೀರನ್ನು ಫಿಲ್ಟರ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್