Papaya Seeds: ಪಪ್ಪಾಯಿ ಬೀಜದ ನೀರನ್ನು ಕುಡಿಯಿರಿ, ಆರೋಗ್ಯವಾಗಿರಿ

ನೀವು ಎಂದಾದರೂ ಪಪ್ಪಾಯಿ ಬೀಜಗಳನ್ನು ನೀರಿನಲ್ಲಿ ನೆನೆಸಿ ಕುಡಿದಿದ್ದೀರಾ? ಇದು ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಡಿಟಾಕ್ಸ್ ಪಾನೀಯವಾಗಿದೆ. ಈ ಬೀಜಗಳಲ್ಲಿ ಫೈಬರ್ ಮತ್ತು ಕಿಣ್ವಗಳು ಅಧಿಕವಾಗಿವೆ. ಆದ್ದರಿಂದ, ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ. ಜೊತೆಗೆ ಮಲಬದ್ಧತೆ ಸಮಸ್ಯೆಗಳಿದ್ದರೆ ಅದನ್ನು ತಡೆಯುತ್ತದೆ.

Papaya Seeds: ಪಪ್ಪಾಯಿ ಬೀಜದ ನೀರನ್ನು ಕುಡಿಯಿರಿ, ಆರೋಗ್ಯವಾಗಿರಿ
Papaya seed water
Follow us
| Updated By: ಅಕ್ಷತಾ ವರ್ಕಾಡಿ

Updated on: Jun 09, 2024 | 10:33 AM

ಪಪ್ಪಾಯಿ ಹಣ್ಣಿನ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಈ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಈ ಬೀಜಗಳನ್ನು ನೆನೆಸಿ ಬೆಳಿಗ್ಗೆ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ನೀವು ಎಂದಾದರೂ ಪಪ್ಪಾಯಿ ಬೀಜಗಳನ್ನು ನೀರಿನಲ್ಲಿ ನೆನೆಸಿ ಕುಡಿದಿದ್ದೀರಾ? ಇದು ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ ಡಿಟಾಕ್ಸ್ ಪಾನೀಯವಾಗಿದೆ. ಈ ಬೀಜಗಳಲ್ಲಿ ಫೈಬರ್ ಮತ್ತು ಕಿಣ್ವಗಳು ಅಧಿಕವಾಗಿವೆ. ಆದ್ದರಿಂದ, ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ. ಜೊತೆಗೆ ಮಲಬದ್ಧತೆ ಸಮಸ್ಯೆಗಳಿದ್ದರೆ ಅದನ್ನು ತಡೆಯುತ್ತದೆ.

ಪಿತ್ತಜನಕಾಂಗದ ಸಮಸ್ಯೆ ಇರುವವರಿಗೆ ಒಳ್ಳೆಯದು:

ಪಪ್ಪಾಯಿ ಬೀಜಗಳನ್ನು ಜಗಿದು ತಿನ್ನುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಪಪ್ಪಾಯಿ ಬೀಜದ ನೀರಿನಲ್ಲಿ ಪಪೈನ್ ನಂತಹ ಕಿಣ್ವಗಳಿವೆ. ಇವು ದೇಹದಿಂದ ವಿಷವನ್ನು ಪರಿಣಾಮಕಾರಿಯಾಗಿ ಹೊರಹಾಕಲು ಸಹಾಯ ಮಾಡುತ್ತವೆ. ಜೊತೆಗೆ ಇಡೀ ದೇಹವನ್ನು ಶುದ್ಧೀಕರಿಸುತ್ತದೆ. ಆದ್ದರಿಂದ ಪಿತ್ತಜನಕಾಂಗದ ಸಮಸ್ಯೆ ಇರುವವರು ತಮ್ಮ ದಿನವನ್ನು ಒಂದು ಲೋಟ ಪಪ್ಪಾಯಿ ಬೀಜ ನೆನೆಸಿದ ನೀರನ್ನು ಕುಡಿಯುವ ಮೂಲಕ ಪ್ರಾರಂಭಿಸಿ.

ಇದನ್ನು ಉಪಾಹಾರದ ಜೊತೆಗೆ ಸೇವಿಸುವುದು ರೋಗನಿರೋಧಕ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಪಪ್ಪಾಯಿ ಬೀಜದ ನೀರು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಸೇರಿದಂತೆ ಜೀವಸತ್ವಗಳಿಂದ ಸಮೃದ್ಧವಾಗಿರುವ ನೈಸರ್ಗಿಕ ಪಾನೀಯವಾಗಿದೆ. ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಅಲ್ಲದೆ ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿನ್ನಿ, ಮೂತ್ರಪಿಂಡದ ಕಲ್ಲು ಕರಗುತ್ತವೆ!

ಯಾವ ರೀತಿ ಸೇವನೆ ಮಾಡಬೇಕು?

ಈ ಆರೋಗ್ಯಕರ ಡಿಟಾಕ್ಸ್ ಪಾನೀಯವು ಹಸಿವನ್ನು ಕಡಿಮೆ ಮಾಡಿ, ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಅಲ್ಲದೆ ಪಪ್ಪಾಯಿ ಬೀಜಗಳು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದಕ್ಕಾಗಿ ಮಾಗಿದ ಪಪ್ಪಾಯಿಯಿಂದ ಬೀಜಗಳನ್ನು ತೆಗೆದುಕೊಂಡು, ಚೆನ್ನಾಗಿ ತೊಳೆದು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ನೀರನ್ನು ಫಿಲ್ಟರ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ