ಜನರು ತಾವಾಗಿಯೇ ರೆಮ್‌ಡೆಸಿವಿರ್ ಕೊಳ್ಳಬಾರದು, ಕೃತಕ ಉಸಿರಾಟ ಹೊಂದಿದ ರೋಗಿಗಳಿಗೆ ವೈದ್ಯರು ನೀಡುವ ಔಷಧಿ ಅದು: ಡಾ. ವಿ.ಕೆ.ಪೌಲ್

ರೆಮ್‌ಡೆಸಿವಿರ್ ಔಷಧವನ್ನು ಆಕ್ಸಿಜನ್ ಸಪೋರ್ಟ್‌ನಲ್ಲಿರುವ ಸೋಂಕಿತರಿಗೆ ಬಳಸಬೇಕು. ಅದೊಂದು ಪ್ರಯೋಗಾತ್ಮಕ ಔಷಧಿಯಾಗಿದ್ದು, ಸೋಂಕಿತರು ತಾವಾಗಿಯೇ ಖರೀದಿಸಿ ಮನೆಯಲ್ಲಿ ಬಳಕೆ ಮಾಡಲು ಮುಂದಾಗಕೂಡದು.

ಜನರು ತಾವಾಗಿಯೇ ರೆಮ್‌ಡೆಸಿವಿರ್ ಕೊಳ್ಳಬಾರದು, ಕೃತಕ ಉಸಿರಾಟ ಹೊಂದಿದ ರೋಗಿಗಳಿಗೆ ವೈದ್ಯರು ನೀಡುವ ಔಷಧಿ ಅದು: ಡಾ. ವಿ.ಕೆ.ಪೌಲ್
ಡಾ. ವಿ.ಕೆ.ಪೌಲ್​
Follow us
|

Updated on:Apr 14, 2021 | 2:13 PM

ದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಲಸಿಕೆ ಬಳಕೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿವೆ. ಕೊರೊನಾ ಎರಡನೇ ಅಲೆ ಸೋಂಕಿನಿಂದ ಜನರನ್ನು ಪಾರು ಮಾಡಲು ಲಸಿಕೆಯೂ ಒಂದು ಪ್ರಮುಖ ಅಸ್ತ್ರವಾಗಿದ್ದು, ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರಲಿದೆ ಹಾಗೂ ವೈರಾಣುವಿನಿಂದ ಉಂಟಾಗಬಹುದಾದ ಅಡ್ಡಪರಿಣಾಮಗಳೂ ಕಡಿಮೆಯಾಗಲಿದೆ ಎಂಬ ಅಭಿಪ್ರಾಯಗಳನ್ನು ಅನೇಕ ತಜ್ಞರು ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ, ರೆಮ್‌ಡೆಸಿವಿರ್ ಔಷಧ ಬಳಕೆ ಬಗ್ಗೆಯೂ ಮಾತುಗಳು ಕೇಳಿ ಬರುತ್ತಿದ್ದು, ಇದನ್ನು ಬಳಸುವುದರಿಂದ ಸೋಂಕಿತರು ಉಸಿರಾಟದ ಸಮಸ್ಯೆಗೆ ತುತ್ತಾಗುವುದನ್ನು ತಪ್ಪಿಸಬಹುದು ಎಂಬ ಅಭಿಪ್ರಾಯವಿದೆ. ಆದರೆ, ಈ ಬಗ್ಗೆ ಎಚ್ಚರಿಕೆ ನೀಡಿರುವ ನೀತಿ‌ ಆಯೋಗದ ಸದಸ್ಯ ಡಾಕ್ಟರ್ ವಿ.ಕೆ.ಪೌಲ್, ರೆಮ್‌ಡೆಸಿವಿರ್ ಔಷಧವನ್ನು ಮನೆಯಲ್ಲೇ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ರೆಮ್‌ಡೆಸಿವಿರ್ ಔಷಧವನ್ನು ಆಕ್ಸಿಜನ್ ಸಪೋರ್ಟ್‌ನಲ್ಲಿರುವ ಸೋಂಕಿತರಿಗೆ ಬಳಸಬೇಕು. ಅದೊಂದು ಪ್ರಯೋಗಾತ್ಮಕ ಔಷಧಿಯಾಗಿದ್ದು, ಸೋಂಕಿತರು ತಾವಾಗಿಯೇ ಖರೀದಿಸಿ ಮನೆಯಲ್ಲಿ ಬಳಕೆ ಮಾಡಲು ಮುಂದಾಗಕೂಡದು. ಕೊರೊನಾ ಸೋಂಕಿತರು ಮೆಡಿಕಲ್ ಸ್ಟೋರ್, ಔಷಧ ಉತ್ಪಾದನಾ ಕಂಪನಿಯಿಂದ ರೆಮ್‌ಡೆಸಿವಿರ್ ಕೊಂಡು ಸ್ವತಃ ಬಳಕೆ ಮಾಡಬಾರದು ಎಂದು ತಿಳಿಸಿದ್ದಾರೆ. ಅದೇನಿದ್ದರೂ ಆಸ್ಪತ್ರೆಯಲ್ಲಿ ಕೃತಕ ಉಸಿರಾಟದ ಸಹಾಯ ಪಡೆದ ರೋಗಿಗಳಿಗೆ ಬಳಸಬಹುದು. ಅದರ ಹೊರತಾಗಿ ಜನ ಸಾಮಾನ್ಯರು ಸ್ವಂತ ಉಪಯೋಗಕ್ಕಾಗಿ ಕೊಳ್ಳುವುದು ಸೂಕ್ತ ಅಲ್ಲವೇ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೆಮ್‌ಡೆಸಿವಿರ್ ಔಷಧ ಉತ್ಪಾದನೆ ಹೆಚ್ಚಿಸಲು ನಿರ್ಧಾರ ಕೊರೊನಾ ಸೋಂಕಿತರಿಗೆ ನೀಡಲಾಗುತ್ತಿರುವ ರೆಮ್​ಡೆಸಿವರ್​ ಔಷಧಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ, ಅದರ ಉತ್ಪಾದನೆಯನ್ನು 2 ಪಟ್ಟು ಹೆಚ್ಚಿಸಲು ಸಿಪ್ಲಾ ಸಂಸ್ಥೆ ನಿರ್ಧರಿಸಿದೆ. ದೇಶದಲ್ಲಿ ರೆಮ್‌ಡೆಸಿವಿರ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಹೆಚ್ಚು ಉತ್ಪಾದನೆ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ರೆಮ್​ಡೆಸಿವಿರ್ ಔಷಧ, ಇಂಜೆಕ್ಷನ್ ರಫ್ತು ನಿಷೇಧ: ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳ

(People should not use Remdesivir by their own it is meant to be used in Hospitals says Dr VK Paul)

Published On - 12:27 pm, Wed, 14 April 21

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್