AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rheumatoid Arthritis: ದೃಷ್ಟಿ ಸಮಸ್ಯೆ ಹೆಚ್ಚಾಗುತ್ತಿದ್ದರೆ ಈ ರೋಗದ ಲಕ್ಷಣ ಆಗಿರಬಹುದು ಎಚ್ಚರ!

ಸಂಧಿವಾತದಲ್ಲಿ ಸಾಮಾನ್ಯವಾಗಿ ಎರಡು ವಿಧಗಳಿವೆ. ಅಸ್ಥಿಸಂಧಿವಾತ, ರುಮಟಾಯ್ಡ್ ಸಂಧಿವಾತ. ನೀವು ಅಸ್ಥಿಸಂಧಿವಾತದಿಂದ ಬಳಲುತ್ತಿದ್ದರೆ, ನಿಮಗೆ ಕೀಲು ನೋವು ಮತ್ತು ಸ್ನಾಯು ನೋವು ಹೆಚ್ಚಾಗಿ ಕಂಡು ಬರುತ್ತದೆ. ಆದರೆ ರುಮಟಾಯ್ಡ್ ಸಂಧಿವಾತದಲ್ಲಿ ಹಾಗಲ್ಲ. ಇದರಲ್ಲಿ ಕೀಲು ಮತ್ತು ಸ್ನಾಯು ನೋವಿನ ಜೊತೆಗೆ, ದೇಹದಲ್ಲಿ ವಿವಿಧ ರೀತಿಯ ಸಮಸ್ಯೆಗಳು ಸಹ ಕಂಡು ಬರುತ್ತವೆ. ನಿಮ್ಮ ಶ್ವಾಸಕೋಶ ಮತ್ತು ಹೃದಯ ರಕ್ತನಾಳಗಳಲ್ಲಿ ಸಮಸ್ಯೆಗಳು ಉಂಟಾಗಬಹುದು. ಬರು ಬರುತ್ತಾ ಇದು ಕಣ್ಣಿನ ದೃಷ್ಟಿಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ ಇದರಿಂದ ದೃಷ್ಟಿ ಸಮಸ್ಯೆ ಹೆಚ್ಚಾಗುತ್ತದೆಯೇ? ಇದನ್ನು ತಡೆಯಲು ಸರಳವಾಗಿ ಮಾಡಬಹುದಾದ ಕೆಲಸಗಳೇನು? ಇಲ್ಲಿದೆ ಮಾಹಿತಿ.

Rheumatoid Arthritis: ದೃಷ್ಟಿ ಸಮಸ್ಯೆ ಹೆಚ್ಚಾಗುತ್ತಿದ್ದರೆ ಈ ರೋಗದ ಲಕ್ಷಣ ಆಗಿರಬಹುದು ಎಚ್ಚರ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 13, 2024 | 3:34 PM

Share

ಇತ್ತೀಚಿನ ದಿನಗಳಲ್ಲಿ ಸಂಧಿವಾತವು ಪ್ರತಿ ಮನೆಯಲ್ಲೂ ಹೆಚ್ಚಾಗುತ್ತಿದ್ದು, ಸಾಮಾನ್ಯ ಸಮಸ್ಯೆಯಾಗಿದೆ. ವಯಸ್ಸಾದಂತೆ ದೇಹದಲ್ಲಿ ಬೇರೂರುವ ರೋಗಗಳಲ್ಲಿ ಇದು ಒಂದಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಕೇವಲ ವಯಸ್ಸಾದವರಲ್ಲಿ ಮಾತ್ರವಲ್ಲದೆ ಮಕ್ಕಳಲ್ಲಿಯೂ ಕಂಡುಬರುತ್ತಿದೆ. ಸಂಧಿವಾತದಲ್ಲಿ ಸಾಮಾನ್ಯವಾಗಿ ಎರಡು ವಿಧಗಳಿವೆ. ಅಸ್ಥಿಸಂಧಿವಾತ, ರುಮಟಾಯ್ಡ್ ಸಂಧಿವಾತ. ನೀವು ಅಸ್ಥಿಸಂಧಿವಾತದಿಂದ ಬಳಲುತ್ತಿದ್ದರೆ, ನಿಮಗೆ ಕೀಲು ನೋವು ಮತ್ತು ಸ್ನಾಯು ನೋವು ಹೆಚ್ಚಾಗಿ ಕಂಡು ಬರುತ್ತದೆ. ಆದರೆ ರುಮಟಾಯ್ಡ್ ಸಂಧಿವಾತದಲ್ಲಿ ಹಾಗಲ್ಲ. ಇದರಲ್ಲಿ ಕೀಲು ಮತ್ತು ಸ್ನಾಯು ನೋವಿನ ಜೊತೆಗೆ, ದೇಹದಲ್ಲಿ ವಿವಿಧ ರೀತಿಯ ಸಮಸ್ಯೆಗಳು ಸಹ ಕಂಡು ಬರುತ್ತವೆ. ನಿಮ್ಮ ಶ್ವಾಸಕೋಶ ಮತ್ತು ಹೃದಯ ರಕ್ತನಾಳಗಳಲ್ಲಿ ಸಮಸ್ಯೆಗಳು ಉಂಟಾಗಬಹುದು. ಬರು ಬರುತ್ತಾ ಇದು ಕಣ್ಣಿನ ದೃಷ್ಟಿಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ ಇದರಿಂದ ದೃಷ್ಟಿ ಸಮಸ್ಯೆ ಹೆಚ್ಚಾಗುತ್ತದೆಯೇ? ಇದನ್ನು ತಡೆಯಲು ಸರಳವಾಗಿ ಮಾಡಬಹುದಾದ ಕೆಲಸಗಳೇನು? ಇಲ್ಲಿದೆ ಮಾಹಿತಿ.

ವೈದ್ಯರ ಪ್ರಕಾರ ರುಮಟಾಯ್ಡ್ ಸಂಧಿವಾತದ ಸಮಸ್ಯೆ ಹೆಚ್ಚಾದಾಗ, ಇದು ಕಣ್ಣಿನ ಆರೋಗ್ಯದ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತವೆ. ಸಮಯಕ್ಕೆ ಸರಿಯಾಗಿ ಮದ್ದನ್ನು ನೀಡದಿದ್ದರೆ, ದೃಷ್ಟಿ ಕಳೆದುಕೊಳ್ಳುವ ಅಪಾಯವಿರುತ್ತದೆ. ಆದ್ದರಿಂದ, ಕಣ್ಣುಗಳು ಪದೇ ಪದೇ ಒಣಗುತ್ತಿದ್ದರೆ, ಕಿರಿಕಿರಿ, ಕೆಂಪಾಗುವುದು ಅಥವಾ ತುರಿಕೆ ಕಂಡು ಬರುವುದು, ನೀರು ಬರುವುದು, ಮಸುಕಾದ ದೃಷ್ಟಿ ಸಮಸ್ಯೆ. ನಿಮ್ಮಲ್ಲಿಯೂ ಈ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಕಣ್ಣುಗಳು ನಮ್ಮ ದೇಹದ ಪ್ರಮುಖ ಮತ್ತು ಸೂಕ್ಷ್ಮ ಭಾಗಗಳಲ್ಲಿ ಒಂದಾಗಿದೆ. ಹಾಗಾಗಿ ಈ ರೋಗಲಕ್ಷಣಗಳನ್ನು ನಾವು ನಿರ್ಲಕ್ಷಿಸುವಂತಿಲ್ಲ.

ಇದನ್ನೂ ಓದಿ: ಉಪ್ಪಿನಕಾಯಿ ಇಷ್ಟ ಪಡುತ್ತೀರಾ? ಇದರಿಂದ ಎಷ್ಟೆಲ್ಲಾ ಆರೋಗ್ಯ ಸಮಸ್ಯೆಗಳಿವೆ ನೋಡಿ

ನಿಯಮಿತ ಈಜು ದೇಹಕ್ಕೆ ಒಳ್ಳೆಯದು

ಅದಕ್ಕಾಗಿಯೇ ಈ ಸಮಸ್ಯೆಯನ್ನು ತಡೆಯಲು ನೀವು ಮೊದಲು ನಿಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಸಂಧಿವಾತದ ನೋವಿಗೆ ಪ್ರಮುಖ ಕಾರಣವೆಂದರೆ ವಿಟಮಿನ್ ಡಿ ಮತ್ತು ಕ್ಯಾಲ್ಸಿಯಂ ಕೊರತೆ. ಆದ್ದರಿಂದ ನಿಮ್ಮ ದೈನಂದಿನ ಆಹಾರದಲ್ಲಿ ಈ ಎರಡು ಪದಾರ್ಥಗಳನ್ನು ಸೇವನೆ ಮಾಡುವುದು ಬಹಳ ಮುಖ್ಯ. ಜೊತೆಗೆ ನಿಮ್ಮ ತೂಕ ಕಡಿಮೆ ಇರಲಿ. ಅಗತ್ಯವಿದ್ದರೆ ನಿಯಮಿತವಾಗಿ ವ್ಯಾಯಾಮ ಮಾಡಿ. ಇದು ಮೂಳೆ ನೋವನ್ನು ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಕೀಲುಗಳು ಆರೋಗ್ಯಕರವಾಗಿರುತ್ತದೆ. ಸಂಧಿವಾತ ಇರುವವರು ಈಜಾಡುವುದು ಅವರ ದೇಹಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ನಿಯಮಿತ ಈಜು ಸ್ನಾಯುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ದೇಹದ ಕಾರ್ಯವನ್ನು ಹೆಚ್ಚಿಸುತ್ತದೆ. ಮೊಣಕಾಲು ಮತ್ತು ಸೊಂಟದ ಬಲವೂ ಹೆಚ್ಚಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು