Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಬೂಜ ಹಣ್ಣನ್ನು ಈ ಆರೋಗ್ಯ ಸಮಸ್ಯೆಗಳಿರುವವರು ಸೇವನೆ ಮಾಡಬೇಡಿ

ಕರಬೂಜ ಬೇಸಿಗೆಯ ಋತುವಿನಲ್ಲಿ ಸೇವನೆ ಮಾಡಬೇಕಾದ ಹಣ್ಣುಗಳಲ್ಲಿ ಪ್ರಮುಖವಾದದ್ದು. ಅಲ್ಲದೆ ಇದು ಹಲವರ ನೆಚ್ಚಿನ ಹಣ್ಣು. ಇದನ್ನು ಸೇವನೆ ಮಾಡುವುದರಿಂದ ಬಾಯಾರಿಕೆಯನ್ನು ತಣಿಸುತ್ತದೆ. ವಿಶೇಷವಾಗಿ ಇದರಲ್ಲಿ ಹೆಚ್ಚಿನ ನೀರಿನ ಅಂಶ ಇರುವುದರಿಂದ, ಬೇಸಿಗೆಯ ಶಾಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಆದರೆ ಕೆಲವು ಆರೋಗ್ಯ ಸಮಸ್ಯೆ ಇರುವವರು ಕರಬೂಜ ಹಣ್ಣಿನ ಸೇವನೆಯಿಂದ ದೂರವಿರಬೇಕು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಈ ಹಣ್ಣಿನ ಸೇವನೆ ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಕರಬೂಜ ಹಣ್ಣನ್ನು ಈ ಆರೋಗ್ಯ ಸಮಸ್ಯೆಗಳಿರುವವರು ಸೇವನೆ ಮಾಡಬೇಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 20, 2025 | 10:50 AM

ಬೇಸಿಗೆ ಬಂದಾಗ ದೇಹಕ್ಕೆ ತಂಪು ನೀಡುವ ಹಣ್ಣುಗಳನ್ನು ತಿನ್ನುವುದು ಅನಿವಾರ್ಯ. ವಿಶೇಷವಾಗಿ ಕರಬೂಜ (Muskmelon) ಬೇಸಿಗೆಯ ಋತುವಿನಲ್ಲಿ ಸೇವನೆ ಮಾಡಬೇಕಾದ ಹಣ್ಣುಗಳಲ್ಲಿ ಪ್ರಮುಖವಾದದ್ದು. ಅಲ್ಲದೆ ಇದು ಹಲವರ ನೆಚ್ಚಿನ ಹಣ್ಣು. ಇದನ್ನು ಸೇವನೆ ಮಾಡುವುದರಿಂದ ಬಾಯಾರಿಕೆಯನ್ನು ತಣಿಸುತ್ತದೆ. ವಿಶೇಷವಾಗಿ ಇದರಲ್ಲಿ ಹೆಚ್ಚಿನ ನೀರಿನ ಅಂಶ ಇರುವುದರಿಂದ, ಬೇಸಿಗೆಯ ಶಾಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಇದು ವಿಟಮಿನ್ ಇ, ಸತು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಫೈಬರ್ ನಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ದೇಹಕ್ಕೆ ಅಗತ್ಯವಾದ ಪೋಷಣೆಯನ್ನು ಒದಗಿಸುವುದರ ಹೊರತಾಗಿ, ಅವು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಸಹ ಸಹಾಯ ಮಾಡುತ್ತವೆ. ಆದರೆ ಕೆಲವು ಆರೋಗ್ಯ ಸಮಸ್ಯೆ ಇರುವವರು ಕರಬೂಜ ಹಣ್ಣಿನ ಸೇವನೆಯಿಂದ ದೂರವಿರಬೇಕು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಈ ಹಣ್ಣಿನ ಸೇವನೆ ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಮಧುಮೇಹ: ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇರುವವರು ಕರಬೂಜ ಹಣ್ಣನ್ನು ಹೆಚ್ಚು ತಿನ್ನಬಾರದು. ತಜ್ಞರ ಪ್ರಕಾರ, ಈ ಹಣ್ಣಿನ ಗ್ಲೈಸೆಮಿಕ್ ಸೂಚ್ಯಂಕವು 60- 80 ರ ನಡುವೆ ಇರುತ್ತದೆ. ಇದನ್ನು ಅತಿಯಾಗಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗಬಹುದು. ಆದ್ದರಿಂದ ಮಧುಮೇಹ ಹೊಂದಿರುವವರು ಇದನ್ನು ತಿನ್ನುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.

ಚರ್ಮದ ಸಮಸ್ಯೆ: ಅಲರ್ಜಿ ಅಥವಾ ಚರ್ಮದ ಸಮಸ್ಯೆಗಳಿಂದ ಬಳಲುತ್ತಿರುವವರು ಕರಬೂಜ ಹಣ್ಣನ್ನು ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಕೆಲವರಿಗೆ ಈ ಹಣ್ಣನ್ನು ಸೇವಿಸಿದ ತಕ್ಷಣ ದದ್ದುಗಳು, ತುರಿಕೆ, ಊತ ಉಂಟಾಗುತ್ತದೆ. ಹಾಗಾಗಿ ಅಂತವರು ವೈದ್ಯರ ಸಲಹೆಯ ಮೇರೆಗೆ ಮಾತ್ರ ಈ ಹಣ್ಣಿನ ಸೇವನೆ ಮಾಡುವುದು ಬಹಳ ಉತ್ತಮ.

ಇದನ್ನೂ ಓದಿ
Image
ತುಂಬಾ ಆಯಾಸ, ನಿಶ್ಯಕ್ತಿಯಾಗಿ ದೇಹದಲ್ಲಿ ಹುಮ್ಮಸ್ಸು ಇಲ್ಲದೆ ಇದ್ದರೆ ಈ ಸಲಹೆ
Image
ಕಾಮಾಲೆ ರೋಗಕ್ಕೆ ಈ ತರಕಾರಿಯ ಬೀಜದಲ್ಲಿದೆ ಮದ್ದು
Image
ಎಡಗೈ ಹೆಚ್ಚಾಗಿ ಬಳಸುವವರಿಗೆ ರೋಗಗಳ ಅಪಾಯ ತಪ್ಪಿದ್ದಲ್ಲ
Image
ಯುವಕರೇ ...9 ಗಂಟೆಗಳ ನಿದ್ರೆ ಮಾಡಲೇಬೇಕು

ಗ್ಯಾಸ್ಟ್ರಿಕ್, ಐಬಿಎಸ್: ಕರುಳಿನ ಸಮಸ್ಯೆಗಳು, ಗ್ಯಾಸ್, ಉಬ್ಬರ, ಕಿರಿಕಿರಿಯ ಕರುಳಿನ ಸಿಂಡ್ರೋಮ್ (ಐಬಿಎಸ್) ಹೊಂದಿರುವ ಜನರು ಕಾರ್ಬೋಹೈಡ್ರೇಟ್ಗಳನ್ನು ತಿನ್ನದಂತೆ ಸೂಚಿಸಲಾಗುತ್ತದೆ. ಏಕೆಂದರೆ ಇದರಲ್ಲಿ ಫೈಬರ್ ಅಧಿಕವಾಗಿ, ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದನ್ನು ಅತಿಯಾಗಿ ತೆಗೆದುಕೊಂಡರೆ, ಕರುಳಿನಲ್ಲಿ ಅನಿಲವು ಹೆಚ್ಚಾಗಬಹುದು ಮತ್ತು ಅಸ್ವಸ್ಥತೆಗೆ ಕಾರಣವಾಗಬಹುದು.

ಮೂತ್ರಪಿಂಡದ ಸಮಸ್ಯೆ: ಸಾಮಾನ್ಯವಾಗಿ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಹಣ್ಣನ್ನು ತಿನ್ನಬಾರದು. ಇದರ ಹೆಚ್ಚಿನ ಪೊಟ್ಯಾಸಿಯಮ್ ಅಂಶವು ಮೂತ್ರಪಿಂಡದ ಕಾರ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಪೊಟ್ಯಾಸಿಯಮ್ ದೇಹದಲ್ಲಿ ಸಂಗ್ರಹವಾಗಬಹುದು ಮತ್ತು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಹೈಪೋನಾಟ್ರೇಮಿಯಾ ಸಮಸ್ಯೆ: ಕರಬೂಜದಲ್ಲಿ ಶೇಕಡಾ 90 ರಷ್ಟು ನೀರು ಇರುತ್ತದೆ. ಇದನ್ನು ಅತಿಯಾಗಿ ಸೇವಿಸಿದರೆ, ದೇಹದಲ್ಲಿ ಸೋಡಿಯಂ ಮಟ್ಟವು ಕಡಿಮೆಯಾಗಬಹುದು ಮತ್ತು ಹೈಪೋನಾಟ್ರೇಮಿಯಾ ಎಂಬ ಸಮಸ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಇದು ದೇಹದಲ್ಲಿ ಊತ, ನಿರ್ಜಲೀಕರಣ ಮತ್ತು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಸ್ತನ ಕ್ಯಾನ್ಸರ್ ತಡೆಯಲು ಬೇಸಿಗೆಯಲ್ಲಿ ಸಿಗುವ ಈ ಹಣ್ಣನ್ನು ತಪ್ಪದೆ ಸೇವನೆ ಮಾಡಿ

ಯಾವಾಗ ತಿನ್ನಬೇಕು?

ಬೆಳಿಗ್ಗೆ ಅಥವಾ ಮಧ್ಯಾಹ್ನ ಕರಬೂಜವನ್ನು ತಿನ್ನುವುದು ಒಳ್ಳೆಯದು. ಆದರೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಡಿ. ಇದು ಗ್ಯಾಸ್, ಉಬ್ಬರ ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ, ಇದನ್ನು ರಾತ್ರಿಯಲ್ಲಿ ತಿನ್ನಬಾರದು. ಮಧುಮೇಹ, ಮೂತ್ರಪಿಂಡದ ತೊಂದರೆ, ಚರ್ಮ ಸಂಬಂಧಿತ ಅಲರ್ಜಿಗಳು, ಗ್ಯಾಸ್ಟ್ರಿಕ್ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಹಣ್ಣನ್ನು ಮಿತವಾಗಿ ಅಥವಾ ವೈದ್ಯರ ಸಲಹೆಯನುಸಾರ ಮಾತ್ರ ಸೇವಿಸುವುದು ಉತ್ತಮ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಅರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:50 am, Thu, 20 March 25

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ