AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Period Pain: ಋತುಚಕ್ರದ ನೋವನ್ನು ಸಹಿಸೋಕೆ ಆಗುತ್ತಿಲ್ಲವೇ?; ಮುಟ್ಟಿನ ಸಮಯದಲ್ಲಿ ಹೀಗೆ ಮಾಡಿ ನೋಡಿ

Menstrual Cramps: 10ರಲ್ಲಿ 9 ಮಹಿಳೆಯರು ಋತುಚಕ್ರದ ನೋವನ್ನು ಅನುಭವಿಸುತ್ತಾರೆ. ಹೊಟ್ಟೆಯ ಸೆಳೆತವು ಕೆಲವು ಜನರಿಗೆ ತುಂಬಾ ನೋವಿನಿಂದ ಕೂಡಿರುತ್ತದೆ. ಸಾಸಿವೆ ಎಣ್ಣೆ ಹಚ್ಚಿ ಪ್ರತಿದಿನ ಮಸಾಜ್ ಮಾಡಿಕೊಂಡರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ.

Period Pain: ಋತುಚಕ್ರದ ನೋವನ್ನು ಸಹಿಸೋಕೆ ಆಗುತ್ತಿಲ್ಲವೇ?; ಮುಟ್ಟಿನ ಸಮಯದಲ್ಲಿ ಹೀಗೆ ಮಾಡಿ ನೋಡಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jan 23, 2023 | 3:32 PM

Share

ಋತುಚಕ್ರದ (Period) ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವು ಮಹಿಳೆಯರ ಜೀವವನ್ನೇ ಹಿಂಡಿಬಿಡುತ್ತದೆ. ಮುಟ್ಟಿನ ನೋವಿನಿಂದ ಬಳಲುತ್ತಿರುವವರು ಅದರಿಂದ ಪಾರಾಗಲು ಏನೇನೋ ಮಾಡುತ್ತಾರೆ. ಪ್ರತಿ ತಿಂಗಳೂ ಮಾತ್ರೆ ಸೇವಿಸುವವರು ಕೂಡ ಇದ್ದಾರೆ. ಅಂಕಿಅಂಶಗಳ ಪ್ರಕಾರ, 10ರಲ್ಲಿ 9 ಮಹಿಳೆಯರು ಋತುಚಕ್ರದ ನೋವನ್ನು (Menstrual Cramps) ಅನುಭವಿಸುತ್ತಾರೆ. ಹೊಟ್ಟೆಯ ಸೆಳೆತವು ಕೆಲವು ಜನರಿಗೆ ತುಂಬಾ ನೋವಿನಿಂದ ಕೂಡಿರುತ್ತದೆ.

ಮುಟ್ಟಿನ ನೋವನ್ನು ಕಡಿಮೆ ಮಾಡಲು ಇರುವ ಪರಿಣಾಮಕಾರಿ ಪರಿಹಾರಗಳು ಇಲ್ಲಿವೆ:

– ಕೆಳ ಹೊಟ್ಟೆಯ ಭಾಗದಲ್ಲಿ ಹಾಟ್ ಬ್ಯಾಗ್ ಇಟ್ಟುಕೊಳ್ಳುವುದು.

– ನಿಯಮಿತವಾಗಿ ಫಿಟ್ನೆಸ್ ಅಭ್ಯಾಸ ರೂಢಿಸಿಕೊಳ್ಳುವುದು.

– ಒಂದೇ ಬಾರಿ ಹೆಚ್ಚು ಆಹಾರ ಸೇವಿಸದಿರುವುದು.

– ಮಲ್ಟಿ ವಿಟಮಿನ್ ಸಪ್ಲಿಮೆಂಟ್‌ಗಳ ನಿಯಮಿತ ಸೇವನೆಯನ್ನು ಮಾಡುವುದು.

– ಉಪ್ಪು, ಕೆಫೀನ್, ಸಕ್ಕರೆ ಇತ್ಯಾದಿಗಳ ಬಳಕೆಯನ್ನು ಕಡಿಮೆ ಮಾಡುವುದು.

– 1 ಲೋಟ ಬಿಸಿ ನೀರಿಗೆ ಅರ್ಧ ಲಿಂಬೆ ರಸವನ್ನು ಹಿಂಡಿ, ಅದನ್ನು ಚೆನ್ನಾಗಿ ಮಿಕ್ಸ್ ಮಾಡಿ ಕುಡಿದರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ.

ಇದನ್ನೂ ಓದಿ: Irregular Period: ಅನಿಯಮಿತ ಅವಧಿಯ ಋತುಸ್ರಾವಕ್ಕೆ ಇಲ್ಲಿದೆ ಆಯುರ್ವೇದ ಗಿಡಮೂಲಿಕೆಗಳು

– ಸಾಸಿವೆ ಎಣ್ಣೆಯನ್ನು ಹಚ್ಚಿ ಪ್ರತಿದಿನ ಹೊಟ್ಟೆಯನ್ನು ಮಸಾಜ್ ಮಾಡಿಕೊಂಡರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಸಾಸಿವೆ ಎಣ್ಣೆಯಲ್ಲಿ ಲಿನೋಲಿಕ್ ಆಮ್ಲ, ಉರಿಯೂತ ಶಮನಕಾರಿ ಗುಣ ಹಾಗೂ ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಋತುಚಕ್ರದ ವೇಳೆ ಸಾಸಿವೆ ಎಣ್ಣೆಯನ್ನು ಬಳಸಿಕೊಂಡು ಹೊಟ್ಟೆಯ ಕೆಳಭಾಗದಲ್ಲಿ ಮಸಾಜ್ ಮಾಡಿಕೊಂಡರೆ ಹೊಟ್ಟೆನೋವಿನಿಂದ ತಾತ್ಕಾಲಿಕ ಪರಿಹಾರ ಪಡೆಯಬಹುದು.

– ಒಣ ಶುಂಠಿ ಮತ್ತು ಕಾಳು ಮೆಣಸು ಹಾಕಿಕೊಂಡು ಚಹಾ ಮಾಡಿಕೊಂಡು ಕುಡಿಯಬಹುದು. ಆದರೆ, ಈ ಚಹಾಕ್ಕೆ ಹಾಲು ಬೆರೆಸಬೇಡಿ.

– ಜೀರಿಗೆಯನ್ನು ನೀರಿಗೆ ಹಾಕಿಕೊಂಡು ಕುದಿಸಿಕೊಳ್ಳಬಹುದು. ಅಥವಾ ಜೀರಿಗೆಯನ್ನು ಹಾಗೇ ಜಗಿದು ತಿನ್ನಬಹುದು. ಜೀರಿಗೆಯಲ್ಲಿ ಶಮನಕಾರಿ ಗುಣವಿದೆ. ಇದು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ. ಇದು ಋತುಚಕ್ರದ ನೋವು ನಿವಾರಣೆ ಮಾಡಲು ತುಂಬಾ ಪರಿಣಾಮಕಾರಿ.

ಇನ್ನಷ್ಟು ಆರೋಗ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ