AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Periods Pain: ಮುಟ್ಟಿನ ನೋವನ್ನು ಎಂದಿಗೂ ಕಡೆಗಣಿಸಬೇಡಿ! ಈ ಸಮಸ್ಯೆಯಾಗಿರಬಹುದು

ಋತುಚಕ್ರದ ವೇಳೆ ಕಾಡುವ ಕಿಬ್ಬೊಟ್ಟೆ ನೋವು ಕೆಲವರಲ್ಲಿ ಸೌಮ್ಯವಾಗಿದ್ದರೆ ಹಲವರಲ್ಲಿ ತಡೆಯಲು ಸಾಧ್ಯವಾಗದಿರಬಹುದು. ಇದನ್ನು ಪರಿಹರಿಸಿಕೊಳ್ಳಲು ಕೆಲವರು ಆಯುರ್ವೇದ ಔಷಧಿಯ ಮೊರೆ ಹೋದರೆ ಮತ್ತೊಂದಿಷ್ಟು ಜನ ಮಾತ್ರೆಗಳನ್ನು ಸೇವನೆ ಮಾಡುತ್ತಾರೆ. ಆದರೆ ಮುಟ್ಟಿನ ನೋವನ್ನು ಎಂದಿಗೂ ಕಡೆಗಣಿಸಬಾರದು ಏಕೆಂದರೆ ಇದು ಹಲವಾರು ರೀತಿಯ ಕಾಯಿಲೆಗಳಿಗೆ ಆಹ್ವಾನ ನೀಡಬಹುದು.

Periods Pain: ಮುಟ್ಟಿನ ನೋವನ್ನು ಎಂದಿಗೂ ಕಡೆಗಣಿಸಬೇಡಿ! ಈ ಸಮಸ್ಯೆಯಾಗಿರಬಹುದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 29, 2024 | 4:37 PM

Share

ಪ್ರತೀ ತಿಂಗಳು ಋತುಚಕ್ರದ ವೇಳೆ ಕಾಡುವ ಕೆಲವೊಂದು ಸಮಸ್ಯೆಗಳು ಮಹಿಳೆಯರನ್ನು ಇನ್ನಿಲ್ಲದಂತೆ ಕಾಡುತ್ತದೆ. ಅದರಲ್ಲಿ ಸಹಿಸಲು ಅಸಾಧ್ಯವಾದ ಕಿಬ್ಬೊಟ್ಟೆ ನೋವು ಕೂಡ ಒಂದು. ಕೆಲವರಲ್ಲಿ ಈ ನೋವು ಸೌಮ್ಯವಾಗಿದ್ದರೆ ಹಲವರಲ್ಲಿ ತಡೆಯಲು ಸಾಧ್ಯವಾಗದಷ್ಟು ನೋವು, ಸೆಳೆತ ಕಂಡು ಬರುತ್ತದೆ. ಇದನ್ನು ಪರಿಹರಿಸಿಕೊಳ್ಳಲು ಕೆಲವರು ಆಯುರ್ವೇದ ಔಷಧಿಯ ಮೊರೆ ಹೋದರೆ ಮತ್ತೊಂದಿಷ್ಟು ಜನ ಮಾತ್ರೆಗಳನ್ನು ಸೇವನೆ ಮಾಡುತ್ತಾರೆ. ಆದರೆ ಮುಟ್ಟಿನ ನೋವನ್ನು ಎಂದಿಗೂ ಕಡೆಗಣಿಸಬಾರದು ಏಕೆಂದರೆ ಇದು ಹಲವಾರು ರೀತಿಯ ಕಾಯಿಲೆಗಳಿಗೆ ಆಹ್ವಾನ ನೀಡಬಹುದು.

ಎಂಡೊಮೆಟ್ರಿಯೊಸಿಸ್ ಎಂದರೇನು?

ಇತ್ತೀಚಿಗೆ ಬಾಲಿವುಡ್ ನಟಿ ಶಮಿತಾ ಶೆಟ್ಟಿ ಎಂಡೊಮೆಟ್ರಿಯೊಸಿಸ್ ಎಂಬ ಗಂಭೀರ ಕಾಯಿಲೆಯಿಂದ ಬಳುತ್ತಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ನಮ್ಮಲ್ಲಿ ಹೆಚ್ಚಿನವರಿಗೆ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ತಿಳಿದಿಲ್ಲ. ಇನ್ನು ಮುಟ್ಟಿನ ಸೆಳೆತಕ್ಕೂ, ಎಂಡೊಮೆಟ್ರಿಯೊಸಿಸ್ ಕಾಯಿಲೆಗೂ ಏನು ಸಂಬಂಧ ಎಂಬ ಪ್ರಶ್ನೆ ಹುಟ್ಟಿಕೊಳ್ಳಬಹುದು. ಮುಟ್ಟಿನ ಸಮಯದಲ್ಲಿ ಮತ್ತು ಅದರ ಸುತ್ತಲೂ ತೀವ್ರವಾದ ನೋವು ಈ ಕಾಯಿಲೆಯ ಲಕ್ಷ್ಣವಾಗಿರಬಹುದು. ಎಂಡೊಮೆಟ್ರಿಯೊಸಿಸ್ ಕಾಯಿಲೆಯಲ್ಲಿ ಗರ್ಭಾಶಯದ ಒಳ ಪದರದಂತಹ ಅಂಗಾಂಶವು ಗರ್ಭಾಶಯದ ಹೊರಗೆ ಬೆಳವಣಿಗೆಯಾಗಲು ಪ್ರಾರಂಭಿಸುತ್ತದೆ. ಈ ಅಂಗಾಂಶವು ಅಂಡಾಶಯಗಳು, ಫಾಲೋಪಿಯನ್ ಟ್ಯೂಬ್‌ಗಳು, ಗರ್ಭಾಶಯದ ಹೊರ ಭಾಗ, ಮೂತ್ರಕೋಶ ಮತ್ತು ಕರುಳು ಸೇರಿದಂತೆ ಅನೇಕ ಅಂಗಗಳ ಮೇಲೆ ಪರಿಣಾಮ ಬೀರಬಹುದು. ಎಂಡೊಮೆಟ್ರಿಯೊಸಿಸ್ ಅಂಗಾಂಶವು ಗರ್ಭಾಶಯದ ಒಳಪದರದಂತೆ ಕಾರ್ಯನಿರ್ವಹಿಸುತ್ತದೆ. ಇದು ಪ್ರತಿ ಋತುಚಕ್ರದೊಂದಿಗೆ ದಪ್ಪವಾಗುತ್ತದೆ, ಒಡೆಯುತ್ತದೆ ಮತ್ತು ರಕ್ತಸ್ರಾವವಾಗುತ್ತದೆ.

ತೀವ್ರ ಮುಟ್ಟಿನ ನೋವನ್ನು ಲಘುವಾಗಿ ಪರಿಗಣಿಸಬೇಡಿ. ಏಕೆಂದರೆ ಅದರ ರೋಗಲಕ್ಷಣಗಳು ಉಲ್ಬಣಗೊಂಡರೆ, ಚಿಕಿತ್ಸೆ ನೀಡಲು ಸಮಸ್ಯೆ ಉಂಟಾಗಬಹುದು ಹಾಗಾಗಿ ಅತಿಯಾದ ಮುಟ್ಟಿನ ರಕ್ತಸ್ರಾವ ಅಥವಾ ನೋವು ಕಂಡುಬರುತ್ತಿದ್ದರೆ ಮೊದಲು ವೈದ್ಯರನ್ನು ಸಂಪರ್ಕಿಸಿ. ಆರಂಭಿಕ ರೋಗನಿರ್ಣಯ ಮತ್ತು ಸರಿಯಾದ ಚಿಕಿತ್ಸೆಯೊಂದಿಗೆ, ಎಂಡೊಮೆಟ್ರಿಯೊಸಿಸ್ ರೋಗಲಕ್ಷಣಗಳನ್ನು ಕಂಡು ಹಿಡಿದು ಆ ಬಳಿಕ ಅದರಿಂದ ಉಂಟಾಗಬಹುದಾದ ಗಂಭೀರ ಸಮಸ್ಯೆಗಳನ್ನು ತಡೆಯಬಹುದಾಗಿದೆ.

ಇದನ್ನೂ ಓದಿ: ಎಕ್ಕದ ಗಿಡದ ಎಲೆಗಳನ್ನು ಈ ರೀತಿ ಬಳಸಿದರೆ ಮಂಡಿ ನೋವು ಮಾಯ

ಇದನ್ನು ತಡೆಯುವುದು ಹೇಗೆ?

*ಪ್ರತಿನಿತ್ಯ ಆರೋಗ್ಯಕರವಾದ ಪದಾರ್ಥಗಳನ್ನು ಸೇವಿಸಿ.

*ವ್ಯಾಯಾಮ ಅಥವಾ ಯೋಗ ಮಾಡಿ.

*ಕೆಫೀನ್ ಮತ್ತು ಆಲ್ಕೋಹಾಲ್ ಸೇವನೆ ಮಾಡಬೇಡಿ.

*ಧೂಮಪಾನ ಮತ್ತು ಸಿಗರೇಟ್ ಬಳಕೆಯನ್ನು ತಪ್ಪಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ