AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Medicine Packaging: ಮಾತ್ರೆಗಳನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಏಕೆ ಪ್ಯಾಕ್​​ ಮಾಡಲಾಗುತ್ತದೆ ಎಂದು ತಿಳಿದಿದೆಯೇ?

ಸಾಮಾನ್ಯವಾಗಿ ಯಾವುದೇ ಮಾತ್ರೆಗಳನ್ನು ಖರೀದಿಸಿದಾಗ ಅದನ್ನು ಅಲ್ಯೂಮಿನಿಯಂ ಫಾಯಿಲ್​​ನಲ್ಲಿ ಪ್ಯಾಕ್​​ ಮಾಡಿರುವುದನ್ನು ಕಾಣಬಹುದು. ಆದರೆ ಈ ರೀತಿಯಾಗಿ ಯಾಕೆ ಪ್ಯಾಕ್​​​ ಮಾಡಲಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಇನ್ನಷ್ಟು ವಿವರ ಇಲ್ಲಿ ತಿಳಿದುಕೊಳ್ಳಿ

Medicine Packaging: ಮಾತ್ರೆಗಳನ್ನು ಅಲ್ಯೂಮಿನಿಯಂ ಫಾಯಿಲ್‌ನಲ್ಲಿ ಏಕೆ ಪ್ಯಾಕ್​​ ಮಾಡಲಾಗುತ್ತದೆ ಎಂದು ತಿಳಿದಿದೆಯೇ?
Pharmaceutical Packaging
ಅಕ್ಷತಾ ವರ್ಕಾಡಿ
|

Updated on: Jan 03, 2024 | 12:23 PM

Share

ಬ್ಲಿಸ್ಟರ್ ಪ್ಯಾಕ್ ಎನ್ನುವುದು ಔಷಧೀಯ ಉದ್ಯಮದಲ್ಲಿ ಬಳಸಲಾಗುವ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಆಗಿದೆ. ಪ್ರತ್ಯೇಕ ಪ್ರತ್ಯೇಕವಾಗಿ ಮಾತ್ರೆಗಳಿಗೆ ಪ್ಲಾಸ್ಟಿಕ್ ಮತ್ತು ಅಲ್ಯೂಮಿನಿಯಂ ಫಾಯಿಲ್‌ನಿಂದ ಪ್ಯಾಕ್​​ ಮಾಡಲಾಗುತ್ತದೆ. ಇದನ್ನು ಬ್ಲಿಸ್ಟರ್ ಫಿಲ್ಮ್ ಅಥವಾ ಲಿಡ್ ಫಿಲ್ಮ್ ಎಂದು ಕರೆಯಲಾಗುತ್ತದೆ . ಇದರಿಂದಾಗಿ ಕ್ಯಾಪ್ಸುಲ್ಗಳು ಮತ್ತು ಮಾತ್ರೆಗಳು ಸ್ವಚ್ಛವಾಗಿರುತ್ತವೆ ಮತ್ತು ದೀರ್ಘಕಾಲದ ವರೆಗೆ ಬಳಸಲಾಗುತ್ತದೆ. ಔಷಧೀಯ ಉದ್ಯಮದಲ್ಲಿ, ಪ್ಯಾಕೇಜಿಂಗ್ ವಸ್ತುಗಳ ಆಯ್ಕೆಯು ಔಷಧಿಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಖಾತ್ರಿಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಅಲ್ಯೂಮಿನಿಯಂ ಅದರ ಅಸಾಧಾರಣ ಗುಣಗಳಿಂದಾಗಿ ಔಷಧ ಪ್ಯಾಕೇಜಿಂಗ್‌ಗೆ ಸೂಕ್ತವಾದ ವಸ್ತು ಎಂದು ಪರಿಗಣಿಸಲಾಗಿದೆ. ಅಲ್ಯೂಮಿನಿಯಂ ತುಕ್ಕುಗೆ ಪ್ರತಿರೋಧವಾಗಿದ್ದು, ಇದಲ್ಲದೇ ತೇವಾಂಶ ಮತ್ತು ತಾಪಮಾನದಲ್ಲಿನ ಏರಿಳಿತಗಳನ್ನು ತಡೆದುಕೊಳ್ಳಬಲ್ಲದು. ಜೊತೆಗೆ ನೇರಳಾತೀತ ಕಿರಣ, ನೀರಿನ ಆವಿ, ತೈಲ, ಕೊಬ್ಬು, ಆಮ್ಲಜನಕ ಮತ್ತು ಸೂಕ್ಷ್ಮಾಣುಜೀವಿಗಳು ಮಾತ್ರೆಯೊಳಗೆ ಸೇರದಂತೆ ತಡೆಯುತ್ತದೆ. ಆದ್ದರಿಂದಲೇ ಮಾತ್ರೆಗಳ ಪ್ಯಾಕೇಜಿಂಗ್​​​ನಲ್ಲಿ ಅಲ್ಯೂಮಿನಿಯಂ ಬಳಸಲಾಗುತ್ತದೆ.

ಇದನ್ನೂ ಓದಿ: ಕಾರ್ಖಾನೆಗಳ ಮೇಲ್ಛಾವಣಿಯ ಮೇಲೆ ಈ ರೀತಿಯ ತಿರುಗುವ ಮಷೀನ್ ಗಳನ್ನು ಯಾಕೆ ಇಟ್ಟಿರುತ್ತಾರೆ ಗೊತ್ತಾ?

ಔಷಧಿಗಳ ಹೊರತಾಗಿ ಇತ್ತೀಚಿನ ದಿನಗಳಲ್ಲಿ ಆಹಾರ ಸಂಗ್ರಹಿಸಲು ಅಲ್ಯೂಮಿನಿಯಂ ಕವರ್​​ಗಳನ್ನು ಹೆಚ್ಚು ಬಳಸಲಾಗುತ್ತದೆ. ಆಫೀಸ್ ಬಾಕ್ಸ್ ಇರಲಿ, ಮಕ್ಕಳ ಟಿಫಿನ್ ಬಾಕ್ಸ್ ಇರಲಿ. ಇತ್ತೀಚಿನ ದಿನಗಳಲ್ಲಿ ಅಲ್ಯೂಮಿನಿಯಂ ಫಾಯಿಲ್ ನಲ್ಲಿ ಆಹಾರ ಇಡುತ್ತಾರೆ.ರೆಸ್ಟೋರೆಂಟಟ್​ಗಳು, ಟಿಫಿನ್ ಸೆಂಟರ್​ಗಳು ಮತ್ತು ಫಾಸ್ಟ್ ಫುಡ್ ಸೆಂಟರ್​ಗಳಲ್ಲಿಯೂ ಅವುಗಳನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಈ ಕವರ್​ಗಳಲ್ಲಿ ಆಹಾರವನ್ನು ಪ್ಯಾಕ್ ಮಾಡುವುದರಿಂದ ದೀರ್ಘಕಾಲದವರೆಗೆ ತಾಜಾ ಮತ್ತು ಬಿಸಿಯಾಗಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ