AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pig Kidney Transplant: ಮನುಷ್ಯನಿಗೆ ಹಂದಿಯ ಕಿಡ್ನಿ ಕಸಿ ಮಾಡಿದ ವೈದ್ಯರು; ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ ಪ್ರಯತ್ನ

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ರೋಗಿಗೆ 4 ಗಂಟೆಗಳ ಕಾರ್ಯಾಚರಣೆಯ ನಂತರ ಹಂದಿಯ ಮೂತ್ರಪಿಂಡದೊಂದಿಗೆ ಕಸಿ ಮಾಡಲಾಗಿದೆ. ವೈದ್ಯಕೀಯ ಇತಿಹಾಸದಲ್ಲಿ ಇದೊಂದು ಹೊಸ ದಾಖಲೆ ಎಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Pig Kidney Transplant: ಮನುಷ್ಯನಿಗೆ ಹಂದಿಯ ಕಿಡ್ನಿ ಕಸಿ ಮಾಡಿದ ವೈದ್ಯರು; ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ ಪ್ರಯತ್ನ
ಮನುಷ್ಯನಿಗೆ ಹಂದಿಯ ಕಿಡ್ನಿ ಕಸಿImage Credit source: Pinterest
ಅಕ್ಷತಾ ವರ್ಕಾಡಿ
|

Updated on: Mar 22, 2024 | 10:47 AM

Share

ವಿಶ್ವದಲ್ಲೇ ಪ್ರಥಮ ಬಾರಿಗೆ ರೋಗಿಗೆ ಹಂದಿಯ ಮೂತ್ರಪಿಂಡವನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಇದರೊಂದಿಗೆ, ಪ್ರಾಣಿಗಳ ಅಂಗಗಳನ್ನು ಬಳಸಿ ಮಾನವ ಜೀವ ಉಳಿಸುವ ಪ್ರಯತ್ನದ ಭಾಗವಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಗುರುವಾರ (ಮಾರ್ಚ್ 21) ವ್ಯಕ್ತಿಯೊಬ್ಬನಿಗೆ ಹಂದಿಯ ಮೂತ್ರಪಿಂಡವನ್ನು ಅಳವಡಿಸಲಾಗಿದೆ ಎಂದು ಅಮೆರಿಕದ ವೈದ್ಯಕೀಯ ತಜ್ಞರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 62 ವರ್ಷದ ರೋಗಿಗೆ 4 ಗಂಟೆಗಳ ಕಾರ್ಯಾಚರಣೆಯ ನಂತರ ಹಂದಿಯ ಮೂತ್ರಪಿಂಡದೊಂದಿಗೆ ಕಸಿ ಮಾಡಲಾಗಿದೆ ಎಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ರೀತಿಯ ಅಂಗಾಂಗ ಕಸಿ ಪ್ರಕ್ರಿಯೆಯು ವಿಶ್ವಾದ್ಯಂತ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಲಕ್ಷಾಂತರ ರೋಗಿಗಳಿಗೆ ಜೀವ ನೀಡಬಲ್ಲದು ಎಂದು ವೈದ್ಯರ ತಂಡದ ಸದಸ್ಯ ಡಾ.ಟಾಟ್ಸುವೋ ಕವಾಯ್ ಹೇಳಿದ್ದಾರೆ.

ವೈದ್ಯಕೀಯ ಇತಿಹಾಸದಲ್ಲಿ ಇದೊಂದು ಹೊಸ ದಾಖಲೆಯಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಇದನ್ನೂ ಓದಿ: ಶಾಲೆಯ ಊಟದ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; 30 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಒಂದು ಜಾತಿಯಿಂದ ಇನ್ನೊಂದಕ್ಕೆ ಅಂಗಗಳನ್ನು ಕಸಿ ಮಾಡುವ ವಿಧಾನವನ್ನು ಕ್ಸೆನೋಟ್ರಾನ್ಸ್ಪ್ಲಾಂಟೇಶನ್(xenotransplantation) ಎಂದು ಕರೆಯಲಾಗುತ್ತದೆ. ಈ ಹಿಂದೆ, ಹಂದಿಯ ಹೃದಯವನ್ನು ವ್ಯಕ್ತಿಯೊಬ್ಬರಿಗೆ ತಾತ್ಕಾಲಿಕವಾಗಿ ಕಸಿ ಮಾಡಲಾಗಿತ್ತು. ಆದರೆ ಒಂದು ತಿಂಗಳೊಳಗೆ ವ್ಯಕ್ತಿ ಸಾವನ್ನಪ್ಪಿದ್ದರು. 2018 ರಲ್ಲಿ ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸ್ಲೇಮನ್ ಎಂಬ ವ್ಯಕ್ತಿಗೆ ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಲಾಯಿತು. ಆದರೆ ಐದು ವರ್ಷಗಳ ನಂತರ ಅದು ವಿಫಲವಾಯಿತು. ಸದ್ಯ ಡಯಾಲಿಸಿಸ್ ಮಾಡಿಸಿಕೊಂಡು ಬದುಕುಳಿದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್