Causes of pimples on skin: ಮುಖದ ಮೇಲೆ ಆಗಾಗ ಮೊಡವೆಗಳು ಕಂಡುಬರುತ್ತಿದ್ದರೆ ಈ ರೀತಿ ಮಾಡಿ

ಮೊಡವೆಗಳಾಗುವುದು ಸಾಮಾನ್ಯ. ಬಹುತೇಕ ಒಂದು ಹಂತದಲ್ಲಿ ಎಲ್ಲರೂ ಇದನ್ನು ಎದುರಿಸಿರುತ್ತಾರೆ. ಆದರೆ ಅವು ಪದೇ ಪದೇ ಬರುತ್ತಿದ್ದರೆ ಅಂದರೆ ಆ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದರೆ ಬಹಳಷ್ಟು ಕಿರಿಕಿರಿ ಉಂಟು ಮಾಡಬಹುದು. ಜೊತೆಗೆ ಮುಖದ ಅಂದವೂ ಹಾಳಾಗುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ವಿವಿಧ ರೀತಿಯ ಔಷಧಗಳನ್ನು ಪ್ರಯತ್ನಿಸುತ್ತಾರೆ, ಮೊಡವೆಗಳು ಪೂರ್ತಿಯಾಗಿ ಕಡಿಮೆ ಮಾಡಿಕೊಳ್ಳಲು ನಾನಾ ರೀತಿಯ ವಿಧಾನಗಳನ್ನು ಅನುಸರಿಸುತ್ತಾರೆ. ಆದರೆ ಇದು ಕೆಲವು ಬಾರಿ ದುಬಾರಿಯಾಗಬಹುದು. ಅದಲ್ಲದೆ ಇದರಿಂದ ನೀವು ಬಯಸಿದ ಪರಿಹಾರವೂ ಸಿಗದಿರಬಹುದು. ಹಾಗಾಗಿ ಈ ರೀತಿ ಸಂದರ್ಭಗಳನ್ನು ನೀವು ಎದುರಿಸುತ್ತಿದ್ದರೆ ಮೊದಲು ಮುಖದ ಮೇಲೆ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ, ಅವುಗಳಿಗೆ ಶಾಶ್ವತವಾಗಿ ಮುಕ್ತಿ ಪಡೆಯುವುದು ಹೇಗೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

Causes of pimples on skin: ಮುಖದ ಮೇಲೆ ಆಗಾಗ ಮೊಡವೆಗಳು ಕಂಡುಬರುತ್ತಿದ್ದರೆ ಈ ರೀತಿ ಮಾಡಿ
Follow us
| Updated By: ಅಕ್ಷತಾ ವರ್ಕಾಡಿ

Updated on: Oct 16, 2024 | 6:33 PM

ಮುಖದ ಮೇಲೆ ಮೊಡವೆಗಳಾಗುವುದು ಸಾಮಾನ್ಯ. ಬಹುತೇಕ ಒಂದು ಹಂತದಲ್ಲಿ ಎಲ್ಲರೂ ಇದನ್ನು ಎದುರಿಸಿರುತ್ತಾರೆ. ಆದರೆ ಅವು ಪದೇ ಪದೇ ಬರುತ್ತಿದ್ದರೆ ಅಂದರೆ ಆ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದರೆ ಬಹಳಷ್ಟು ಕಿರಿಕಿರಿ ಉಂಟು ಮಾಡಬಹುದು. ಜೊತೆಗೆ ಮುಖದ ಅಂದವೂ ಹಾಳಾಗುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ವಿವಿಧ ರೀತಿಯ ಔಷಧಗಳನ್ನು ಪ್ರಯತ್ನಿಸುತ್ತಾರೆ, ಮೊಡವೆಗಳು ಪೂರ್ತಿಯಾಗಿ ಕಡಿಮೆ ಮಾಡಿಕೊಳ್ಳಲು ನಾನಾ ರೀತಿಯ ವಿಧಾನಗಳನ್ನು ಅನುಸರಿಸುತ್ತಾರೆ. ಆದರೆ ಇದು ಕೆಲವು ಬಾರಿ ದುಬಾರಿಯಾಗಬಹುದು. ಅದಲ್ಲದೆ ಇದರಿಂದ ನೀವು ಬಯಸಿದ ಪರಿಹಾರವೂ ಸಿಗದಿರಬಹುದು. ಹಾಗಾಗಿ ಈ ರೀತಿ ಸಂದರ್ಭಗಳನ್ನು ನೀವು ಎದುರಿಸುತ್ತಿದ್ದರೆ ಮೊದಲು ಮುಖದ ಮೇಲೆ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ, ಅವುಗಳಿಗೆ ಶಾಶ್ವತವಾಗಿ ಮುಕ್ತಿ ಪಡೆಯುವುದು ಹೇಗೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

ಹದಿಹರೆಯದಲ್ಲಿ, ಯುವಕರಲ್ಲಿ ಹಾರ್ಮೋನ್ ಏರಿಳಿತಗಳಾದಾಗ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ಹುಡುಗಿಯರಲ್ಲಿ, ಈ ಸಮಸ್ಯೆ ಹೆಚ್ಚಾಗಿ ಋತುಚಕ್ರದ ಪ್ರಾರಂಭದ ನಂತರ ಕಂಡುಬರುತ್ತದೆ. ಈ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆ ಆಗುವುದರಿಂದ ಈ ಸಮಸ್ಯೆ ಸಾಮಾನ್ಯವಾಗಿದೆ. ಹುಡುಗರು ಮತ್ತು ಹುಡುಗಿಯರಿಗೆ 14 ವರ್ಷದ ನಂತರ ಹೆಚ್ಚು ಮೊಡವೆಗಳು ಕಂಡು ಬರಲು ಆರಂಭವಾಗುತ್ತದೆ. ಆದರೆ ನಿಮಗೆ ಗೊತ್ತಾ? ಕೆಲವರಲ್ಲಿ ಮೊಡವೆಗಳು ವರ್ಷಗಳ ವರೆಗೆ ಉಳಿಯಬಹುದು ಮತ್ತು ನಾನಾ ರೀತಿಯ ಅಸ್ವಸ್ಥತೆಗೆ ಕಾರಣವಾಗಬಹುದು.

ಮುಖದ ಮೇಲೆ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ?

ಡಾ. ಭಾವುಕ್ ಧೀರ್ ಹೇಳುವ ಪ್ರಕಾರ, “ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳಲು ಹಲವಾರು ಕಾರಣಗಳಿವೆ. ಒಬ್ಬ ವ್ಯಕ್ತಿ ಅತಿಯಾದ ಮಾನಸಿಕ ಒತ್ತಡ ಅನುಭವಿಸಿದರೆ, ಅವರ ದೇಹದಲ್ಲಿನ ಕಾರ್ಟಿಸೋಲ್ ಹಾರ್ಮೋನಿನ ಸಮತೋಲನಕ್ಕೆ ಅಡ್ಡಿಯಾಗುತ್ತದೆ. ಇದು ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳಲು ಕಾರಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಾಗಿ ಬಳಸುವ ಯುವಕರು ಸಹ ಸಾಕಷ್ಟು ಒತ್ತಡ ಅನುಭವಿಸುತ್ತಾರೆ ಎಂಬುದು ತಿಳಿದು ಬಂದಿದೆ. ಇದರಿಂದ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುತ್ತವೆ” ಎಂದಿದ್ದಾರೆ.

ಮತ್ತಷ್ಟು ಓದಿ: ರುಚಿಕರವಾದ ಪೇರಲೆ ಚಟ್ನಿ ಮಾಡುವ ವಿಧಾನ ಇಲ್ಲಿದೆ

ಚರ್ಮದ ಮೇಲೆ ಮೊಡವೆಗಳು ಬರಲು ಪ್ರಮುಖ ಕಾರಣವೆಂದರೆ ಕಳಪೆ ಆಹಾರ ಪದ್ಧತಿ ಎಂದು ಡಾ. ಭಾವುಕ್ ಧೀರ್ ಹೇಳುತ್ತಾರೆ. “ಆಹಾರದಲ್ಲಿ ಹೆಚ್ಚು ಡೈರಿ, ಜಂಕ್ ಫುಡ್ ಮತ್ತು ಅತಿಯಾದ ಸಿಹಿತಿಂಡಿಗಳನ್ನು ಸೇವಿಸಿದರೆ, ಅದು ಮುಖದ ಮೇಲೆ ಮೊಡವೆಗಳಿಗೆ ಕಾರಣವಾಗಬಹುದು. ಅನೇಕ ಸಂದರ್ಭಗಳಲ್ಲಿ, ನಿದ್ರೆಯ ಕೊರತೆ, ಹೆಚ್ಚುವರಿ ಧೂಮಪಾನವೂ ಕೂಡ ಮೊಡವೆಗಳಿಗೆ ಕಾರಣವಾಗುತ್ತದೆ. ಕೆಲವು ಬಾರಿ ಚರ್ಮದ ಆರೈಕೆ ಸರಿಯಾಗಿ ಮಾಡದಿದ್ದಾಗಲೂ ಕೂಡ ಮೊಡವೆಗಳು ಕಂಡು ಬರುತ್ತದೆ. ಉದಾಹರಣೆಗೆ, ನೀವು ಮುಖವನ್ನು ಸರಿಯಾಗಿ ತೊಳೆಯದಿದ್ದರೆ ಅಥವಾ ನಿಮ್ಮ ಚರ್ಮಕ್ಕೆ ವಿವಿಧ ರೀತಿಯ ಕ್ರೀಮ್ ಅಥವಾ ಜೆಲ್ ಗಳನ್ನು ಬಳಸುತ್ತಿದ್ದರೆ ಅದು ಮೊಡವೆಗಳಿಗೆ ಕಾರಣವಾಗಬಹುದು. ಜೊತೆಗೆ ಆಗಾಗ ಮುಖವನ್ನು ಮುಟ್ಟಿಕೊಳ್ಳುವುದು, ಮುಖ ತೊಳೆಯದಿರುವುದು ಕೂಡ ಮೊಡವೆಗಳಿಗೆ ಕಾರಣವಾಗಬಹುದು. ಅಲ್ಲದೆ ಆನುವಂಶಿಕ ಅಂಶಗಳು ಸಹ ಈ ಸಮಸ್ಯೆಗೆ ಕಾರಣವಾಗಬಹುದು” ಎಂದು ಹೇಳಿದ್ದಾರೆ.

ಸುಲಭವಾಗಿ ಪರಿಹರಿಸಿಕೊಳ್ಳುವುದು ಹೇಗೆ ?

ಚರ್ಮರೋಗ ತಜ್ಞೆ ಡಾ. ಸೌಮ್ಯ ಸಚ್ದೇವ್ ಅವರು ಹೇಳುವ ಪ್ರಕಾರ, ನಿಮ್ಮ ಮೊಡವೆಗಳ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಬಹುದು. ಆದರೆ ನೀವು ಕೆಲವು ಸಲಹೆಗಳನ್ನು ಅನುಸರಿಸಬೇಕಾಗುತ್ತದೆ. ಅದರಲ್ಲಿ ಮೊದಲು ಮುಖದ ಶುಚಿತ್ವವನ್ನು ಕಾಪಾಡಿಕೊಳ್ಳುವುದು. ನಿಮ್ಮ ಮುಖವನ್ನು ದಿನಕ್ಕೆ ಕನಿಷ್ಠ ಎರಡು ಬಾರಿ ತೊಳೆಯಿರಿ. ಬೆಳಿಗ್ಗೆ ಮತ್ತು ರಾತ್ರಿ ಮಲಗುವ ಮೊದಲು ನಿಮ್ಮ ಮುಖವನ್ನು ಚೆನ್ನಾಗಿ ತೊಳೆಯುವುದು ಉತ್ತಮ. ಅದಲ್ಲದೆ ನಿಮಗೆ ಅಲರ್ಜಿ ಇರುವ ಆಹಾರಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಸಿಹಿತಿಂಡಿಗಳು, ಮಸಾಲೆಯುಕ್ತ, ಹುರಿದ ಅಥವಾ ಬಿಸಿ ಆಹಾರಗಳನ್ನು ಸೇವಿಸುವುದರಿಂದ ನಿಮ್ಮ ಮುಖದ ಮೇಲೆ ಮೊಡವೆಗಳು ಉಂಟಾದರೆ, ಅಂತಹ ವಸ್ತುಗಳನ್ನು ತಪ್ಪಿಸಿ. ಸಮತೋಲಿತ ಆಹಾರವನ್ನು ಸೇವಿಸಿ. ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ದಿನದಲ್ಲಿ ಕನಿಷ್ಠ 7 ಲೋಟ ನೀರು ಕುಡಿಯಿರಿ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ, ಸಾಕಷ್ಟು ನಿದ್ರೆ ಮಾಡಿ. ಈ ವಿಧಾನಗಳನ್ನು ಪ್ರಯತ್ನಿಸಿದ ನಂತರವೂ, ಮೊಡವೆಗಳ ಸಮಸ್ಯೆ ದೂರವಾಗದಿದ್ದರೆ, ನೀವು ವೈದ್ಯರಿಂದ ಸಲಹೆ ಪಡೆಯಬೇಕು ಎಂದು ಡಾ. ಸೌಮ್ಯ ಸಲಹೆ ನೀಡುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್