AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pistachios for diabetes: ಮಧುಮೇಹಿಗಳು ಪಿಸ್ತಾ ಸೇವನೆ ಮಾಡುವುದರಿಂದ ಯಾವೆಲ್ಲ ಪ್ರಯೋಜನಗಳಿವೆ?

ಪಬ್ಮೆಡ್ ಪ್ರಕಟಿಸಿದ ಅಧ್ಯಯನದ ಪ್ರಕಾರ, ಪಿಸ್ತಾವನ್ನು ಲಘು ಆಹಾರವಾಗಿ ಸೇವಿಸುವುದರಿಂದ ಗ್ಲೈಸೆಮಿಕ್ ನಿಯಂತ್ರಣ, ರಕ್ತದೊತ್ತಡ, ಬೊಜ್ಜು ಮತ್ತು ಮಧುಮೇಹ ರೋಗಿಗಳಲ್ಲಿ ಉರಿಯೂತದ ಮೇಲೆ ಪ್ರಯೋಜನಕಾರಿ ಪರಿಣಾಮ ಬೀರುತ್ತದೆ. ಆದ್ದರಿಂದ, ನೀವು ಇದನ್ನು ನಿಯಮಿತ ಆಹಾರದಲ್ಲಿ ಸೇರಿಸಿಕೊಳ್ಳಬಹುದು ಎಂದು ತಿಳಿಸಿದೆ.

Pistachios for diabetes: ಮಧುಮೇಹಿಗಳು ಪಿಸ್ತಾ ಸೇವನೆ ಮಾಡುವುದರಿಂದ ಯಾವೆಲ್ಲ ಪ್ರಯೋಜನಗಳಿವೆ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 26, 2023 | 2:11 PM

ಮಧುಮೇಹವಿರುವ ವ್ಯಕ್ತಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟದ ಏರಿಕೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರವನ್ನು ಸೇವಿಸುವುದು ಮುಖ್ಯವಾಗಿದೆ. ಸಕ್ಕರೆ ಮತ್ತು ಹೆಚ್ಚಿನ ಕಾರ್ಬೋಹೈಡ್ರೇಟ್ ಆಹಾರಗಳನ್ನು ಮಿತವಾಗಿ ಸೇವಿಸಬೇಕು ಅಥವಾ ಸಂಪೂರ್ಣವಾಗಿ ತಪ್ಪಿಸಬೇಕು. ಮಧುಮೇಹ ಸ್ನೇಹಿ ಆಹಾರದಲ್ಲಿ ನೀವು ಸೇರಿಸಬೇಕಾದ ಒಂದು ಆಹಾರವೆಂದರೆ ಅದು ಪಿಸ್ತಾ. ಇದನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ, ಮಧುಮೇಹ ಹೊಂದಿರುವವರಿಗೆ ಇದು ಆರೋಗ್ಯಕರ ಮತ್ತು ತೃಪ್ತಿಕರ ಆಹಾರವಾಗಿದೆ. ಆರೋಗ್ಯಕರ ಕೊಬ್ಬು ಮತ್ತು ಫೈಬರ್ ನಿಂದ ತುಂಬಿರುವ ಪಿಸ್ತಾಗಳು ಒಟ್ಟಾರೆ ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತವೆ. ಮಧುಮೇಹ ಇರುವವವರು ಪಿಸ್ತಾ ತಿನ್ನುವುದರಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಬ್ಮೆಡ್ ಪ್ರಕಟಿಸಿದ ಅಧ್ಯಯನದ ಪ್ರಕಾರ, ಪಿಸ್ತಾವನ್ನು ಲಘು ಆಹಾರವಾಗಿ ಸೇವಿಸುವುದರಿಂದ ಗ್ಲೈಸೆಮಿಕ್ ನಿಯಂತ್ರಣ, ರಕ್ತದೊತ್ತಡ, ಬೊಜ್ಜು ಮತ್ತು ಮಧುಮೇಹ ರೋಗಿಗಳಲ್ಲಿ ಉರಿಯೂತದ ಮೇಲೆ ಪ್ರಯೋಜನಕಾರಿ ಪರಿಣಾಮ ಬೀರುತ್ತದೆ. ಆದ್ದರಿಂದ, ನೀವು ಇದನ್ನು ನಿಯಮಿತ ಆಹಾರದಲ್ಲಿ ಸೇರಿಸಿಕೊಳ್ಳಬಹುದು ಎಂದು ತಿಳಿಸಿದೆ.

ಮಧುಮೇಹಿಗಳು ಪಿಸ್ತಾ ತಿನ್ನುವುದರಿಂದ ಸಿಗುವ 7 ಆರೋಗ್ಯ ಪ್ರಯೋಜನಗಳು;

ಫೈಬರ್, ಆರೋಗ್ಯಕರ ಕೊಬ್ಬುಗಳು ಮತ್ತು ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಪಿಸ್ತಾಗಳು ನಿಮ್ಮ ದೇಹಕ್ಕೆ ಉತ್ತಮವಾಗಿದೆ ಎಂದು ಪೌಷ್ಟಿಕ ತಜ್ಞ ವಿಧಿ ಚಾವ್ಲಾ ಹೇಳುತ್ತಾರೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಇದು ಹೇಗೆ ಸಹಾಯ ಮಾಡುತ್ತದೆ ಎಂಬುದು ಇಲ್ಲಿದೆ:

1. ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ

ಪಿಸ್ತಾಗಳು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವನ್ನು (ಜಿಐ) ಹೊಂದಿವೆ, ಕಡಿಮೆ ಗ್ಲೈಸೆಮಿಕ್ ಆಹಾರವನ್ನು ಸೇವಿಸುವುದು ಮಧುಮೇಹಿಗಳಿಗೆ ಅತೀ ಮುಖ್ಯಯವಾಗಿದೆ. ಏಕೆಂದರೆ ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಹಠಾತ್ ಸ್ಪೈಕ್ ಮತ್ತು ಕುಸಿತವನ್ನು ತಡೆಯಲು ಸಹಾಯ ಮಾಡುತ್ತದೆ. “ಪಿಸ್ತಾದಂತಹ ಕಡಿಮೆ- ಜಿಐ ಆಹಾರಗಳಿಂದ ಗ್ಲುಕೋಸ್ ಕ್ರಮೇಣ ಮತ್ತು ಸ್ಥಿರವಾಗಿ ಬಿಡುಗಡೆಯಾಗುವುದರಿಂದ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಉತ್ತಮ ಕೊಡುಗೆ ನೀಡಬಹುದು, ಇದು ಮಧುಮೇಹಿಗಳಿಗೆ ಸೂಕ್ತವಾದ ತಿಂಡಿಯ ಆಯ್ಕೆಯಾಗಿದೆ” ಎಂದು ಚಾವ್ಲಾ ಹೇಳುತ್ತಾರೆ.

2. ಫೈಬರ್ ಸಮೃದ್ಧವಾಗಿದೆ

ಪಿಸ್ತಾದಲ್ಲಿ ನಿರ್ದಿಷ್ಟವಾಗಿ ಕರಗುವ ಫೈಬರ್ ಸಮೃದ್ಧವಾಗಿದೆದ್ದು, ಈ ರೀತಿಯ ಫೈಬರ್ ಜೀರ್ಣಾಂಗವ್ಯೂಹದಲ್ಲಿ ಜೆಲ್ ತರಹದ ವಸ್ತುವನ್ನು ರೂಪಿಸುತ್ತದೆ, ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಊಟದ ನಂತರ ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ಕಡಿಮೆ ಮಾಡುತ್ತದೆ. ಪಿಸ್ತಾದಲ್ಲಿನ ಫೈಬರ್ ಅಂಶವು ಸ್ವಲ್ಪ ಊಟ ಮಾಡಿದರೂ ಕೂಡ ಸಂತೃಪ್ತಿಯನ್ನು ಉತ್ತೇಜಿಸುತ್ತದೆ. ಹಾಗಾಗಿ ಇದು ವ್ಯಕ್ತಿಗಳು ತಮ್ಮ ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಇದು ಮಧುಮೇಹ ನಿರ್ವಹಣೆಯ ಮತ್ತೊಂದು ಪ್ರಮುಖ ಅಂಶವಾಗಿದೆ.

3. ಆರೋಗ್ಯಕರ ಕೊಬ್ಬುಗಳನ್ನು ಹೊಂದಿದೆ

ರಕ್ತದಲ್ಲಿನ ಸಕ್ಕರೆ ಮಟ್ಟಗಳ ಮೇಲೆ ಅವುಗಳ ಪ್ರಭಾವವನ್ನು ಮೀರಿ, ಪಿಸ್ತಾಗಳು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ, ಉದಾಹರಣೆಗೆ ಮೊನೊಸ್ಯಾಚುರೇಟೆಡ್ ಮತ್ತು ಪಾಲಿಅನ್ ಸ್ಯಾಚುರೇಟೆಡ್ ಕೊಬ್ಬುಗಳು. “ಈ ಕೊಬ್ಬುಗಳು ಮಧುಮೇಹದ ಪ್ರಮುಖ ಅಂಶವಾದ ಸುಧಾರಿತ ಇನ್ಸುಲಿನ್ಗೆ ಸಂಬಂಧ ಹೊಂದಿವೆ” ಎಂದು ಚಾವ್ಲಾ ಹೇಳುತ್ತಾರೆ. ನಿಮ್ಮ ಆಹಾರದಲ್ಲಿ ಪಿಸ್ತಾವನ್ನು ಸೇರಿಸುವ ಮೂಲಕ, ಮಧುಮೇಹ ಹೊಂದಿರುವ ವ್ಯಕ್ತಿಗಳು ಇನ್ಸುಲಿನ್ ಗೆ ತಮ್ಮ ದೇಹದ ಪ್ರತಿಕ್ರಿಯೆಯನ್ನು ಹೆಚ್ಚಿಸಿಕೊಳ್ಳಬಹುದು. ಇನ್ನು ಹೆಚ್ಚಿನ ಇನ್ಸುಲಿನ್ ಪ್ರಮಾಣಗಳ ಅಗತ್ಯವನ್ನು ಕಡಿಮೆ ಮಾಡಬಹುದು.

4. ಹೆಚ್ಚಿನ ಪ್ರೋಟೀನ್ ಅಂಶವನ್ನು ಹೊಂದಿದೆ

ಪಿಸ್ತಾಗಳು ಪ್ರೋಟೀನ್ ನ ಉತ್ತಮ ಮೂಲವಾಗಿದೆ, ಇದು ಸ್ನಾಯುವಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಹೊಟ್ಟೆ ತುಂಬಿದ ಭಾವನೆಯನ್ನು ಉತ್ತೇಜಿಸಲು ಅವಶ್ಯಕವಾಗಿದೆ. ಊಟ ಮತ್ತು ತಿಂಡಿಗಳಲ್ಲಿ ಪ್ರೋಟೀನ್ ಭರಿತ ಆಹಾರವನ್ನು ಸೇರಿಸುವುದರಿಂದ ಮಧುಮೇಹಿಗಳು ತಮ್ಮ ಹಸಿವನ್ನು ನಿರ್ವಹಿಸಲು ಮತ್ತು ಅತಿಯಾಗಿ ತಿನ್ನುವುದನ್ನು ತಡೆಯಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಕಾರ್ಬೋಹೈಡ್ರೇಟ್ಗಳ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಪ್ರೋಟೀನ್ ಸಹಾಯ ಮಾಡುತ್ತದೆ.

5. ಉತ್ಕರ್ಷಣ ನಿರೋಧಕಗಳಿಂದ ತುಂಬಿದೆ

ಪಿಸ್ತಾದ ಒಂದು ಗಮನಾರ್ಹ ಪ್ರಯೋಜನವೆಂದರೆ ಅವುಗಳ ಉತ್ಕರ್ಷಣ ನಿರೋಧಕ ಅಂಶ. ಆಂಟಿಆಕ್ಸಿಡೆಂಟ್ಗಳು ದೇಹದಲ್ಲಿ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ, ಇವೆರಡೂ ಮಧುಮೇಹ ಸಂಬಂಧಿತ ಸಮಸ್ಯೆಗಳಿಗೆ ಸಂಬಂಧಿಸಿವೆ. ಪಿಸ್ತಾದಂತಹ ಉತ್ಕರ್ಷಣ ನಿರೋಧಕ ಭರಿತ ಆಹಾರಗಳನ್ನು ಸೇವನೆ ಮಾಡುವುದರಿಂದ ಒಟ್ಟಾರೆ ಆರೋಗ್ಯಕ್ಕೆ ಕೊಡುಗೆ ನೀಡಬಹುದು ಮತ್ತು ಹೃದ್ರೋಗ ಮತ್ತು ಕೆಲವು ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

6. ಮೆಗ್ನೀಸಿಯಮ್ ಹೇರಳವಾಗಿದೆ

“ಮೆಗ್ನೀಸಿಯಮ್ ಪಿಸ್ತಾದಲ್ಲಿ ಹೇರಳವಾಗಿರುವ ಖನಿಜವಾಗಿದೆ ಮತ್ತು ಇನ್ಸುಲಿನ್ ನಲ್ಲಿ ಪೋಷಕ ಪಾತ್ರವನ್ನು ವಹಿಸುತ್ತದೆ. ಮೆಗ್ನೀಸಿಯಮ್ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ, ಗ್ಲೂಕೋಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಮಧುಮೇಹವನ್ನು ನಿರ್ವಹಿಸಲು ಹೆಚ್ಚುವರಿ ಬೆಂಬಲವನ್ನು ಒದಗಿಸುತ್ತದೆ.

ಇದನ್ನೂ ಓದಿ: ಮಧುಮೇಹ ಆರಂಭವಾಗುವ ಲಕ್ಷಣಗಳು ಹೀಗಿರುತ್ತವೆ, ಎಚ್ಚರವಹಿಸಿ!

7. ಹೇರಳವಾದ ಪೋಷಕಾಂಶಗಳನ್ನು ಹೊಂದಿದೆ

ಈ ಅಗತ್ಯ ಪೋಷಕಾಂಶಗಳ ಹೊರತಾಗಿ, ಪಿಸ್ತಾಗಳು ವಿಟಮಿನ್ ಬಿ 6, ಥಿಯಾಮಿನ್, ರಂಜಕ ಮತ್ತು ಮೆಗ್ನೀಸಿಯಮ್ನಂತಹ ಜೀವಸತ್ವಗಳು ಮತ್ತು ಖನಿಜಗಳಿಂದ ಹೇರಳವಾಗಿದೆ. ಈ ಪೋಷಕಾಂಶಗಳು ಚಯಾಪಚಯ ಕ್ರಿಯೆ, ನರಗಳ ಕಾರ್ಯ ಮತ್ತು ಮೂಳೆಯ ಆರೋಗ್ಯವನ್ನು ಹೆಚ್ಚಿಸುವಂತಹ ವಿವಿಧ ದೈಹಿಕ ಕಾರ್ಯಗಳಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಸೂಕ್ಷ್ಮ ಪೋಷಕಾಂಶಗಳ ಸರಿಯಾದ ಸೇವನೆಯು ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ವಿಶೇಷವಾಗಿ ಮುಖ್ಯವಾಗಿದೆ, ಏಕೆಂದರೆ ಈ ಸ್ಥಿತಿಯು ಕೆಲವೊಮ್ಮೆ ಕೊರತೆಗಳು ಅಥವಾ ಅಸಮತೋಲನಗಳೊಂದಿಗೆ ಸಂಬಂಧಿಸಿದೆ.

ಮಧುಮೇಹಿಗಳು ಎಷ್ಟು ಪಿಸ್ತಾಗಳನ್ನು ತಿನ್ನಬಹುದು?

ಪಿಸ್ತಾದಲ್ಲಿ ಕಾರ್ಬೋಹೈಡ್ರೇಟ್ ಗಳು ಇರುವುದರಿಂದ ಮಧುಮೇಹ ಹೊಂದಿರುವ ವ್ಯಕ್ತಿಯು ತಮ್ಮ ಒಟ್ಟಾರೆ ಕಾರ್ಬೋಹೈಡ್ರೇಟ್ ಸೇವನೆಯ ಬಗ್ಗೆ ಜಾಗರೂಕರಾಗಿರಬೇಕು. “ಹೆಚ್ಚು ಕ್ಯಾಲೊರಿಗಳನ್ನು ಸೇವಿಸದೆ ಉತ್ತಮ ಫಲಿತಾಂಶಗಳನ್ನು ಪಡೆಯಲು ದಿನಕ್ಕೆ ಒಂದು ಔನ್ಸ್ (ಸುಮಾರು 25 ಗ್ರಾಂ) ಪಿಸ್ತಾವನ್ನು ತಿನ್ನಬಹುದು” ಎಂದು ಚಾವ್ಲಾ ಹೇಳುತ್ತಾರೆ.

ಆರೋಗ್ಯ ಸಂಬಂಧಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್