Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಿನ್ಯದಿಂದ ಚರ್ಮ ರೋಗ ಬರದಂತೆ ತಡೆಯಲು ವೈದ್ಯರು ನೀಡಿರುವ ಸಲಹೆ ಪಾಲಿಸಿ

ವಾಯುಮಾಲಿನ್ಯ ಹೆಚ್ಚಾಗಿದೆ. ಇದು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ ಜೊತೆಗೆ ಅನೇಕ ರೀತಿಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಇದು ಚರ್ಮದ ಮೇಲೂ ಪರಿಣಾಮ ಬೀರುತ್ತದೆ. ಪ್ರಸ್ತುತ ನಿಮ್ಮ ಚರ್ಮದ ಮೇಲೆ ಊತ, ತುರಿಕೆ, ದದ್ದುಗಳು ಮತ್ತು ಕಪ್ಪು ಕಲೆಗಳು ಪದೇ ಪದೇ ಕಂಡುಬರುತ್ತಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ಇವು ಮಾಲಿನ್ಯದಿಂದ ಉಂಟಾಗುವ ಚರ್ಮ ರೋಗಗಳ ಆರಂಭಿಕ ಚಿಹ್ನೆಗಳಾಗಿವೆ. ಹಾಗಾದರೆ ಮಾಲಿನ್ಯದಿಂದ ಯಾವ ರೀತಿಯ ಚರ್ಮ ರೋಗಗಳು ಬರುತ್ತವೆ?ಅವುಗಳನ್ನು ಹೇಗೆ ತಡೆಗಟ್ಟಬಹುದು? ಇಲ್ಲಿದೆ ವೈದ್ಯರು ನೀಡಿದ ಸಲಹೆ.

ಮಾಲಿನ್ಯದಿಂದ ಚರ್ಮ ರೋಗ ಬರದಂತೆ ತಡೆಯಲು ವೈದ್ಯರು ನೀಡಿರುವ ಸಲಹೆ ಪಾಲಿಸಿ
Pollution can damage skin
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Nov 27, 2024 | 8:50 PM

ದೇಶದ ಹಲವು ಭಾಗಗಳಲ್ಲಿ ವಾಯುಮಾಲಿನ್ಯದ ಮಟ್ಟವು ಸಾಕಷ್ಟು ಹೆಚ್ಚಾಗಿದೆ. ಇದು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ ಜೊತೆಗೆ ಅನೇಕ ರೀತಿಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಇದು ಚರ್ಮದ ಮೇಲೂ ಪರಿಣಾಮ ಬೀರುತ್ತದೆ. ಪ್ರಸ್ತುತ ನಿಮ್ಮ ಚರ್ಮದ ಮೇಲೆ ಊತ, ತುರಿಕೆ, ದದ್ದುಗಳು ಮತ್ತು ಕಪ್ಪು ಕಲೆಗಳು ಪದೇ ಪದೇ ಕಂಡುಬರುತ್ತಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ಇವು ಮಾಲಿನ್ಯದಿಂದ ಉಂಟಾಗುವ ಚರ್ಮ ರೋಗಗಳ ಆರಂಭಿಕ ಚಿಹ್ನೆಗಳಾಗಿವೆ. ಹಾಗಾದರೆ ಮಾಲಿನ್ಯದಿಂದ ಯಾವ ರೀತಿಯ ಚರ್ಮ ರೋಗಗಳು ಬರುತ್ತವೆ?ಅವುಗಳನ್ನು ಹೇಗೆ ತಡೆಗಟ್ಟಬಹುದು? ಇಲ್ಲಿದೆ ವೈದ್ಯರು ನೀಡಿದ ಸಲಹೆ.

ಚರ್ಮರೋಗ ತಜ್ಞ ಡಾ. ಭಾವುಕ್ ಧೀರ್ ಅವರು ಹೇಳಿರುವ ಪ್ರಕಾರ, ಮಾಲಿನ್ಯದಿಂದ ವಿವಿಧ ರೀತಿಯ ಚರ್ಮ ರೋಗಗಳು ಕಂಡು ಬರಬಹುದು. ಮಾಲಿನ್ಯವು ಎಸ್ಜಿಮಾ ಎಂಬ ಚರ್ಮದ ಸ್ಥಿತಿಗೆ ಕಾರಣವಾಗಬಹುದು, ಇದು ಚರ್ಮದಲ್ಲಿ ಉರಿಯೂತ ಮತ್ತು ತುರಿಕೆಗೆ ಕಾರಣವಾಗುತ್ತದೆ. ಅದಲ್ಲದೆ ಮಾಲಿನ್ಯದಿಂದಾಗಿ ಮೊಡವೆ ಸಮಸ್ಯೆಗಳು ಸಹ ಕಂಡುಬರಬಹುದು, ಇದು ಚರ್ಮದ ಮೇಲೆ ದದ್ದುಗಳು ಮತ್ತು ಕಲೆಗಳಿಗೆ ಕಾರಣವಾಗುತ್ತದೆ. ಕೆಲವರಿಗೆ ಚರ್ಮದಲ್ಲಿ ತುರಿಕೆ ಕಂಡು ಬರುತ್ತದೆ. ಈ ಎಲ್ಲಾ ಸಮಸ್ಯೆಗಳು ಮೊದಲಿಗೆ ಸಾಕಷ್ಟು ಸೌಮ್ಯವೆಂದು ತೋರಬಹುದು, ಆದರೆ ಕ್ರಮೇಣ ಉಲ್ಬಣಗೊಳ್ಳಲು ಪ್ರಾರಂಭಿಸುತ್ತವೆ. ಆದ್ದರಿಂದ, ಆರಂಭಿಕ ಹಂತದಲ್ಲಿ ಗುರುತಿಸುವುದು ಬಹಳ ಒಳ್ಳೆಯದು.

ಮಾಲಿನ್ಯವು ಚರ್ಮವನ್ನು ಹೇಗೆ ಹಾನಿಗೊಳಿಸುತ್ತದೆ?

ಮಾಲಿನ್ಯದಲ್ಲಿರುವ ಕಣಗಳು ಚರ್ಮದೊಂದಿಗೆ ಸಂಪರ್ಕಕ್ಕೆ ಬಂದು ಅಲ್ಲಿ ಸಂಗ್ರಹವಾಗುತ್ತವೆ ಎಂದು ಡಾ. ಧೀರ್ ವಿವರಿಸುತ್ತಾರೆ. ಮಾಲಿನ್ಯವು ಧೂಳು, ಕೊಳೆ ಮತ್ತು ಚರ್ಮಕ್ಕೆ ಹಾನಿ ಮಾಡುವ ಸಣ್ಣ ಪಿಎಂ 2.5 ಕಣಗಳನ್ನು ಹೊಂದಿರುತ್ತದೆ. ಅನೇಕ ಗಂಟೆಗಳ ಕಾಲ ಹೊರಗೆ ಇರುವ ಜನರು ಮಾಲಿನ್ಯದಿಂದಾಗಿ ಚರ್ಮ ರೋಗಗಳಿಗೆ ತುತ್ತಾಗುವ ಅಪಾಯದಲ್ಲಿರುತ್ತಾರೆ.

ಇದನ್ನೂ ಓದಿ: ನೀವು ಅತಿಯಾದ ಚಳಿಯಿಂದ ಬಳಲುತ್ತಿದ್ದೀರಾ? ಈ ಪೋಷಕಾಂಶದ ಕೊರತೆಯೇ ಕಾರಣ

ಮಾಲಿನ್ಯದಿಂದ ಚರ್ಮವನ್ನು ರಕ್ಷಿಸುವುದು ಹೇಗೆ?

  • ದಿನಕ್ಕೆ ಕನಿಷ್ಠ 6 ರಿಂದ 7 ಲೋಟ ನೀರು ಕುಡಿಯಿರಿ. ಚರ್ಮದ ಮೇಲೆ ಊತ, ಕೆಂಪು ಕಲೆಗಳು ಅಥವಾ ದದ್ದುಗಳು ಇದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.
  • ಮಾಸ್ಕ್ ಧರಿಸುವುದರಿಂದ ಚರ್ಮ ಆರೋಗ್ಯವಾಗಿರುತ್ತದೆ. ಹೊರಗೆ ಹೋಗುವಾಗ ಯಾವಾಗಲೂ ಮಾಸ್ಕ್ ಧರಿಸಿ.
  • ನಿಯಮಿತವಾಗಿ ಸ್ವಚ್ಛಗೊಳಿಸಿ, ಮಾಯಿಶ್ಚರೈಸ್ ಮಾಡಿ ಮತ್ತು ಸನ್ ಸ್ಕ್ರಿನ್ ಹಚ್ಚಿಕೊಳ್ಳಿ.
  • ಆರೋಗ್ಯಕರ ಆಹಾರವು ಮಾಲಿನ್ಯದ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿಕೊಳ್ಳಿ. ಹೊರಗೆ ಹೋಗುವಾಗ ನಿಮ್ಮ ಮುಖವನ್ನು ಆದಷ್ಟು ಮುಚ್ಚಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ