AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯಿರುವ ದಾಳಿಂಬೆ ಹಣ್ಣು ಹೃದಯ ಆರೋಗ್ಯದ ಜೊತೆಗೆ ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಒಳ್ಳೆಯದು

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುವ ದಾಳಿಂಬೆ ಹಣ್ಣು ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದರ ಬಗ್ಗೆ ತಿಳಿಯಿರಿ.

ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯಿರುವ ದಾಳಿಂಬೆ ಹಣ್ಣು ಹೃದಯ ಆರೋಗ್ಯದ ಜೊತೆಗೆ ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಒಳ್ಳೆಯದು
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Oct 13, 2021 | 8:10 AM

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿವಹಿಸುವುದು ತುಂಬಾ ಮುಖ್ಯ. ಹಾಗಿರುವಾಗ ಪೌಷ್ಟಿಕಯುಕ್ತ ಆಹಾರ ಜತೆಗೆ ತರಕಾರಿಗಳು ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವ ಅಭ್ಯಾಸವನ್ನು ಮಾಡಿಕೊಳ್ಳಿ. ವಿವಿಧ ಹಣ್ಣುಗಳಲ್ಲಿ ಬೇರೆ ಬೇರೆ ತೆರೆನಾದ ಪೌಷ್ಠಿಕಾಂಶಗಳನ್ನು ಪಡೆಯಬಹುದು. ಹಾಗಿರುವಾಗ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುವ ದಾಳಿಂಬೆ ಹಣ್ಣು ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದರ ಬಗ್ಗೆ ತಿಳಿಯಿರಿ.

ಉತ್ಕರ್ಷಣ ನಿರೋಧಕ ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ದಾಳಿಂಬೆ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳಿವೆ. ಜತೆಗೆ ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ. ದಾಳಿಂಬೆ ರಸವು ಪೌಷ್ಠಿಕಾಂಶವನ್ನು ನೀಡುವ ಮೂಲಕ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ ಜತೆಗೆ ಎಲ್​ಡಿಎಲ್​ ಕೊಲೆಸ್ಟ್ರಾಲ್ಅನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ದಾಳಿಂಬೆ ಸೇವನೆ ಉತ್ತಮ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಒಂದೂವರೆ ಕಪ್ ದಾಳಿಂಬೆ ಬೀಜದಲ್ಲಿ 72 ಕ್ಯಾಲೊರಿ, 3.5 ಗ್ರಾಂ ಫೈಬರ್ ಮತ್ತು 12 ಗ್ರಾಂ ಸಕ್ಕರೆಯ ಪ್ರಮಾಣವಿರುತ್ತದೆ. ಹಣ್ಣಿನ ಸಲಾಡ್ ಮಾಡಿ ಸವಿಯುವ ಮೂಲಕವೂ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ದಾಳಿಂಬೆಯಲ್ಲಿರುವ ಆಂಟಿಆಕ್ಸಿಡೆಂಟ್ ಸಂಯುಕ್ತಗಳು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ದಾಳಿಂಬೆ ರಸದಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಲ್ಲಿ ಶಕ್ತಿ ಹೆಚ್ಚಿಸಲು ಸಹಾಯಕವಾಗಿದೆ. ಜತೆಗೆ ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಣ್ಣನ್ನು ಸವಿಯುವ ಮೂಲಕ ಅಥವಾ ದಾಳಿಂಬೆ ಜ್ಯೂಸ್ ಸವಿಯುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Tips: ಚೀನಿಕಾಯಿ ಬೀಜ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮದ ಬಗ್ಗೆಯೂ ಗಮನ ಇರಲಿ

Health Tips: ಪ್ರತಿನಿತ್ಯ ನೀವು ಮಾಡುವ ಈ ಕೆಲವು ತಪ್ಪುಗಳು ನಿಮ್ಮ ಆರೋಗ್ಯವನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!