AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಪಾತ ಆದವರು ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ತ್ವರಿತ ಪರಿಹಾರ ಸಿಗಲು ಇಲ್ಲಿದೆ ಸಲಹೆ

ಪ್ರತಿಯೊಬ್ಬ ಹೆಣ್ಣಿಗೂ ತಾಯ್ತನ ಎನ್ನುವುದು ಒಂದು ಸುಂದರ ಭಾವನೆ. ಆದರೆ ಎಲ್ಲರೂ ತಾಯಂದಿರಾಗಲು ಬಯಸುವುದಿಲ್ಲ. ಅದರಲ್ಲಿಯೂ ಇಂದಿನ ಪೀಳಿಗೆಯವರು ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಮಕ್ಕಳನ್ನು ಮಾಡಿಕೊಳ್ಳಲು ಬಯಸುವುದಿಲ್ಲ. ಹಾಗಾಗಿ ಕೆಲವೊಮ್ಮೆ, ಗರ್ಭಪಾತ ಸ್ವಯಂಪ್ರೇರಿತವಾಗಿರುತ್ತದೆ, ಮತ್ತೊಂದಿಷ್ಟು ಸಂದರ್ಭಗಳಲ್ಲಿ ಬಲವಂತವಾಗಿರುತ್ತದೆ. ಆದರೆ ಒಂದು ಹೆಣ್ಣು ಗರ್ಭಪಾತವಾದ ಮೇಲೆ ಕೆಲವು ಸಲಹೆಗಳನ್ನು ಪಾಲನೆ ಮಾಡಬೇಕಾಗುತ್ತದೆ. ಹಾಗಾದರೆ ಗರ್ಭಪಾತ ಆದವರು ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ತ್ವರಿತವಾಗಿ ಪರಿಹಾರ ಸಿಗಲು ಏನು ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಪಾತ ಆದವರು ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ತ್ವರಿತ ಪರಿಹಾರ ಸಿಗಲು ಇಲ್ಲಿದೆ ಸಲಹೆ
Healing Foods After An Abortion
ಪ್ರೀತಿ ಭಟ್​, ಗುಣವಂತೆ
|

Updated on: Aug 29, 2025 | 5:25 PM

Share

ಪ್ರತಿಯೊಬ್ಬ ಹೆಣ್ಣು ಕೂಡ ತಾಯ್ತನದ ವಿಶಿಷ್ಟ ಭಾವನೆಯನ್ನು ಆನಂದಿಸಲು ಬಯಸುತ್ತಾಳೆ. ಆದರೆ ಇದು ಎಲ್ಲರಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ತಾಯಂದಿರಾಗಲು ಎಲ್ಲರೂ ಬಯಸುವುದಿಲ್ಲ. ಅದರಲ್ಲಿಯೂ ಇಂದಿನ ಪೀಳಿಗೆಯ ಅನೇಕ ಯುವತಿಯರು ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಮಕ್ಕಳನ್ನು ಮಾಡಿಕೊಳ್ಳಲು ಬಯಸುವುದಿಲ್ಲ. ಬದಲಾಗಿ ಅವರು ತಮ್ಮದೇ ಆದ ಜೀವನವನ್ನು ನಡೆಸಲು ಬಯಸುತ್ತಾರೆ. ಇಂತಹ ಪ್ರಕ್ರಿಯೆಯಲ್ಲಿ, ಬೇಗನೆ ತಾಯಿಯಾಗಲು ಕೆಲವರು ಇಷ್ಟಪಡುವುದಿಲ್ಲ. ಹಾಗಾಗಿಯೇ ಗರ್ಭಪಾತ (Abortion) ಸ್ವಯಂಪ್ರೇರಣೆಯಿಂದಲೂ, ಇನ್ನು ಕೆಲವೊಮ್ಮೆ ಸಂದರ್ಭಗಳಿಗನುಗುಣವಾಗಿ ಆಗುತ್ತದೆ. ಹಾಗಾದರೆ ಗರ್ಭಪಾತ ಆದವರು ಯಾವ ರೀತಿಯ ಆಹಾರಗಳ ಸೇವನೆ (Healing Foods) ಮಾಡಬೇಕು? ತ್ವರಿತವಾಗಿ ಪರಿಹಾರ ಸಿಗಲು ಏನು ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರ

ಕಬ್ಬಿಣ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರಗಳನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಇದು ಸೋಂಕಿನ ಅಪಾಯವನ್ನು ತಡೆಯುತ್ತದೆ. ಇದು ರಕ್ತದಲ್ಲಿನ ಕೆಂಪು ರಕ್ತ ಕಣಗಳ ಪ್ರಮಾಣವನ್ನು ಹೆಚ್ಚಿಸುತ್ತದೆ. ಹಾಗಾಗಿ ಖರ್ಜೂರ, ಬಾದಾಮಿ, ಪಾಲಕ್, ಆಲೂಗಡ್ಡೆ, ಕ್ಯಾರೆಟ್, ಸಿಟ್ರಸ್ ಹಣ್ಣು ಮತ್ತು ಸೇಬುಗಳನ್ನು ತಿನ್ನಬಹುದು.

ಫೋಲಿಕ್ ಆಮ್ಲ ಸಮೃದ್ಧವಾಗಿರುವ ಆಹಾರ

ಗರ್ಭಪಾತದ ನಂತರ, ದೇಹದಲ್ಲಿ ಕಬ್ಬಿಣದ ಕೊರತೆ ಇರುತ್ತದೆ. ಈ ಸಮಯದಲ್ಲಿ, ನೀವು ಫೋಲಿಕ್ ಆಮ್ಲ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದು ಖಿನ್ನತೆಯಿಂದ ಚೇತರಿಸಿಕೊಳ್ಳಲು ಮತ್ತು ಕೆಂಪು ರಕ್ತ ಕಣಗಳ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಂದರೆ ಈ ಸಮಯದಲ್ಲಿ, ಆದಷ್ಟು ಬಾದಾಮಿ ಮತ್ತು ವಾಲ್ನಟ್ಗಳನ್ನು ತಿನ್ನಬೇಕು.

ಇದನ್ನೂ ಓದಿ
Image
ಚಹಾ ಕುಡಿಯುತ್ತಾ ಸ್ಟೈಲ್ ಆಗಿ ಸಿಗರೇಟ್ ಸೇದುವ ಅಭ್ಯಾಸ ನಿಮಗೂ ಇದ್ಯಾ?
Image
ಕಿವಿಯಲ್ಲಿರುವ ವಾಕ್ಸ್ ಪದೇ ಪದೇ ಸ್ವಚ್ಛಗೊಳಿಸುವವರು ಈ ಸ್ಟೋರಿ ತಪ್ಪದೆ ಓದಿ
Image
ಒಸಡುಗಳಿಂದ ರಕ್ತಸ್ರಾವವಾಗುವುದಕ್ಕೂ ಹೃದಯಕ್ಕೂ ಸಂಬಂಧವಿದೆಯೇ?
Image
ನಕಲಿ ಔಷಧಿಗಳನ್ನು ಗುರುತಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ಇದನ್ನೂ ಓದಿ: ಗರ್ಭಿಣಿಯರಲ್ಲಿ ಕ್ಯಾಲ್ಸಿಯಂ ಕೊರತೆಯಾದರೆ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತೆ ನೋಡಿ

ಕ್ಯಾಲ್ಸಿಯಂ ಅಧಿಕವಾಗಿರುವ ಆಹಾರ

ಅದೇ ರೀತಿ, ಕ್ಯಾಲ್ಸಿಯಂ ಅಧಿಕವಾಗಿರುವ ಆಹಾರವನ್ನು ಸಹ ಸೇವಿಸಬೇಕು. ಕ್ಯಾಲ್ಸಿಯಂ ಗರ್ಭಪಾತದ ನಂತರ ದೇಹವು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ಸಮಯದಲ್ಲಿ, ಹೆಚ್ಚು ಹಾಲು, ಒಣ ಹಣ್ಣುಗಳು, ಸೊಪ್ಪು ಮತ್ತು ತರಕಾರಿಗಳನ್ನು ಸೇವನೆ ಮಾಡುವುದು ಬಹಳ ಮುಖ್ಯ. ಧಾನ್ಯಗಳು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸುತ್ತದೆ. ಹಾಗಾಗಿ ಗರ್ಭಪಾತದ ನಂತರ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಓಟ್ಸ್, ಬ್ರೌನ್ ರೈಸ್ ಮತ್ತು ಕ್ವಿನೋವಾದಂತಹ ಆಹಾರಗಳನ್ನು ಸೇರಿಸಿಕೊಳ್ಳಬೇಕು. ಹೆಚ್ಚುವರಿಯಾಗಿ, ಕೋಳಿ ಮತ್ತು ಮೀನುಗಳನ್ನು ಖಂಡಿತವಾಗಿಯೂ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಆ ಮೂಲಕ ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ