Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy Care: ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ವಿಷಯಗಳನ್ನು ಪಾಲನೆ ಮಾಡಿ

ಸ್ತ್ರೀರೋಗ ತಜ್ಞೆ ಡಾ. ಸಲೋನಿ ಚಡ್ಡಾ ಹೇಳುವ ಪ್ರಕಾರ, ಬೇಸಿಗೆ ಕಾಲದಲ್ಲಿ ಗರ್ಭಿಣಿಯರು ಸಾಕಷ್ಟು ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಅದರ ಜೊತೆಗೆ ತಾಜಾ ಹಣ್ಣಿನ ರಸವನ್ನು ಸಹ ಕುಡಿಯುವುದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಮಹಿಳೆಯರು ಮೊಸರು ಮತ್ತು ಮಜ್ಜಿಗೆಯನ್ನು ಸಹ ಸೇವಿಸಬಹುದು. ಇದು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಗರ್ಭಿಣಿಯರು ಆದಷ್ಟು ಮಧ್ಯಾಹ್ನ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಗರ್ಭಿಣಿಯರು ನೆನಪಿನಲ್ಲಿಡಬೇಕಾದ ಕೆಲವು ವಿಷಯಗಳು ಇಲ್ಲಿವೆ.

Pregnancy Care: ಗರ್ಭಿಣಿಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ವಿಷಯಗಳನ್ನು ಪಾಲನೆ ಮಾಡಿ
ಗರ್ಭಿಣಿImage Credit source: Healthline
Follow us
ಪ್ರೀತಿ ಭಟ್​, ಗುಣವಂತೆ
| Updated By: ನಯನಾ ರಾಜೀವ್

Updated on: May 13, 2024 | 10:57 AM

ದೇಶದ ಅನೇಕ ರಾಜ್ಯಗಳಲ್ಲಿ ಶಾಖದ ಪ್ರಮಾಣ ಏರಿಕೆಯಾಗುತ್ತಿದ್ದು ಜನರು ಇದರಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಪರೀತ ಶಾಖದಿಂದಾಗಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತಿದೆ. ಅಲ್ಲದೆ ಈ ಋತುವಿನಲ್ಲಿ ಶಾಖದ ಆಘಾತ ಮತ್ತು ನಿರ್ಜಲೀಕರಣದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಹಾಗಾಗಿ ಗರ್ಭಿಣಿ(Pregnant)ಯರು ಬೇಸಿಗೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಏಕೆಂದರೆ ಹೆಚ್ಚಿನವರು ಆರಂಭಿಕ ತಿಂಗಳುಗಳಲ್ಲಿ ವಾಂತಿ, ತಲೆತಿರುಗುವುದು ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇದರಿಂದ ಸಹಜವಾಗಿ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಇದು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಇವೆಲ್ಲದರ ಪರಿಣಾಮ ಮಹಿಳೆಯರ ಆರೋಗ್ಯ ಹದಗೆಡುವ ಅಪಾಯವಿದೆ. ಇದು ಮಗುವಿನ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹಾಗಾಗಿ ಈ ಋತುವಿನಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ಸ್ತ್ರೀರೋಗ ತಜ್ಞೆ ಡಾ. ಸಲೋನಿ ಚಡ್ಡಾ ಹೇಳುವ ಪ್ರಕಾರ, ಬೇಸಿಗೆ ಕಾಲದಲ್ಲಿ ಗರ್ಭಿಣಿಯರು ಸಾಕಷ್ಟು ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಅದರ ಜೊತೆಗೆ ತಾಜಾ ಹಣ್ಣಿನ ರಸವನ್ನು ಸಹ ಕುಡಿಯುವುದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಮಹಿಳೆಯರು ಮೊಸರು ಮತ್ತು ಮಜ್ಜಿಗೆಯನ್ನು ಸಹ ಸೇವಿಸಬಹುದು. ಇದು ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಗರ್ಭಿಣಿಯರು ಆದಷ್ಟು ಮಧ್ಯಾಹ್ನ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಇದೆಲ್ಲದರ ಜೊತೆಗೆ ಗರ್ಭಿಣಿಯರು ನೆನಪಿನಲ್ಲಿಡಬೇಕಾದ ಕೆಲವು ವಿಷಯಗಳು ಇಲ್ಲಿವೆ.

ಬಟ್ಟೆ ಬಗ್ಗೆ ಕಾಳಜಿ ವಹಿಸಿ ಗರ್ಭಾವಸ್ಥೆಯಲ್ಲಿ ಬಟ್ಟೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಆರಾಮದಾಯಕವಾದ ಬಟ್ಟೆಗಳನ್ನು ಧರಿಸಿ. ಈ ಋತುವಿನಲ್ಲಿ ಹತ್ತಿ ಮತ್ತು ಲಿನಿನ್ ಬಟ್ಟೆಗಳು ಉತ್ತಮವಾಗಿವೆ. ಬಿಳಿ, ಕಿತ್ತಳೆ, ನಿಂಬೆ, ನೀಲಿ ಅಥವಾ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ. ಇದರೊಂದಿಗೆ ಮಹಿಳೆಯರು ತಮ್ಮ ಆಹಾರದ ಬಗ್ಗೆಯೂ ಕಾಳಜಿ ವಹಿಸಬೇಕು.

ಮತ್ತಷ್ಟು ಓದಿ: Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ಮಾಡುವ ತಪ್ಪುಗಳಿವು! 

ಈ ಆಹಾರಗಳನ್ನು ಸೇವನೆ ಮಾಡಿ ಓಟ್ ಮೀಲ್: ಇದು ಆರೋಗ್ಯಕರ ಮತ್ತು ಪೌಷ್ಟಿಕ ಆಹಾರವಾಗಿದ್ದು, ಗರ್ಭಿಣಿಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಉತ್ತಮ ಪ್ರಮಾಣದ ಫೈಬರ್, ಪ್ರೋಟೀನ್, ಖನಿಜಗಳಿದ್ದು ದೇಹಕ್ಕೆ ಶಕ್ತಿಯನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ.

ಸಿಹಿ ಆಲೂಗಡ್ಡೆ: ಗರ್ಭಿಣಿಯರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಿಹಿ ಆಲೂಗಡ್ಡೆ ಸೇವನೆಯು ಅತ್ಯುತ್ತಮ ಆಯ್ಕೆಯಾಗಿದೆ. ಇದು ವಿಟಮಿನ್ ಎ, ಸಿ, ಮತ್ತು ಪೊಟ್ಯಾಸಿಯಮ್ ನಿಂದ ಸಮೃದ್ಧವಾಗಿದೆ.

ಹಸಿರು ತರಕಾರಿಗಳು: ಹಸಿರು ತರಕಾರಿಗಳು ಗರ್ಭಿಣಿಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅವು ಉತ್ತಮ ಪ್ರಮಾಣದ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಅನ್ನು ಒಳಗೊಂಡಿರುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಉತ್ತಮವಾಗಿದೆ.

ಈ ವಿಷಯಗಳನ್ನು ಮರೆಯಬೇಡಿ -ಗರ್ಭಾವಸ್ಥೆಯಲ್ಲಿ ಹೆಚ್ಚು ಸಮಯಗಳ ಕಾಲ ನಿಂತ ಜಾಗದಲ್ಲಿಯೇ ನಿಲ್ಲಬೇಡಿ. -ಆರಾಮದಾಯಕವಾಗಿರುವ ಚಪ್ಪಲಿಗಳನ್ನು ಧರಿಸಿ. -ವೈದ್ಯರ ಸಲಹೆಯಂತೆ ಪ್ರತಿದಿನ ನಡೆಯಿರಿ. ಇದು ನಿಮ್ಮ ದೇಹವನ್ನು ಆರೋಗ್ಯವಾಗಿರಿಸುತ್ತದೆ. -ಹೆಚ್ಚು ಶಾಖ ಇರುವಾಗ ಹೊರಗೆ ಹೋಗುವುದನ್ನು ತಪ್ಪಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ