AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ, ಹೆಚ್ಚುತ್ತಿದೆ ಡೆಂಗ್ಯೂ ಕಾಯಿಲೆ; ಈ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಮುನ್ನೆಚ್ಚರಿಕೆ ವಹಿಸಿ

ಸೊಳ್ಳೆ ಕಚ್ಚಿದ ತಕ್ಷಣದಿಂದ ಈ ಕಾಯಿಲೆ ಶುರುವಾಗುವುದಿಲ್ಲ. ಕೆಲವು ದಿನಗಳ ಬಳಿಕ ಒಂದೊಂದೇ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಪ್ರಾರಂಭದಲ್ಲಿ ಸಾಮಾನ್ಯ ವೈರಲ್ ಜ್ವರದಂತೆ ಇದ್ದರೂ ಕೂಡ ದೇಹದಲ್ಲಿ ಪ್ಲೇಟ್​ಲೆಟ್​  ಕಡಿಮೆ ಮಾಡುತ್ತ ಹೋಗುತ್ತದೆ.

ಎಚ್ಚರ, ಹೆಚ್ಚುತ್ತಿದೆ ಡೆಂಗ್ಯೂ ಕಾಯಿಲೆ; ಈ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಮುನ್ನೆಚ್ಚರಿಕೆ ವಹಿಸಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 14, 2022 | 9:43 AM

ಡೆಂಗ್ಯೂ ಎಂಬುದು ಸೊಳ್ಳೆಯಿಂದ ಹರಡುವ ಒಂದು ರೋಗ. ಸೂಕ್ತ ಸಮಯದಲ್ಲಿ ಚಿಕಿತ್ಸೆ ಬೀಳದೆ ಇದ್ದರೆ ಅದು ಮಾರಣಾಂತಿಕ. ಈಡಿಸ್ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಬರುವ ಡೆಂಗ್ಯೂ ಪ್ರಾರಂಭದಲ್ಲಿ ಸಣ್ಣ ಪ್ರಮಾಣದ ಜ್ವರಕ್ಕೆ ಕಾರಣವಾಗುತ್ತದೆ. ಆದರೆ ಬರುಬರುತ್ತ ಅದರ ತೀವ್ರತೆ ಹೆಚ್ಚುತ್ತದೆ. ಡೆಂಗ್ಯೂ ಜ್ವರ ಸರಿಯಾದ ಸಮಯದಲ್ಲಿ ಪತ್ತೆಯಾಗದೆ, ಸೂಕ್ತ ಚಿಕಿತ್ಸೆ ಬೀಳದೆ ಇದ್ದರೆ ಪ್ರಾಣಕ್ಕೆ ಸಂಚಕಾರ. ಸಾಮಾನ್ಯವಾಗಿ ಉಷ್ಣವಲಯ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಈ ಡೆಂಗ್ಯೂ ಕಾಣಿಸಿಕೊಳ್ಳುವುದು ಹೆಚ್ಚು. ಇದೀಗ ದೆಹಲಿ ಮತ್ತು ಇತರ ಕೆಲವು ನಗರಗಳಲ್ಲಿ ಡೆಂಗ್ಯೂ ಪ್ರಮಾಣ ಹೆಚ್ಚುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ದೆಹಲಿಯಲ್ಲಿ 22 ಡೆಂಗ್ಯೂ ಕೇಸ್​ಗಳು ದಾಖಲಾಗಿದ್ದು ಈ ವರ್ಷದಿಂದ ಇಲ್ಲಿಯವರೆಗೆ ಒಟ್ಟು 61 ಪ್ರಕರಣಗಳು ಕಾಣಿಸಿಕೊಂಡಿವೆ. 

ಸೊಳ್ಳೆ ಕಚ್ಚಿದ ತಕ್ಷಣದಿಂದ ಈ ಕಾಯಿಲೆ ಶುರುವಾಗುವುದಿಲ್ಲ. ಕೆಲವು ದಿನಗಳ ಬಳಿಕ ಒಂದೊಂದೇ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಪ್ರಾರಂಭದಲ್ಲಿ ಸಾಮಾನ್ಯ ವೈರಲ್ ಜ್ವರದಂತೆ ಇದ್ದರೂ ಕೂಡ ದೇಹದಲ್ಲಿ ಪ್ಲೇಟ್​ಲೆಟ್​  ಕಡಿಮೆ ಮಾಡುತ್ತ ಹೋಗುತ್ತದೆ. ಇಲ್ಲಿದೆ ನೋಡಿ..ಡೆಂಗ್ಯೂದ ಸಾಮಾನ್ಯ ಲಕ್ಷಣಗಳು.

1. ಅತಿಯಾದ ಜ್ವರ, ತಲೆನೋವು, ಮಾಂಸಖಂಡ, ಎಲುಬು ಮತ್ತು ಕೀಲು ನೋವು 2. ವಾಕರಿಕೆ, ವಾಂತಿ, ಕಣ್ಣುಗಳ ಹಿಂದೆ ಅತಿಯಾದ ನೋವು 3. ಗ್ರಂಥಿಗಳು ಊದಿಕೊಳ್ಳುವುದು, ಮೈಮೇಲೆ ಕೆಂಪು ದದ್ದಿ 4. ಅತಿಯಾದ ಹೊಟ್ಟೆನೋವು, ನಿರಂತರ ವಾಂತಿ 5. ದಂತದಲ್ಲಿ, ಮೂಗಿನಲ್ಲಿ ರಕ್ತಸ್ರಾವ 6. ಮೂತ್ರದಲ್ಲಿ, ಮಲ ಮತ್ತು ವಾಂತಿಯಲ್ಲಿ ರಕ್ತ ಹೋಗುತ್ತದೆ (ಇದೆಲ್ಲ ಡೆಂಗ್ಯೂದ ಗಂಭೀರ ಸ್ವರೂಪಗಳು.) 7. ಉಸಿರಾಟದಲ್ಲಿ ತೀವ್ರ ತೊಂದರೆ, ಆಯಾಸ, ಕಿರಿಕಿರಿ.

ಡೆಂಗ್ಯೂ ತಡೆಗೆ ಏನೆಲ್ಲ ಮಾಡಬಹುದು

ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಅದು ಬಾರದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದು ಉತ್ತಮ ಎಂಬ ಮಾತಿದೆ. ಹಾಗೇ, ಡೆಂಗ್ಯೂದಿಂದ ಪಾರಾಗಲು ನೀವು ಈ ಎಲ್ಲ ಮುನ್ನೆಚ್ಚರಿಕೆ ವಹಿಸಬಹುದು

1. ಮನೆಯ ಸುತ್ತಮುತ್ತ, ಮನೆಯೊಳಗೆ ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳು ಬಾರದಂತೆ ತಡೆಯಿರಿ. ಮನೆಯೊಳಗೆ ಸಾಧ್ಯವಾದಷ್ಟು ಸೊಳ್ಳೆ ಪರದೆಗಳನ್ನು, ಇನ್ನಿತರ ನಿವಾರಕಗಳನ್ನು ಉಪಯೋಗಿಸಿ. 2. ಹೊರಹೋಗುವ ಸಂದರ್ಭದಲ್ಲಿ ಉದ್ದನೆಯ ತೋಳಿನ ಶರ್ಟ್​, ಅಂಗಿಯನ್ನು ಧರಿಸಿ. ಒಟ್ಟಾರೆ ಮೈಯನ್ನು ಪೂರ್ಣವಾಗಿ ಮುಚ್ಚುವ ಉಡುಪುಗಳಿಗೆ ಆದ್ಯತೆ ನೀಡಿದೆ. 3. ಸಾಧ್ಯವಾದರೆ ಮನೆಯಲ್ಲಿ ಏರ್​ ಕಂಡೀಶನರ್​ ಬಳಸಿ. ಬಾಗಿಲು, ಕಿಟಕಿಗಳನ್ನು ಮುಚ್ಚಿ. ಕಿಟಕಿಗಳಿಗೆ ಸೊಳ್ಳೆ ನಿವಾರಕ ಪರದೆಗಳನ್ನು ಹಾಕಿ. 4.  ನಾವು ಮೇಲೆ ಹೇಳಿರುವ ಯಾವುದೇ ಲಕ್ಷಣಗಳೂ ಕಂಡುಬಂದಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ. 5. ಮನೆಯ ಆಸುಪಾಸು ಟೈರ್​ಗಳಲ್ಲಿ ನೀರು ನಿಲ್ಲದಂತೆ, ಟ್ಯಾಂಕ್​ಗಳಲ್ಲಿ ನೀರು ಸಂಗ್ರಹಿಸುವುದು ಮಾಡಬೇಡಿ. ಇದರಿಂದ ಸೊಳ್ಳೆಗಳ ಉತ್ಪತ್ತಿಯಾಗುತ್ತದೆ. ಹಾಗೇ ಏರ್​ ಕೂಲರ್​ನ ನೀರನ್ನೂ ದಿನವೂ ಬದಲಿಸಿ.

ಇದನ್ನೂ ಓದಿ: ಸಂತೋಷ್ ಪಾಟೀಲ್ ಮೃತದೇಹ ಗುಣಿಗಿಟ್ಟ ಮೇಲೆ ಹೈಡ್ರಾಮ: ಗೊಂದಲದ ನಡುವೆ ಸಮಾಧಿಗೆ ಜೆಸಿಬಿಯಿಂದ ಮಣ್ಣು

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ