Sign In

By signing in or creating an account, you agree with Associated Broadcasting Company's Terms & Conditions and Privacy Policy.

Prostate cancer: ಪುರುಷರೇ, ಈ ರೀತಿಯ ಲಕ್ಷಣಗಳು ಕಂಡು ಬಂದಾಗ ತಕ್ಷಣ ವೈದ್ಯರನ್ನು ಭೇಟಿ ಮಾಡಿ

ಆರೋಗ್ಯ ತಜ್ಞರು ಹೇಳುವ ಪ್ರಕಾರ, 50 ವರ್ಷದ ನಂತರ, ಪ್ರತಿಯೊಬ್ಬ ಪುರುಷನು ಪ್ರಾಸ್ಟೇಟ್ ಸಂಬಂಧಿತ ಪರೀಕ್ಷೆಗಳಿಗೆ ಒಳಗಾಗಬೇಕು, ಇದರಿಂದ ರೋಗವನ್ನು ಸಮಯೋಚಿತವಾಗಿ ಪತ್ತೆಹಚ್ಚುವ ಮೂಲಕ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಬಹುದು. ಇಲ್ಲವಾದಲ್ಲಿ ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಪ್ರಾಸ್ಟೇಟ್ ಕ್ಯಾನ್ಸರ್ ಕಂಡುಬರುವುದಕ್ಕೆ ಕಾರಣವೇನು? ಇದರ ಲಕ್ಷಣಗಳೇನು? ಇದನ್ನು ಹೇಗೆ ತಡೆಯಬಹುದು ಎಂಬುದನ್ನು ತಿಳಿದುಕೊಳ್ಳಿ.

Prostate cancer: ಪುರುಷರೇ, ಈ ರೀತಿಯ ಲಕ್ಷಣಗಳು ಕಂಡು ಬಂದಾಗ ತಕ್ಷಣ ವೈದ್ಯರನ್ನು ಭೇಟಿ ಮಾಡಿ
ಸಾಂದರ್ಘಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 21, 2025 | 12:59 PM

ವಯಸ್ಸಾದಂತೆ, ಪುರುಷರಲ್ಲಿ ಹೆಚ್ಚಾಗಿ ಮೂತ್ರವಿಸರ್ಜನೆಗೆ (Urination) ಸಂಬಂಧಿಸಿದ ಸಮಸ್ಯೆ ಕಂಡುಬರಲು ಆರಂಭವಾಗುತ್ತದೆ. ಇದು ಸಾಮಾನ್ಯ ಸಮಸ್ಯೆಯಾಗಿದ್ದರೂ ಕೂಡ ಇದು ದೀರ್ಘಕಾಲದ ವರೆಗೆ ಮುಂದುವರಿದಲ್ಲಿ ಬಹಳ ಅಪಾಯಕಾರಿ ಆಗಬಹುದು. ಅದಲ್ಲದೆ ಮೂತ್ರದ ಹರಿವು ಸರಿಯಾಗಿ ಇರದಿದ್ದರೂ ಕೂಡ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ. ಏಕೆಂದರೆ ಇದು ಪ್ರಾಸ್ಟೇಟ್ ಕ್ಯಾನ್ಸರ್ (Prostate Cancer) ಆರಂಭಿಕ ಲಕ್ಷಣವಾಗಿರಬಹುದು. ಆರೋಗ್ಯ ತಜ್ಞರು ಹೇಳುವ ಪ್ರಕಾರ, 50 ವರ್ಷದ ನಂತರ, ಪ್ರತಿಯೊಬ್ಬ ಪುರುಷನು ಪ್ರಾಸ್ಟೇಟ್ ಸಂಬಂಧಿತ ಪರೀಕ್ಷೆಗಳಿಗೆ ಒಳಗಾಗಬೇಕು, ಇದರಿಂದ ರೋಗವನ್ನು ಸಮಯೋಚಿತವಾಗಿ ಪತ್ತೆಹಚ್ಚುವ ಮೂಲಕ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಬಹುದು. ಇಲ್ಲವಾದಲ್ಲಿ ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಪ್ರಾಸ್ಟೇಟ್ ಕ್ಯಾನ್ಸರ್ ಕಂಡುಬರುವುದಕ್ಕೆ ಕಾರಣವೇನು? ಇದರ ಲಕ್ಷಣಗಳೇನು? ಇದನ್ನು ಹೇಗೆ ತಡೆಯಬಹುದು ಎಂಬುದನ್ನು ತಿಳಿದುಕೊಳ್ಳಿ.

ಪ್ರಾಸ್ಟೇಟ್ ಗ್ರಂಥಿಯು ಮನುಷ್ಯನ ದೇಹದಲ್ಲಿ ಮೂತ್ರಕೋಶದ ಕೆಳಗೆ ಇರುತ್ತದೆ. ಇದು ಮೂತ್ರ – ವೀರ್ಯದ ಹರಿವನ್ನು ನಿಯಂತ್ರಿಸುತ್ತದೆ. ಸಾಮಾನ್ಯವಾಗಿ ವಯಸ್ಸು ಹೆಚ್ಚಾದಂತೆ, ಈ ಗ್ರಂಥಿ ದೊಡ್ಡದಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಮೂತ್ರ ವಿಸರ್ಜನೆಯ ಸಮಯದಲ್ಲಿ ತೊಂದರೆಯನ್ನು ಉಂಟುಮಾಡುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ, ಈ ಗ್ರಂಥಿಯು ಕ್ಯಾನ್ಸರ್ ನ ಅಪಾಯ ಹೆಚ್ಚಿಸುವುದರ ಜೊತೆಗೆ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಪ್ರಾಸ್ಟೇಟ್ ಕ್ಯಾನ್ಸರ್ ನ ಲಕ್ಷಣಗಳೇನು?

ಆಗಾಗ ಮೂತ್ರವಿಸರ್ಜನೆಗೆ ಹೋಗಬೇಕು ಎನಿಸುವುದು, ರಾತ್ರಿ ಸಮಯದಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ತೊಂದರೆಯಾಗುವುದು, ಉರಿಯೂತ ಅಥವಾ ಮೂತ್ರವಿಸರ್ಜನೆಯ ಸಮಯದಲ್ಲಿ ನೋವು ಮುಂತಾದ ಚಿಹ್ನೆಗಳು ಪ್ರಾಸ್ಟೇಟ್ ಕ್ಯಾನ್ಸರ್ ಲಕ್ಷಣಗಳಾಗಿರಬಹುದು. ಇದಲ್ಲದೆ, ಮೂತ್ರ ಅಥವಾ ವೀರ್ಯದಲ್ಲಿ ರಕ್ತ, ಪೆಲ್ವಿಕ್ ಪ್ರದೇಶದಲ್ಲಿ ಅಥವಾ ಕೆಳ ಬೆನ್ನಿನಲ್ಲಿ ನಿರಂತರ ನೋವು ಸಹ ಪ್ರಾಸ್ಟೇಟ್ ಕ್ಯಾನ್ಸರ್ ಗೆ ಕಾರಣವಾಗಬಹುದು.

ಇದನ್ನೂ ಓದಿ
Image
ಕರಬೂಜ ಹಣ್ಣನ್ನು ಈ ಆರೋಗ್ಯ ಸಮಸ್ಯೆಗಳಿರುವವರು ಸೇವನೆ ಮಾಡಬೇಡಿ
Image
ಬೇಸಿಗೆಯಲ್ಲಿ ಸಿಗುವ ಈ ಹಣ್ಣನ್ನು ತಪ್ಪದೆ ಸೇವನೆ ಮಾಡಿ
Image
ಗರ್ಭವಾಸ್ಥೆಯಲ್ಲಿ ಪ್ಯಾರಾಸಿಟಮಾಲ್ ಸೇವನೆ ಅಪಾಯಕಾರಿ! ಅಧ್ಯಯನದಿಂದ ಬಹಿರಂಗ
Image
ಬಾಹ್ಯಾಕಾಶದಲ್ಲಿ ಸುನೀತಾ ವಿಲಿಯಮ್ಸ್ ಅವರ ಆಹಾರ ಹೇಗಿತ್ತು ಗೊತ್ತಾ?

ಇದನ್ನೂ ಓದಿ: ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಆಹಾರಗಳನ್ನು ಸೇವನೆ ಮಾಡಿ

ಯಾವ ರೀತಿಯ ಪುರುಷರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ?

ತಜ್ಞರ ಪ್ರಕಾರ, 50 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ಹೆಚ್ಚಾಗಿ ಈ ರೋಗಕ್ಕೆ ತುತ್ತಾಗುವ ಅಪಾಯದಲ್ಲಿದ್ದಾರೆ. ಇದಲ್ಲದೆ, ಕುಟುಂಬದಲ್ಲಿ ಯಾರಾದರೂ ಈ ಹಿಂದೆ ಪ್ರಾಸ್ಟೇಟ್ ಕ್ಯಾನ್ಸರ್ ಹೊಂದಿದ್ದರೆ ಜಾಗರೂಕರಾಗಿರುವುದು ಮುಖ್ಯ. ಕೆಟ್ಟ ಜೀವನಶೈಲಿ, ಅನಾರೋಗ್ಯಕರ ಆಹಾರ ಮತ್ತು ಬೊಜ್ಜು ಸಹ ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ 50 ವರ್ಷದ ನಂತರ ಈ ರೀತಿಯ ಲಕ್ಷಣ ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ. ಒಂದು ವೇಳೆ ಪರೀಕ್ಷಾ ವರದಿ ಪಾಸಿಟಿವ್ ಆಗಿದ್ದರೆ, ನೀವು ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಮತ್ತು ವೈದ್ಯರ ಸೂಚನೆಗಳನ್ನು ಅನುಸರಿಸಬೇಕು. ಇದಲ್ಲದೆ, ವರದಿ ನಕಾರಾತ್ಮಕವಾಗಿದ್ದರೆ ನೀವು ಈ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನೀವು ಆರೋಗ್ಯವಾಗಿರಲು ಸಾಧ್ಯ.

*ನೀವು ನಿಮ್ಮ ಆಹಾರಕ್ರಮವನ್ನು ಬದಲಾಯಿಸಬೇಕು. ಸೊಪ್ಪು, ತರಕಾರಿಗಳು ಮತ್ತು ಫೈಬರ್ ಸಮೃದ್ಧವಾಗಿರುವ ಆರೋಗ್ಯಕರ ಆಹಾರವನ್ನು ಸೇವಿಸಿ.

*ನಿಯಮಿತವಾಗಿ ವ್ಯಾಯಾಮ ಮಾಡುವ ಮೂಲಕ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ. *ಧೂಮಪಾನ – ಮದ್ಯಪಾನದಿಂದ ದೂರವಿರಿ.

*50 ವರ್ಷದ ನಂತರ, ಪ್ರತಿ ವರ್ಷ ಪ್ರಾಸ್ಟೇಟ್ ಪರೀಕ್ಷೆ ಮಾಡಿಸಿಕೊಳ್ಳಿ.

ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಿದರೆ, ಅದಕ್ಕೆ ಚಿಕಿತ್ಸೆ ನೀಡಬಹುದು ಎಂದು ತಜ್ಞರು ಹೇಳುತ್ತಾರೆ. ಆದ್ದರಿಂದ, ನೀವು ಪದೇ ಪದೇ ಮೂತ್ರವಿಸರ್ಜನೆಗೆ ಹೋಗುತ್ತಿದ್ದರೆ, ನೋವು ಅಥವಾ ರಕ್ತಸ್ರಾವದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ತಕ್ಷಣ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಸರಿಯಾದ ಸಮಯದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ. ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿ.

(ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Fri, 21 March 25

ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ