AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಳಕಾಯಿ ಸಿಕ್ಕರೆ ತಿನ್ನದೆ ಇರಬೇಡಿ, ಇದರ ಪ್ರಯೋಜನ ತಿಳಿದರೆ ನೀವು ಕೂಡ ಶಾಕ್ ಆಗ್ತೀರಾ!

ಎಲ್ಲಾ ಹಣ್ಣು ಮತ್ತು ತರಕಾರಿಗಳು ಕೂಡ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದು ತಿಳಿದಿರುವ ವಿಚಾರ. ಇಂತಹ ತರಕಾರಿಗಳಲ್ಲಿ ಕುಂಬಳಕಾಯಿಯೂ ಒಂದು. ಇದೊಂದು ರೀತಿಯ ಆರೋಗ್ಯದ ಉಗ್ರಾಣವಿದ್ದಂತೆ. ಅದಕ್ಕಾಗಿಯೇ ಈ ತರಕಾರಿಯನ್ನು ಆಯುರ್ವೇದ ಔಷಧಿ ತಯಾರಿಕೆಯಲ್ಲಿಯೂ ಬಳಕೆ ಮಾಡಲಾಗುತ್ತದೆ. ಇದು ವಿಟಮಿನ್ ಎ, ಇ, ಸಿ, ಒಮೆಗಾ -3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್, ಸತು, ಸೆಲೆನಿಯಮ್, ಕಬ್ಬಿಣ ಮತ್ತು ಬೀಟಾ- ಕ್ಯಾರೋಟಿನ್ ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾದರೆ ನಾವು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿ ಕುಂಬಳಕಾಯಿಯನ್ನು ಸೇರಿಸುವುದರಿಂದಾಗುವ ಪ್ರಯೋಜನಗಳೇನು? ಯಾರಿಗೆಲ್ಲಾ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕುಂಬಳಕಾಯಿ ಸಿಕ್ಕರೆ ತಿನ್ನದೆ ಇರಬೇಡಿ, ಇದರ ಪ್ರಯೋಜನ ತಿಳಿದರೆ ನೀವು ಕೂಡ ಶಾಕ್ ಆಗ್ತೀರಾ!
ಕುಂಬಳಕಾಯಿ ಆರೋಗ್ಯ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Nov 19, 2025 | 4:26 PM

Share

ಎಲ್ಲಾ ರೀತಿಯ ಹಣ್ಣು, ತರಕಾರಿಗಳು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಕುಂಬಳಕಾಯಿಯ (Pumpkin) ವಿಷಯಕ್ಕೆ ಬಂದಾಗ, ಅದೊಂದು ರೀತಿಯ ಆರೋಗ್ಯ ಪ್ರಯೋಜನಗಳ ಉಗ್ರಾಣದಂತೆ. ಅಷ್ಟು ಉಪಯೋಗಗಳು ಈ ಒಂದು ತರಕಾರಿಯಲ್ಲಿದೆ. ಅದಕ್ಕಾಗಿಯೇ ಆಯುರ್ವೇದದಲ್ಲಿಯೂ ಕುಂಬಳಕಾಯಿಯನ್ನು ಔಷಧೀಯ ಉದ್ದೇಶಗಳಿಗಾಗಿ ಬಳಕೆ ಮಾಡಲಾಗುತ್ತದೆ. ಈ ತರಕಾರಿ ವಿಟಮಿನ್ ಎ, ಇ, ಸಿ, ಒಮೆಗಾ -3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್, ಸತು, ಸೆಲೆನಿಯಮ್, ಕಬ್ಬಿಣ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗದರೆ ನಾವು ಪ್ರತಿನಿತ್ಯ ಸೇವನೆ ಮಾಡುವ ಆಹಾರದಲ್ಲಿ ಕುಂಬಳಕಾಯಿಯನ್ನು ಸೇರಿಸುವುದರಿಂದಾಗುವ ಪ್ರಯೋಜನಗಳೇನು? ಯಾರಿಗೆಲ್ಲಾ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಕುಂಬಳಕಾಯಿಯಲ್ಲಿ ನಾರಿನಂಶ ಹೇರಳವಾಗಿದೆ. ಇದು ತೂಕವನ್ನು ಒಂದೇ ರೀತಿಯಾಗಿ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕುಂಬಳಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಾಮಾನ್ಯವಾಗಿಡಲು ಸಹ ಸಹಾಯ ಮಾಡುತ್ತದೆ.
  • ಕುಂಬಳಕಾಯಿ ರಸವು ತೂಕ ಇಳಿಸಿಕೊಳ್ಳಲು ಸಹ ಸಹಾಯ ಮಾಡುತ್ತದೆ. ಮಾತ್ರವಲ್ಲ, ಇದರ ಗುಣಲಕ್ಷಣಗಳಿಂದಾಗಿ, ಇದು ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
  • ನಮ್ಮ ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ವಿಟಮಿನ್ ಎ ಬಹಳ ಮುಖ್ಯವಾಗುತ್ತದೆ. ಕುಂಬಳಕಾಯಿಯಲ್ಲಿ ವಿಟಮಿನ್ ಎ ಹೇರಳವಾಗಿದೆ. ಮಾತ್ರವಲ್ಲ ಈ ತರಕಾರಿಯಲ್ಲಿರುವ ವಿಟಮಿನ್ ಸಿ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
  • ಕುಂಬಳಕಾಯಿ ಬೀಜಗಳಲ್ಲಿ ಟ್ರಿಪ್ಟೊಫಾನ್ ಎಂಬ ಅಮೈನೋ ಆಮ್ಲವಿದೆ. ಇದು ಸಿರೊಟೋನಿನ್ ಎಂಬ ರಾಸಾಯನಿಕದ ಉತ್ಪಾದನೆಗೆ ಸಹಾಯ ಮಾಡುತ್ತದೆ. ಸಿರೊಟೋನಿನ್ ಮಾನಸಿಕ ಶಾಂತತೆಯ ಭಾವನೆಯನ್ನು ಉತ್ತೇಜಿಸುವುದಲ್ಲದೆ, ಉತ್ತಮ ಗುಣಮಟ್ಟದ ನಿದ್ರೆ ಮಾಡುವುದಕ್ಕೂ ಕೂಡ ಸಹಾಯ ಮಾಡುತ್ತದೆ.
  • ಕುಂಬಳಕಾಯಿಯಲ್ಲಿ ಬೀಟಾ- ಕ್ಯಾರೋಟಿನ್ ಜೊತೆಗೆ ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ ಮತ್ತು ಫೋಲೇಟ್ ಸಮೃದ್ಧವಾಗಿದೆ. ಇವೆಲ್ಲವೂ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆದ್ದರಿಂದ, ನಿಯಮಿತವಾಗಿ ಆಹಾರದಲ್ಲಿ ಕುಂಬಳಕಾಯಿಯನ್ನು ಸೇರಿಸುವುದರಿಂದ ಸೋಂಕುಗಳಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.
  • ಕುಂಬಳಕಾಯಿಯಲ್ಲಿರುವ ಅನೇಕ ಪೋಷಕಾಂಶಗಳು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಕುಂಬಳಕಾಯಿಯಲ್ಲಿರುವ ವಿಟಮಿನ್ ಸಿ ಮತ್ತು ಬೀಟಾ- ಕ್ಯಾರೋಟಿನ್ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಕುಂಬಳಕಾಯಿಯಲ್ಲಿರುವ ಫೈಬರ್ ಮತ್ತು ಪೊಟ್ಯಾಸಿಯಮ್ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.
  • ಕುಂಬಳಕಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದಲ್ಲಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತವೆ. ಇದರಲ್ಲಿರುವ ಜೀವಸತ್ವಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
  • ಕುಂಬಳಕಾಯಿ ಕರುಳಿನ ಆರೋಗ್ಯವನ್ನು ಸುಧಾರಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಮಾತ್ರವಲ್ಲ, ಈ ತರಕಾರಿ ಮಧುಮೇಹವನ್ನು ತಡೆಗಟ್ಟಲು ಕೂಡ ಸಹಾಯ ಮಾಡುತ್ತದೆ.
  • ಕುಂಬಳಕಾಯಿ ಮತ್ತು ಅದರ ಬೀಜ ಸೇವನೆಯು ಪ್ರಾಸ್ಟೇಟ್ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಪುರುಷರ ಲೈಂಗಿಕ ಆರೋಗ್ಯಕ್ಕೆ ಬಹಳ ಮುಖ್ಯವಾಗಿದ್ದು ಇದನ್ನು ಸಾಮಾನ್ಯವಾಗಿ ಪ್ರಾಸ್ಟೇಟ್ ಗ್ರಂಥಿಯನ್ನು ಬಲಪಡಿಸಲು ಮತ್ತು ಪುರುಷರಲ್ಲಿನ ಆರೋಗ್ಯಕರ ಹಾರ್ಮೋನ್ ಕಾರ್ಯವನ್ನು ಉತ್ತೇಜಿಸಲು ಬಳಸಲಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!