AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pumpkin Benefits: ತೂಕ ನಷ್ಟಕ್ಕೆ ಸಹಕಾರಿ ಕುಂಬಳಕಾಯಿ ಜ್ಯೂಸ್​: ಇಲ್ಲಿದೆ ಮಾಹಿತಿ

ಕುಂಬಳಕಾಯಿ ಜ್ಯೂಸ್​ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಇದರಲ್ಲಿರುವ ಎಲ್ಲಾ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

Pumpkin Benefits: ತೂಕ ನಷ್ಟಕ್ಕೆ ಸಹಕಾರಿ ಕುಂಬಳಕಾಯಿ ಜ್ಯೂಸ್​: ಇಲ್ಲಿದೆ ಮಾಹಿತಿ
ಕುಂಬಳಕಾಯಿ ಜ್ಯೂಸ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 22, 2022 | 7:00 AM

Share

ಇಂದಿನ ದಿನಗಳಲ್ಲಿ ಫಿಟ್ ಆಗಿರುವುದು ಕೂಡ ಬಹಳ ಮುಖ್ಯ. ಏಕೆಂದರೆ ಅನೇಕ ರೋಗಗಳು ನಮ್ಮನ್ನು ಭಾದಿಸುತ್ತಿವೆ. ಆದ್ದರಿಂದ ನಿಮ್ಮ ತೂಕ ಅಧಿಕವಾಗಿದ್ದರೆ ಮತ್ತೆ ಅದನ್ನು ಕಡಿಮೆ ಮಾಡಲು ನೀವು ತುಂಬಾ ಕಷ್ಟಪಡುತ್ತಿದ್ದರೆ ಇಲ್ಲಿದೆ ಒಂದು ಸಲಹೆ. ಇದಕ್ಕಾಗಿ ನೀವು ನಿಮ್ಮ ಆಹಾರದಲ್ಲಿ ಕುಂಬಳಕಾಯಿ (Pumpkin) ಜ್ಯೂಸ್​ನ್ನು ಸೇವಿಸಿ. ಕುಂಬಳಕಾಯಿಯಲ್ಲಿ ಅನೇಕ ಔಷಧೀಯ ಗುಣಗಳಿವೆ. ಜೀವಸತ್ವಗಳು, ಫೈಬರ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ದೇಹಕ್ಕೆ ಲಭ್ಯವಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ರೋಗ ಸಮಸ್ಯೆ ನಿವಾರಣೆಯಾಗುತ್ತದೆ. ಆದರೆ ಕುಂಬಳಕಾಯಿಯ ಹೊರತಾಗಿ ಇದರ ರಸವು ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಕುಂಬಳಕಾಯಿ ಜ್ಯೂಸ್ ಕುಡಿದು ತೂಕ ಇಳಿಸಿಕೊಳ್ಳುವುದು ಹೇಗೆ ಎಂದು ಈಗ ತಿಳಿದುಕೊಳ್ಳೋಣ.

ಕುಂಬಳಕಾಯಿ ಜ್ಯೂಸ್ ಮಾಡುವ ವಿಧಾನ: 

ಕುಂಬಳಕಾಯಿ ಜ್ಯೂಸ್​ನ್ನು ತಯಾರಿಸಲು ಹಣ್ಣಾದ ಕುಂಬಳಕಾಯಿ ತುಂಡುಗಳನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಈ ತುಂಡುಗಳಿಂದ ಸಿಪ್ಪೆಗಳನ್ನು ತೆಗೆದುಹಾಕಿ. ಇದರ ನಂತರ ಒಲೆಯಲ್ಲಿ ಅಥವಾ ಕುಕ್ಕರ್‌ನಲ್ಲಿ ಬೇಯಿಸಿ. ನಂತರ ಚೆನ್ನಾಗಿ ರುಬ್ಬಿಕೊಳ್ಳಿ. ಅಲ್ಲದೆ, ಅದಕ್ಕೆ ಸೇಬಿನ ಚೂರುಗಳನ್ನು ಸೇರಿಸಿ. ಈಗ ಚೆನ್ನಾಗಿ ಮಿಶ್ರಣ ಮಾಡಿ. ಈ ಜ್ಯೂಸ್​ನ್ನು ಪ್ರತಿದಿನ ಸೇವಿಸಬಹುದು.

ಇದನ್ನೂ ಓದಿ: Healthy Juice: ಶ್ವಾಸಕೋಶಗಳು ಆರೋಗ್ಯವಾಗಿರಲು ಸೇವಿಸಿ ಈ ಜ್ಯೂಸ್​ಗಳು ​​

ಕುಂಬಳಕಾಯಿ ಜ್ಯೂಸ್​ ಕುಡಿಯುವುದರಿಂದ ಆಗುವ ಪ್ರಯೋಜನಗಳು

1. ಕುಂಬಳಕಾಯಿ ಜ್ಯೂಸ್​ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಇದರಲ್ಲಿರುವ ಎಲ್ಲಾ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಆದಾಗ್ಯೂ, ನಿಮ್ಮ ಜೀರ್ಣಕ್ರಿಯೆಯು ಉತ್ತಮವಾಗಿದ್ದರೆ ನೀವು ತೂಕ ನಷ್ಟದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುತ್ತೀರಿ.

ಇದನ್ನೂ ಓದಿ: ಏನಾದ್ರೂ ತಿಂದ ಬಳಿಕ ಚಹಾ ಕುಡಿಯುವ ಅಭ್ಯಾಸ ನಿಮಗೂ ಇದೆಯಾ, ಈ ಸಮಸ್ಯೆಗಳು ಕಾಡಬಹುದು ಎಚ್ಚರ

2. ಕುಂಬಳಕಾಯಿ ಜ್ಯೂಸ್​ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಉರಿಯೂತವನ್ನು ಕಡಿಮೆ ಮಾಡಲು ಸಹ ಉಪಯುಕ್ತವಾಗಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ