Pumpkin Benefits: ತೂಕ ನಷ್ಟಕ್ಕೆ ಸಹಕಾರಿ ಕುಂಬಳಕಾಯಿ ಜ್ಯೂಸ್​: ಇಲ್ಲಿದೆ ಮಾಹಿತಿ

ಕುಂಬಳಕಾಯಿ ಜ್ಯೂಸ್​ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಇದರಲ್ಲಿರುವ ಎಲ್ಲಾ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

Pumpkin Benefits: ತೂಕ ನಷ್ಟಕ್ಕೆ ಸಹಕಾರಿ ಕುಂಬಳಕಾಯಿ ಜ್ಯೂಸ್​: ಇಲ್ಲಿದೆ ಮಾಹಿತಿ
ಕುಂಬಳಕಾಯಿ ಜ್ಯೂಸ್ (ಪ್ರಾತಿನಿಧಿಕ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Dec 22, 2022 | 7:00 AM

ಇಂದಿನ ದಿನಗಳಲ್ಲಿ ಫಿಟ್ ಆಗಿರುವುದು ಕೂಡ ಬಹಳ ಮುಖ್ಯ. ಏಕೆಂದರೆ ಅನೇಕ ರೋಗಗಳು ನಮ್ಮನ್ನು ಭಾದಿಸುತ್ತಿವೆ. ಆದ್ದರಿಂದ ನಿಮ್ಮ ತೂಕ ಅಧಿಕವಾಗಿದ್ದರೆ ಮತ್ತೆ ಅದನ್ನು ಕಡಿಮೆ ಮಾಡಲು ನೀವು ತುಂಬಾ ಕಷ್ಟಪಡುತ್ತಿದ್ದರೆ ಇಲ್ಲಿದೆ ಒಂದು ಸಲಹೆ. ಇದಕ್ಕಾಗಿ ನೀವು ನಿಮ್ಮ ಆಹಾರದಲ್ಲಿ ಕುಂಬಳಕಾಯಿ (Pumpkin) ಜ್ಯೂಸ್​ನ್ನು ಸೇವಿಸಿ. ಕುಂಬಳಕಾಯಿಯಲ್ಲಿ ಅನೇಕ ಔಷಧೀಯ ಗುಣಗಳಿವೆ. ಜೀವಸತ್ವಗಳು, ಫೈಬರ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ದೇಹಕ್ಕೆ ಲಭ್ಯವಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ರೋಗ ಸಮಸ್ಯೆ ನಿವಾರಣೆಯಾಗುತ್ತದೆ. ಆದರೆ ಕುಂಬಳಕಾಯಿಯ ಹೊರತಾಗಿ ಇದರ ರಸವು ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಕುಂಬಳಕಾಯಿ ಜ್ಯೂಸ್ ಕುಡಿದು ತೂಕ ಇಳಿಸಿಕೊಳ್ಳುವುದು ಹೇಗೆ ಎಂದು ಈಗ ತಿಳಿದುಕೊಳ್ಳೋಣ.

ಕುಂಬಳಕಾಯಿ ಜ್ಯೂಸ್ ಮಾಡುವ ವಿಧಾನ: 

ಕುಂಬಳಕಾಯಿ ಜ್ಯೂಸ್​ನ್ನು ತಯಾರಿಸಲು ಹಣ್ಣಾದ ಕುಂಬಳಕಾಯಿ ತುಂಡುಗಳನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಈ ತುಂಡುಗಳಿಂದ ಸಿಪ್ಪೆಗಳನ್ನು ತೆಗೆದುಹಾಕಿ. ಇದರ ನಂತರ ಒಲೆಯಲ್ಲಿ ಅಥವಾ ಕುಕ್ಕರ್‌ನಲ್ಲಿ ಬೇಯಿಸಿ. ನಂತರ ಚೆನ್ನಾಗಿ ರುಬ್ಬಿಕೊಳ್ಳಿ. ಅಲ್ಲದೆ, ಅದಕ್ಕೆ ಸೇಬಿನ ಚೂರುಗಳನ್ನು ಸೇರಿಸಿ. ಈಗ ಚೆನ್ನಾಗಿ ಮಿಶ್ರಣ ಮಾಡಿ. ಈ ಜ್ಯೂಸ್​ನ್ನು ಪ್ರತಿದಿನ ಸೇವಿಸಬಹುದು.

ಇದನ್ನೂ ಓದಿ: Healthy Juice: ಶ್ವಾಸಕೋಶಗಳು ಆರೋಗ್ಯವಾಗಿರಲು ಸೇವಿಸಿ ಈ ಜ್ಯೂಸ್​ಗಳು ​​

ಕುಂಬಳಕಾಯಿ ಜ್ಯೂಸ್​ ಕುಡಿಯುವುದರಿಂದ ಆಗುವ ಪ್ರಯೋಜನಗಳು

1. ಕುಂಬಳಕಾಯಿ ಜ್ಯೂಸ್​ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಇದರಲ್ಲಿರುವ ಎಲ್ಲಾ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಆದಾಗ್ಯೂ, ನಿಮ್ಮ ಜೀರ್ಣಕ್ರಿಯೆಯು ಉತ್ತಮವಾಗಿದ್ದರೆ ನೀವು ತೂಕ ನಷ್ಟದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುತ್ತೀರಿ.

ಇದನ್ನೂ ಓದಿ: ಏನಾದ್ರೂ ತಿಂದ ಬಳಿಕ ಚಹಾ ಕುಡಿಯುವ ಅಭ್ಯಾಸ ನಿಮಗೂ ಇದೆಯಾ, ಈ ಸಮಸ್ಯೆಗಳು ಕಾಡಬಹುದು ಎಚ್ಚರ

2. ಕುಂಬಳಕಾಯಿ ಜ್ಯೂಸ್​ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಉರಿಯೂತವನ್ನು ಕಡಿಮೆ ಮಾಡಲು ಸಹ ಉಪಯುಕ್ತವಾಗಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್