AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ
ಕ್ಯೂ ಜ್ವರ
ನಯನಾ ರಾಜೀವ್
|

Updated on: Jan 27, 2023 | 2:43 PM

Share

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ. ದನ ಮತ್ತು ಮೇಕೆಗಳಿಂದ ಹರಡುವ ಈ ಬ್ಯಾಕ್ಟೀರಿಯಾದ ಸೋಂಕಿನಿಂದ, ರೋಗಿಗಳು ಜ್ವರ, ಆಯಾಸ, ತಲೆನೋವು, ಎದೆ ನೋವು ಮತ್ತು ಅತಿಸಾರದಂತಹ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೈದರಾಬಾದ್ ಮೂಲದ ರಾಷ್ಟ್ರೀಯ ಸಂಶೋಧನಾ ಕೇಂದ್ರ (NRCM) 250 ಮಾದರಿಗಳ ಪೈಕಿ 5 ಮಾಂಸದ ವ್ಯಾಪಾರಿಗಳಿಗೆ ಕಾಕ್ಸಿಯೆಲ್ಲಾ ಬರ್ನೆಟೈ ಎಂಬ ಬ್ಯಾಕ್ಟೀರಿಯಂನಿಂದ Q ಜ್ವರ ಕಂಡುಬಂದಿದೆ ಎಂದು ಸಿರೊಲಾಜಿಕಲ್ ಪರೀಕ್ಷೆಗಳ ಮೂಲಕ ದೃಢಪಡಿಸಿದೆ.

ಶೇ.5 ಕ್ಕಿಂತ ಕಡಿಮೆ ಮಂದಿಯಲ್ಲಿ ರೋಗ ಪತ್ತೆಯಾದ ತಕ್ಷಣ ಅಧಿಕಾರಿಗಳು ಸೋಂಕಿತ ಮಾಂಸ ವ್ಯಾಪಾರಿಗಳನ್ನು ಕಸಾಯಿಖಾನೆಯಿಂದ ದೂರವಿಡುವಂತೆ ಆದೇಶಿಸಿದರು. ಇದರೊಂದಿಗೆ ಮುಂಗಡ ರೋಗನಿರ್ಣಯ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಸೂಚಿಸಲಾಗಿದೆ. ಆದರೆ, ಇದುವರೆಗೆ ಕೆಲವೇ ಮಾಂಸ ವ್ಯಾಪಾರಿಗಳಿಗೆ ಸೋಂಕು ತಗುಲಿರುವುದರಿಂದ ಗಾಬರಿಪಡುವ ಅಗತ್ಯವಿಲ್ಲ ಎಂದು ಜಿಎಚ್‌ಎಂಸಿ ಮುಖ್ಯ ಪಶುವೈದ್ಯಾಧಿಕಾರಿ ಅಬ್ದುಲ್ ವಕೀಲ್ ಸ್ಪಷ್ಟಪಡಿಸಿದ್ದಾರೆ.

ಈ ಸೋಂಕಿನ ವಿರುದ್ಧ ದೇಹದಲ್ಲಿ ಪ್ರತಿಕಾಯಗಳು ಇರುವುದನ್ನು ಸಿರೊಪೊಸಿಟಿವ್ ಪರೀಕ್ಷೆ ತೋರಿಸುತ್ತದೆ ಎಂದು ವೈದ್ಯರು ಹೇಳಿದರು. ಸೈಟಾಕೋಸಿಸ್ ಮತ್ತು ಹೆಪಟೈಟಿಸ್ ಇ ನಂತಹ ಝೂನೋಟಿಕ್ ಕಾಯಿಲೆಗಳು ಕಂಡುಬಂದಿವೆ ಎಂದು ವರದಿ ಹೇಳುತ್ತದೆ. ಸೋಂಕಿತ ಗಿಳಿಗಳಿಂದ ಸಿಟ್ಟಾಕೋಸಿಸ್ ಮನುಷ್ಯರಿಗೆ ಹರಡುತ್ತದೆ. ಕಸಾಯಿ ಖಾನೆಗಳಿಗೆ ಗಾಳಿಯ ಮೂಲಕ ಸೋಂಕು ತಗುಲುವ ಭೀತಿ ಎದುರಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ