AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪಾನೀಯವನ್ನು ಕುಡಿಯುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆ 5 ನಿಮಿಷಗಳಲ್ಲಿ ಕಡಿಮೆಯಾಗುತ್ತೆ

ಹೊಟ್ಟೆ ಉಬ್ಬರ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಬಹಳ ಸಾಮಾನ್ಯವಾಗಿದೆ. ಆದರೆ ಇದರಿಂದ ಮುಕ್ತಿ ಪಡೆಯಲು ಹಲವಾರು ರೀತಿಯ ಔಷಧಿಗಳ ಸೇವನೆ ಮಾಡುವ ಬದಲು, ಮನೆಯಲ್ಲಿಯೇ ಸಿಗುವ ನಾಲ್ಕು ಪದಾರ್ಥಗಳಿಂದ ಮುಕ್ತಿ ಕಂಡುಕೊಳ್ಳಬಹುದು. ಹೌದು, ಒಂದು ನೈಸರ್ಗಿಕ ವಿಧಾನಗಳ ಮೂಲಕ, ಇಂತಹ ಸಮಸ್ಯೆಗೆ ನಿಮಿಷಗಳಲ್ಲಿ ಮುಕ್ತಿ ನೀಡಬಹುದು. ಈ ಬಗ್ಗೆ ಪೌಷ್ಟಿಕತಜ್ಞೆ ನೇಹಾ ಸಹಾಯ್ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಒಂದನ್ನು ಹಂಚಿಕೊಂಡಿದ್ದು ಈ ಕುರಿತು ಮತ್ತಷ್ಟು ಮಾಹಿತಿ ಪಡೆಯಲು ಸ್ಟೋರಿ ಓದಿ.

ಈ ಪಾನೀಯವನ್ನು ಕುಡಿಯುವುದರಿಂದ ಹೊಟ್ಟೆ ಉಬ್ಬರ ಸಮಸ್ಯೆ 5 ನಿಮಿಷಗಳಲ್ಲಿ ಕಡಿಮೆಯಾಗುತ್ತೆ
ಹೊಟ್ಟೆ ಉಬ್ಬರ ಸಮಸ್ಯೆಗೆ ಮನೆಮದ್ದು
ಪ್ರೀತಿ ಭಟ್​, ಗುಣವಂತೆ
|

Updated on: Nov 27, 2025 | 5:27 PM

Share

ಇತ್ತೀಚಿನ ದಿನಗಳಲ್ಲಿ, ಹೆಚ್ಚಿನವರಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು (Digestive problem) ಹೆಚ್ಚುತ್ತಿದೆ. ಅದರಲ್ಲಿಯೂ ಹೊಟ್ಟೆ ಉಬ್ಬರ (Bloating) ಹಲವರಲ್ಲಿ ಕಂಡುಬರುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಕೆಲವೊಮ್ಮೆ ಈ ಸಮಸ್ಯೆ ಎಷ್ಟು ಹೆಚ್ಚಾಗುತ್ತದೆ ಎಂದರೆ ಇದರಿಂದ ಉಸಿರಾಟದ ತೊಂದರೆಯೂ ಉಂಟಾಗುತ್ತದೆ. ಹಾಗಾಗಿ ಇದನ್ನು ನಿಯಂತ್ರಿಸುವ ಸಲುವಾಗಿ ವಿವಿಧ ರೀತಿಯ ಔಷಧಿಗಳ ಸೇವನೆ ಮಾಡುತ್ತಾರೆ. ಆದರೆ ಕೆಲವು ಮನೆಮದ್ದುಗಳ ಮೂಲಕ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಹೌದು, ಒಂದು ನೈಸರ್ಗಿಕ ವಿಧಾನಗಳ ಮೂಲಕ, ಇಂತಹ ಸಮಸ್ಯೆಗೆ ನಿಮಿಷಗಳಲ್ಲಿ ಮುಕ್ತಿ ನೀಡಬಹುದು. ಈ ಬಗ್ಗೆ ಪೌಷ್ಟಿಕತಜ್ಞೆ ನೇಹಾ ಸಹಾಯ್ (Neha Sahaya) ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಒಂದನ್ನು ಹಂಚಿಕೊಂಡಿದ್ದು ಮತ್ತಷ್ಟು ಮಾಹಿತಿ ಪಡೆಯಲು ಈ ಸ್ಟೋರಿ ಓದಿ.

ಹೊಟ್ಟೆ ಉಬ್ಬರ ಸಮಸ್ಯೆಗೆ ಮನೆಮದ್ದು

ಆಹಾರ ಸೇವನೆ ಮಾಡಿದ ನಂತರ ಹೊಟ್ಟೆ ಉಬ್ಬರ ಉಂಟಾಗುವುದು ಸಾಮಾನ್ಯ. ಆಗಾಗ ತಿಂದರೆ ಹೊಟ್ಟೆ ಊದಿಕೊಂಡಂತೆ, ಬಿಗಿಯಾದಂತೆ ಅನಿಸುತ್ತದೆ. ಆದರೆ ಕೇವಲ ನಾಲ್ಕು ಪದಾರ್ಥಗಳ ಸಹಾಯದಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಹೌದು, 1- 2 ಸಣ್ಣ ಚಮಚ ಸಕ್ಕರೆ, 1 ತುಂಡು ಶುಂಠಿ, 4- 5 ಪುದೀನ ಎಲೆಗಳು ಸ್ವಲ್ಪ ನಿಂಬೆ ರಸ ಇವಿಷ್ಟು ಪದಾರ್ಥಗಳನ್ನು ಒಟ್ಟಿಗೆ ತೆಗೆದುಕೊಂಡು, ಒಂದು ಲೋಟ ಬಿಸಿ ನೀರಿಗೆ ಹಾಕಿ. ಬಳಿಕ ಆ ನೀರನ್ನು 5 ನಿಮಿಷಗಳ ಕಾಲ ಒಂದು ಕಡೆ ಮುಚ್ಚಿಡಿ. ಬಳಿಕ ನೀರನ್ನು ಸೋಸಿಕೊಂಡು ನಿಧಾನವಾಗಿ ಕುಡಿಯಿರಿ. ನೆನಪಿರಲಿ ನೀರು ತುಂಬಾ ಬಿಸಿಯಾಗಿರಬಾರದು.

ಆರೋಗ್ಯಕ್ಕೆ ಹೇಗೆ ಸಹಕಾರಿ?

ಈ ನಾಲ್ಕು ಪದಾರ್ಥಗಳಲ್ಲಿರುವ ಅಂಶಗಳು ಅನಿಲವನ್ನು ಹೊರಹಾಕಲು ಸಹಾಯ ಮಾಡುತ್ತವೆ. ಶುಂಠಿ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ಎದೆಯುರಿ ಕಡಿಮೆ ಮಾಡುತ್ತದೆ. ಇನ್ನು ಪುದೀನ ದೇಹವನ್ನು ತಂಪಾಗಿಸುತ್ತದೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ನಿಂಬೆ ದೇಹದಿಂದ ಹೆಚ್ಚುವರಿ ಸೋಡಿಯಂ ಮತ್ತು ಹಾನಿಕಾರಕ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಆದ್ದರಿಂದ, ಬೆಚ್ಚಗಿನ ನೀರಿನೊಂದಿಗೆ ಈ ಎಲ್ಲಾ ಪದಾರ್ಥಗಳನ್ನು ಬೆರೆಸಿ ಆ ಬಳಿಕ ಸೇವನೆ ಮಾಡುವುದರಿಂದ ಹೊಟ್ಟೆ ಉಬ್ಬರ ಸೇರಿದಂತೆ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು