AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಚಟ್ನಿ ಮಾಡುವುದು ಹೇಗೆ? ಇದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು?

ಬಂಗಾಳಿ ಜನರ ಜನಪ್ರಿಯ ರೆಸಿಪಿಯಾದ ಪಪ್ಪಾಯಿ ಚಟ್ನಿ ರುಚಿಗೂ, ಆರೋಗ್ಯಕ್ಕೂ ಒಳ್ಳೆಯದು. ಪಪ್ಪಾಯಿ ಚಟ್ನಿ ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದನ್ನು ಮಾಡುವುದು ಹೇಗೆ? ಇಲ್ಲಿದೆ ಸರಳ ವಿಧಾನ.

ಪಪ್ಪಾಯಿ ಚಟ್ನಿ ಮಾಡುವುದು ಹೇಗೆ? ಇದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 14, 2023 | 3:21 PM

Share

ಕಚ್ಚಾ ಪಪ್ಪಾಯಿ ಅಥವಾ ಕಾಯಿ ಇರುವ ಪಪ್ಪಾಯಿ ಚಟ್ನಿ ಮಾಡುವ ವಿಧಾನದ ಬಗ್ಗೆ ನಿಮಗೆ ತಿಳಿದಿದೆಯಾ? ಸಾಮಾನ್ಯವಾಗಿ ಇದು ರುಚಿಯೂ ಹೌದು. ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು. ಈ ಚಟ್ನಿ ಮೂಲತಃ ಬಂಗಾಳಿ ಜನರ ಜನಪ್ರಿಯ ರೆಸಿಪಿಯಾಗಿದೆ. ಇದನ್ನು ಕಚ್ಚಾ ಪಪ್ಪಾಯಿ, ಸಕ್ಕರೆ, ಉಪ್ಪು ಮತ್ತು ಕೆಲವು ವಿಶೇಷ ಮಸಾಲೆಗಳಿಂದ ತಯಾರಿಸಲಾಗುತ್ತದೆ. ಈ ವಿಶೇಷ ಚಟ್ನಿಯನ್ನು ದೊಡ್ಡ ಕಾರ್ಯಕ್ರಮ ಮತ್ತು ಹಬ್ಬಗಳಲ್ಲಿ ತಯಾರಿಸಲಾಗುತ್ತದೆ. ಹಾಗಾದರೆ ಇದನ್ನು ಮಾಡುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ.

ಬೇಕಾಗುವ ಸಾಮಾಗ್ರಿಗಳು:

1/2 ಕಪ್ ಹೆಚ್ಚಿಕೊಂಡ ಕಾಯಿ ಪಪ್ಪಾಯಿ,

1/2 ಕಪ್ ಸಕ್ಕರೆ,

ರುಚಿಗೆ ತಕ್ಕಷ್ಟು ಉಪ್ಪು,

1/2 ಚಮಚ ನಿಂಬೆ ರಸ,

1/2 ಕಪ್ ನೀರು,

1/2 ಚಮಚ ತುಪ್ಪ,

ಏಲಕ್ಕಿ 1ರಿಂದ 2

1/2 ಕಾಲಾ ಜೀರಾ ಬೀಜ,

ಕೇಸರಿ ಎಳೆ

ಬೇಕಾದಷ್ಟು ಗೋಡಂಬಿ.

ಇದನ್ನೂ ಓದಿ: ಉತ್ತಮ ಆರೋಗ್ಯಕ್ಕಾಗಿ ನಿಮ್ಮ ಆಹಾರಕ್ರಮದಲ್ಲಿ ಪಪ್ಪಾಯಿ ಬೀಜಗಳನ್ನು ಅಳವಡಿಸಿ

ಪಪ್ಪಾಯಿ ಚಟ್ನಿ ತಯಾರಿಸುವುದು ಹೇಗೆ?

1. ಮೊದಲು ಹಸಿ ಪಪ್ಪಾಯಿಯನ್ನು ತೆಗೆದುಕೊಂಡು ಅದರಲ್ಲಿರುವ ಬೀಜಗಳನ್ನು ತೊಳೆದು, ತೆಳುವಾಗಿ ಸಿಪ್ಪೆ ತೆಗೆಯಿರಿ.

2. ಇದನ್ನು ಒಂದು ಪಾತ್ರೆಗೆ ನೀರು ಹಾಕಿ ಅದರಲ್ಲಿ ಸುಮಾರು 10- 15 ನಿಮಿಷಗಳ ಕಾಲ ನೆನೆಸಿಡಿ. ಈ ಪ್ರಕ್ರಿಯೆಯನ್ನು 2- 3 ಬಾರಿ ಪುನರಾವರ್ತಿಸಿ, ನಂತರ ನೀರಿನಿಂದ ಹೊರತೆಗೆಯಿರಿ.

3. ಬಳಿಕ ಒಂದು ಬಾಣಲೆಯಲ್ಲಿ ಸ್ವಲ್ಪ ತುಪ್ಪವನ್ನು ಬಿಸಿ ಮಾಡಿ. ನೆನೆಸಿಟ್ಟು ತೆಗೆದ ಪಪ್ಪಾಯಿ ತುಂಡುಗಳನ್ನು ಹಾಕಿ. ಬಳಿಕ ಅದನ್ನು ಎರಡು ನಿಮಿಷಗಳ ಕಾಲ ಚೆನ್ನಾಗಿ ಹುರಿಯಿರಿ. ನಂತರ ನೀರು ಸೇರಿಸಿ ಕುದಿಯಲು ಬಿಡಿ. ಬಳಿಕ ಅದಕ್ಕೆ ಸಕ್ಕರೆ ಮತ್ತು ಕೇಸರಿ ಎಳೆಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

4. ಈ ಹಂತದಲ್ಲಿ ನೀವು ಸ್ವಲ್ಪ ನಿಂಬೆ ರಸ ಸೇರಿಸಬಹುದು. ನಂತರ, ಏಲಕ್ಕಿ ಮತ್ತು ಕಲೋಂಜಿ ಬೀಜಗಳು ( ಕಾಲಾ ಜೀರಾ ಬೀಜ) ಮತ್ತು ಬೇಕಾದಷ್ಟು ಉಪ್ಪನ್ನು ಸೇರಿಸಿ.

5.ಚೆನ್ನಾಗಿ ಮಿಶ್ರಣ ಮಾಡಿದ ಬಳಿಕ ಚೆನ್ನಾಗಿ ಬೇಯಿಸಿಕೊಳ್ಳಿ. ಹುರಿದ ಗೋಡಂಬಿ ಬೀಜಗಳನ್ನು ಮೇಲಿನಿಂದ ಉದುರಿಸಿದರೆ ಪ್ಲಾಸ್ಟಿಕ್ ಚಟ್ನಿ ಸವಿಯಲು ಸಿದ್ಧ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್