Women Health: ಮುಟ್ಟಿನ ಸಮಯದಲ್ಲಿ ಅಧಿಕ ರಕ್ತಸ್ರಾವಕ್ಕೆ ಕಾರಣವೇನು ಗೊತ್ತಾ? ಪರಿಹಾರವೂ ಇಲ್ಲಿದೆ

ಅಧಿಕ ರಕ್ತಸ್ರಾವದಿಂದ ಪದೇ ಪದೇ ಪ್ಯಾಡ್​ನ ಬದಲಾಯಿಸಬೇಕು. ಒಂದು ಗಂಟೆಗೊಮ್ಮೆ ಬದಲಾಯಿಸಬೇಕು. ಇದನ್ನು ವೈದ್ಯಕೀಯ ಭಾಷೆಯಲ್ಲಿ ಮೆನೊರ್ಹೇಜಿಯಾ(Menorrhagia) ಎಂದು ಕರೆಯಲಾಗುತ್ತದೆ.

Women Health: ಮುಟ್ಟಿನ ಸಮಯದಲ್ಲಿ ಅಧಿಕ ರಕ್ತಸ್ರಾವಕ್ಕೆ ಕಾರಣವೇನು ಗೊತ್ತಾ? ಪರಿಹಾರವೂ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on: Jul 26, 2021 | 7:26 AM

ತಿಂಗಳಿಗೊಮ್ಮೆ ಮಹಿಳೆಯರು ಪಡುವ ಕಷ್ಟ ಅಷ್ಟಿಷ್ಟಲ್ಲ. ಮುಟ್ಟಿನ ಸಮಯ ಹತ್ತಿರ ಬರುತ್ತಿದ್ದಂತೆ ಭಯ ಶುರುವಾಗುತ್ತದೆ. ವಿಪರೀತ ಹೊಟ್ಟೆ, ಸೊಂಟ ನೋವು ತಾಳಲಾರದೆ ಒದ್ದಾಡುತ್ತಾರೆ. ಜೀವವೆ ಬೇಡಪ್ಪ ಅಂತ ಹೆಣ್ಣು ಮಕ್ಕಳು ಕಣ್ಣೀರಾಕುತ್ತಾರೆ. ಆದರೆ ಮಟ್ಟು ಪ್ರಕೃತಿ ನಿಯಮ. ಅದನ್ನು ಅನಿಷ್ಟ ಎನ್ನುವುದು ತಪ್ಪು. ಮುಟ್ಟಾದಾಗ ಎಲ್ಲರಿಗೂ ಹೊಟ್ಟೆ ನೋವಾಗಲ್ಲ. ಆದರೆ ಕೆಲವರಿಗೆ ವಿಪರೀತ ಹೊಟ್ಟೆ ನೋವಾಗುತ್ತದೆ. ಜೊತೆಗೆ ಹೆಚ್ಚು ರಕ್ತಸ್ರಾವವಾಗುತ್ತದೆ.

ಅಧಿಕ ರಕ್ತಸ್ರಾವದಿಂದ ಪದೇ ಪದೇ ಪ್ಯಾಡ್​ನ ಬದಲಾಯಿಸಬೇಕು. ಒಂದು ಗಂಟೆಗೊಮ್ಮೆ ಬದಲಾಯಿಸಬೇಕು. ಇದನ್ನು ವೈದ್ಯಕೀಯ ಭಾಷೆಯಲ್ಲಿ ಮೆನೊರ್ಹೇಜಿಯಾ(Menorrhagia) ಎಂದು ಕರೆಯಲಾಗುತ್ತದೆ.

ಮೆನೊರ್ಹೇಜಿಯಾಕ್ಕೆ ಕಾರಣವೇನು 1. ಮೆನೊರ್ಹೇಜಿಯಾಕ್ಕೆ ಹಲವು ಕಾರಣಗಳಿವೆ. ಕೆಲವೊಮ್ಮೆ ಇದು ಹಾರ್ಮೋನ್ ಅಸಮತೋಲನದಿಂದಾಗಿ ಸಂಭವಿಸುತ್ತದೆ (Hormone Imbalance). ಮಹಿಳೆಯರ ಗರ್ಭಾಶಯದಲ್ಲಿ ಪ್ರತಿ ತಿಂಗಳು ಒಂದು ಪದರವು ರೂಪುಗೊಳ್ಳುತ್ತದೆ. ಈ ಪದರವು ಮುಟ್ಟಿನ ಸಮಯದಲ್ಲಿ ದೇಹದಿಂದ ರಕ್ತಸ್ರಾವದ ಮೂಲಕ ಹೊರಬರುತ್ತದೆ. ದೇಹದಲ್ಲಿ ಹಾರ್ಮೋನುಗಳ ಅಸಮತೋಲನ ಇದ್ದಾಗ ಈ ಪದರವು ತುಂಬಾ ದಪ್ಪವಾಗುತ್ತದೆ. ಆಗ ಇದು ಅಧಿಕ ರಕ್ತಸ್ರಾವದ ರೂಪದಲ್ಲಿ ಹೊರಬರುತ್ತದೆ.

2. ಗರ್ಭಾಶಯದಲ್ಲಿ ಫೈಬ್ರಾಯ್ಡ್​ಗಳು ಇರುವುದರಿಂದ ಕೆಲವೊಮ್ಮೆ ಅಧಿಕ ರಕ್ತಸ್ರಾವ ಪ್ರಾರಂಭವಾಗುತ್ತದೆ.

3. ಗರ್ಭಾಶಯದಲ್ಲಿನ ಕ್ಯಾನ್ಸರ್ ಅಥವಾ ಅಂಡಾಶಯದಲ್ಲಿನ ಕ್ಯಾನ್ಸರ್ ಕೂಡ ಹೆಚ್ಚು ರಕ್ತಸ್ರಾವಕ್ಕೆ ಕಾರಣವಾಗಬಹುದು.

* ಹಾರ್ಮೋನ್ ಸಮಸ್ಯೆಯಿದ್ದಾಗ ಔಷಧಿಗಳನ್ನು ತೆಗೆದುಕೊಳ್ಳಲು ತಜ್ಞರು ಸೂಚಿಸುತ್ತಾರೆ. ವೈದ್ಯರು ನೀಡಿದ ಕೆಲ ಸಲಹೆಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಆಗ ಮಾತ್ರ ಮೆನೊರ್ಹೇಜಿಯಾ ಸಮಸ್ಯೆಯನ್ನು ದೂರ ಮಾಡಬಹದು.

* ರಕ್ತಸ್ರಾವ ಅಧಿಕವಾಗುತ್ತಿದ್ದರೆ ಅಂತವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರುತ್ತದೆ. ಶಸ್ತ್ರಚಿಕಿತ್ಸೆಯಲ್ಲಿ ಗರ್ಭಾಶಯವನ್ನು ತೆಗೆಯಬಹುದು. ಆ ಬಳಿಕ ಮುಟ್ಟಾಗುವುದು ನಿಲ್ಲುತ್ತದೆ.

ಮನೆಮದ್ದುಗಳು ಇಲ್ಲಿವೆ 1. ಸಾಸಿವೆಯನ್ನು ಚೆನ್ನಾಗಿ ಪುಡಿ ಮಾಡಿ. ಮುಟ್ಟಿನ ವೇಳೆ ಅಧಿಕ ರಕ್ತಸ್ರಾವವಾಗುತ್ತಿದ್ದರೆ, ಒಂದು ಚಮಚ ಸಾಸಿವೆ ಪುಡಿಯನ್ನು ತಣ್ಣಗಿರುವ ಹಾಲಿನೊಂದಿಗೆ ಸೇರಿಸಿ ಕುಡಿಯಿರಿ.

2. ಜೀರಿಗೆಯನ್ನು ಪುಡಿ ಮಾಡಿ. ಎರಡು ಚಮಚ ಜೀರಿಗೆ ಪುಡಿಯನ್ನು ಒಂದು ಲೋಟ ನೀರಿನೊಂದಿಗೆ ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಅದನ್ನು ಸೋಸಿ, ಕುಡಿಯಿರಿ. ಕುಡಿಯುವಾಗ ಜೀರಿಗೆ ನೀರು ಬಿಸಿಯಾಗಿರಬೇಕು.

3. ಒಂದು ಬಟ್ಟೆ ಅಥವಾ ಟವೆಲ್​ಗೆ ಐಸ್ ಕ್ಯೂಬ್​ಗಳನ್ನು ಹಾಕಿ. ಅದನ್ನು ಚೆನ್ನಾಗಿ ಹೊಟ್ಟೆಗೆ ಕಟ್ಟಿಕೊಳ್ಳಿ. ಹೊಟ್ಟೆಯ ಕೆಳಭಾಗದಲ್ಲಿ 15 ರಿಂದ 20 ನಿಮಿಷಗಳ ಕಾಲ ಇರಿಸಿ.

4. ಒಂದು ಚಮಚ ಮೆಂತ್ಯ ಬೀಜವನ್ನು ಎರಡು ಕಪ್ ನೀರಿನಲ್ಲಿ ಕುದಿಸಿ. ನೀರು ಅರ್ಧದಷ್ಟು ಉಳಿದಿರುವಾಗ ಸೋಸಿ. ಅದಕ್ಕೆ ಒಂದು ಚಮಚ ಜೇನುತುಪ್ಪ ಸೇರಿಸಿ ಕುಡಿಯಿರಿ. ಇದನ್ನು ದಿನಕ್ಕೆ ಎರಡು ಮೂರು ಬಾರಿ ಕುಡಿಯಬೇಕು.

ಇದನ್ನೂ ಓದಿ

Women Health: ಗುಪ್ತಾಂಗದಲ್ಲಿನ ತುರಿಕೆ ಮತ್ತು ಸೋಂಕು ಕಡಿಮೆ ಮಾಡಲು ಈ ಮನೆಮದ್ದುಗಳನ್ನು ಬಳಸಿ

Women Health: ಗರ್ಭಿಣಿಯರಿಗೆ ವಾಕಿಂಗ್ ಎಷ್ಟು ಮುಖ್ಯ? ಹಾಕುವ ಪ್ರತಿ ಹೆಜ್ಜೆ ಜತೆಗೆ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ

(Reason and solution for heavy bleeding during periods)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ