AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alzheimer’s: ಬಾಯಿಯ ಆರೋಗ್ಯದ ಬಗ್ಗೆ ನಿರ್ಲಕ್ಷ್ಯಿಸಿದ್ರೆ ಅಲ್ಝೈಮರ್ ಕಾಯಿಲೆ ಖಂಡಿತ; ಸಂಶೋಧನೆ

ಕಳಪೆ ಹಲ್ಲಿನ ಆರೋಗ್ಯವು ಅರಿವಿನ ಸಾಮರ್ಥ್ಯಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅಧ್ಯಯನವೊಂದು ಬಹಿರಂಗಪಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Alzheimer’s: ಬಾಯಿಯ ಆರೋಗ್ಯದ ಬಗ್ಗೆ ನಿರ್ಲಕ್ಷ್ಯಿಸಿದ್ರೆ ಅಲ್ಝೈಮರ್ ಕಾಯಿಲೆ ಖಂಡಿತ; ಸಂಶೋಧನೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 08, 2023 | 12:39 PM

Share

ಬಾಯಿಯ ಆರೋಗ್ಯವು ದೇಹದ ಇತರ ಭಾಗದಂತೆ ಅತೀ ಮುಖ್ಯವಾಗಿದೆ. ಇದಕ್ಕೆ ಪೂರಕವೆಂಬಂತೆ ಅಧ್ಯಯನವೊಂದು ಪುರಾವೆಯಾಗಿದೆ. ನ್ಯೂರಾಲಜಿ ಜನರಲ್ ನಲ್ಲಿ ಪ್ರಕಟವಾದ ಒಂದು ಸಂಶೋಧನೆಯು ಕಳಪೆ ಹಲ್ಲಿನ ಆರೋಗ್ಯವು ಅರಿವಿನ ಸಾಮರ್ಥ್ಯಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಬಾಯಿಯ ಕಳಪೆ ಆರೋಗ್ಯವು ಮೆದುಳಿನ ಗಾತ್ರವನ್ನು ಕುಗ್ಗಿಸಲು ಕಾರಣವಾಗಬಹುದು ಮತ್ತು ಅಲ್ಝೈಮರ್ ಕಾಯಿಲೆ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನದ ಸಂಶೋಧನೆಗಳು ತಿಳಿಸಿವೆ. ಒಸಡಿನ ಕಾಯಿಲೆ ಮತ್ತು ಹಲ್ಲಿನ ನಷ್ಟ ಇದಕ್ಕೆ ಕಾರಣ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಒಸಡಿನ ರೋಗವು ಹಲ್ಲುಗಳ ಸುತ್ತಲಿನ ಅಂಗಾಂಶದ ಉರಿಯೂತಕ್ಕೆ ಮತ್ತು ಹಲ್ಲುಗಳು ಸಡಿಲಗೊಳ್ಳಲು ಕಾರಣವಾಗಬಹುದು ಎಂದು ಅಧ್ಯಯನ ನಡೆಸಿದ ಲೇಖಕರು ವಿವರಿಸಿದ್ದಾರೆ. ಈ ಉರಿಯೂತವು ಬುದ್ಧಿಮಾಂದ್ಯತೆಯ ರೋಗಲಕ್ಷಣಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಂಭಾವ್ಯ ಸಂಬಂಧವನ್ನು ಹೊಂದಿದೆ ಎಂದು ಸಂಶೋಧನೆಗಳು ತಿಳಿಸಿವೆ.

ಇದನ್ನೂ ಓದಿ: ಅಮೆರಿಕದಲ್ಲಿ 65ರ ಆಸುಪಾಸಿನ 6 ಮಿಲಿಯನ್ ಜನ ಈ ಕಾಯಿಲೆಗೆ ತುತ್ತಾಗಿದ್ದಾರೆ 

ಈ ಅಧ್ಯಯನವು ಆರಂಭದಲ್ಲಿ ಯಾವುದೇ ಮೆಮೊರಿ ಸಮಸ್ಯೆಗಳಿಲ್ಲದ ಸರಾಸರಿ 67 ವರ್ಷ ವಯಸ್ಸಿನ 172 ಜನರನ್ನು ಪರೀಕ್ಷಿಸಿತ್ತು. ಬಳಿಕ ತಂಡವು ಇವರಲ್ಲಿ ಕೆಲವು ಮೆಮೊರಿ ಪರೀಕ್ಷೆಗಳನ್ನು ನಡೆಸಿತ್ತು ಮತ್ತು ಹಿಪ್ಪೊಕ್ಯಾಂಪಸ್​​ನ ಪರಿಮಾಣವನ್ನು ಅಳೆಯಲು ಅವರ ಮೆದುಳನ್ನು ಸ್ಕ್ಯಾನ್ ಮಾಡಿತು. ಬಳಿಕ ಅಷ್ಟೇ ಜನರನ್ನು ನಾಲ್ಕು ವರ್ಷಗಳ ನಂತರ ಮೊದಲು ಮಾಡಿದ ಪರೀಕ್ಷೆಗಳನ್ನು ಮತ್ತೆ ಸಂಶೋಧನೆ ಮಾಡಲಾಗಿದೆ. ಒಸಡಿನ ಕಾಯಿಲೆಗಳ ಪ್ರಮಾಣ ಮತ್ತು ಮೆದುಳಿನ ಹಿಪೊಕ್ಯಾಂಪಸ್ನಲ್ಲಿನ ಬದಲಾವಣೆಗಳ ನಡುವಿನ ಸಂಬಂಧವನ್ನು ಅಧ್ಯಯನದಲ್ಲಿ ಗಮನಿಸಲಾಯಿತು. ಕಡಿಮೆ ಹಲ್ಲುಗಳಲ್ಲಿ ಹುಳುಕು ಮತ್ತು ಸೌಮ್ಯ ಒಸಡಿನ ರೋಗವನ್ನು ಹೊಂದಿರುವವರಲ್ಲಿ ಮೆದುಳಿನ ಕುಗ್ಗುವಿಕೆಯ ನಿಧಾನಗತಿಯಲ್ಲಿ ಕಂಡುಬಂದಿದೆ. ಆದರೆ ಹೆಚ್ಚಿನ ಹಲ್ಲುಗಳಲ್ಲಿ ಕುಳಿ ಇದ್ದು ತೀವ್ರವಾದ ಒಸಡು ಕಾಯಿಲೆ ಹೊಂದಿರುವ ಜನರಲ್ಲಿ ಮೆದುಳಿನ ಕುಗ್ಗುವಿಕೆಯ ಹೆಚ್ಚಾಗಿದೆ ಎಂದು ಅಧ್ಯಯನ ತಿಳಿಸಿದೆ.

ಈ ಅಧ್ಯಯನದ ಫಲಿತಾಂಶಗಳು ಹೇಳುವುದೆಂದರೆ ಹಲ್ಲುಗಳನ್ನು ಉಳಿಸಿಕೊಳ್ಳುವುದು ಮಾತ್ರವಲ್ಲದೆ ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದೆ. ಹಾಗಾಗಿ ನಿಯಮಿತವಾಗಿ ವೈದ್ಯರ ಬಳಿ ಭೇಟಿ ನೀಡಿ ಹಲ್ಲು ಮತ್ತು ಒಸಡಿನ ರೋಗದ ಬಗ್ಗೆ ಹೆಚ್ಚು ಗಮನ ನೀಡಬೇಕಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!