AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rising Child Obesity Rates: ಪೋಷಕರೇ, ನಿಮ್ಮ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಗೆ ಇದೇ ಕಾರಣ

ಗ್ಲೋಬಲ್ ಒಬೆಸಿಟಿ ರಿಪೋರ್ಟ್ ಪ್ರಕಾರ, ವಯಸ್ಕರಿಗಿಂತ ಮಕ್ಕಳಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಾಗಿದೆ. ಇದಕ್ಕೆ ಹಲವಾರು ಕಾರಣಗಳನ್ನು ವಿವರಿಸಲಾಗಿದ್ದು, ಸ್ಥೂಲಕಾಯತೆಯಿಂದಾಗಿ, ಮಕ್ಕಳು ಮಧುಮೇಹದಿಂದ ಹೃದ್ರೋಗದವರೆಗೆ ಬಳಲುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಎಲ್ಲರನ್ನೂ ಕಾಡುವ ಪ್ರಶ್ನೆ ಏನೆಂದರೆ ಮಕ್ಕಳು ಬೊಜ್ಜಿನ ಸಮಸ್ಯೆಯಿಂದ ಬಳಲು ಕಾರಣವೇನು? ಇದನ್ನು ಹೇಗೆ ನಿಯಂತ್ರಿಸಬಹುದು? ಈ ವಿಷಯವಾಗಿ ತಜ್ಞರ ಅಭಿಪ್ರಾಯವೇನು ತಿಳಿದುಕೊಳ್ಳಿ.

Rising Child Obesity Rates: ಪೋಷಕರೇ, ನಿಮ್ಮ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಗೆ ಇದೇ ಕಾರಣ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 03, 2025 | 11:17 AM

ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಬೊಜ್ಜಿನ (Obesity) ಸಮಸ್ಯೆ ಹೆಚ್ಚಳಗೊಂಡಿರುವುದು ಎಲ್ಲರ ಗಮನಕ್ಕೂ ಬಂದಿರಬಹುದು. ಬರುಬರುತ್ತಾ ಈ ಪ್ರಕರಣಗಳ ಪ್ರಮಾಣ ದ್ವಿಗುಣಗೊಳ್ಳುತ್ತಿರುವುದು ಆತಂಕಕಾರಿ ವಿಷಯವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಕೂಡ ಬೊಜ್ಜಿನ ಸಮಸ್ಯೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ದೇಶದಲ್ಲಿ ಪ್ರತಿ ಎಂಟು ಜನರಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಸ್ಥೂಲಕಾಯತೆಯ ಪ್ರಕರಣಗಳು ದ್ವಿಗುಣಗೊಂಡಿವೆ. ಇನ್ನೂ ಆತಂಕಕಾರಿ ಸಂಗತಿಯೆಂದರೆ ಈ ಸಮಸ್ಯೆ ಮಕ್ಕಳಲ್ಲಿಯೂ ನಾಲ್ಕು ಪಟ್ಟು ಹೆಚ್ಚಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವರದಿ ಬಿಡುಗಡೆಯಾಗಿದೆ. ಗ್ಲೋಬಲ್ ಒಬೆಸಿಟಿ ರಿಪೋರ್ಟ್ ಪ್ರಕಾರ, ವಯಸ್ಕರಿಗಿಂತ ಮಕ್ಕಳಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಾಗಿದೆ. ಇದಕ್ಕೆ ಹಲವಾರು ಕಾರಣಗಳನ್ನು ವಿವರಿಸಲಾಗಿದ್ದು, ಸ್ಥೂಲಕಾಯತೆಯಿಂದಾಗಿ, ಮಕ್ಕಳು ಮಧುಮೇಹದಿಂದ ಹೃದ್ರೋಗದವರೆಗೆ ಬಳಲುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಎಲ್ಲರನ್ನೂ ಕಾಡುವ ಪ್ರಶ್ನೆ ಏನೆಂದರೆ ಮಕ್ಕಳು ಬೊಜ್ಜಿನ ಸಮಸ್ಯೆಯಿಂದ ಬಳಲು ಕಾರಣವೇನು? ಇದನ್ನು ಹೇಗೆ ನಿಯಂತ್ರಿಸಬಹುದು? ಈ ವಿಷಯವಾಗಿ ತಜ್ಞರ ಅಭಿಪ್ರಾಯವೇನು ತಿಳಿದುಕೊಳ್ಳಿ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಕಾರ, ವಿಶ್ವಾದ್ಯಂತ ಮಕ್ಕಳು ಮತ್ತು ಹದಿಹರೆಯದವರಲ್ಲಿ ಸ್ಥೂಲಕಾಯತೆಯ ಪ್ರಮಾಣವು 1990 ಕ್ಕೆ ಹೋಲಿಸಿದರೆ 2024 ರ ವೇಳೆಗೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ನಿಯಂತ್ರಣ ಮೀರಿ ಹೋಗುತ್ತಿದೆ. ಈ ಕಾರಣದಿಂದಾಗಿ, ಮಕ್ಕಳಲ್ಲಿ ಟೈಪ್ -2 ಮಧುಮೇಹ ಮತ್ತು ಹೃದ್ರೋಗದ ಪ್ರಕರಣಗಳು ಸಹ ಹೆಚ್ಚಾಗಿದೆ. ಕೆಲವು ಸಂದರ್ಭಗಳಲ್ಲಿ, ಮಕ್ಕಳು ಹೃದ್ರೋಗಗಳಿಂದ ಸಹ ಸಾವನ್ನಪ್ಪಿರುವ ಪ್ರಕರಣಗಳಲ್ಲದೆ ಸ್ಥೂಲಕಾಯತೆಯಿಂದಾಗಿ ಮಕ್ಕಳಲ್ಲಿ ಹಾರ್ಮೋನುಗಳ ಅಸಮತೋಲನದಂತಹ ಸಮಸ್ಯೆಗಳು ಸಹ ಕಂಡು ಬಂದಿವೆ. ಇದರಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಿದೆ.

ಮಕ್ಕಳಲ್ಲಿ ಬೊಜ್ಜು ಹೆಚ್ಚುತ್ತಿರಲು ಕಾರಣವೇನು?

ಅಪೊಲೊ ಸ್ಪೆಕ್ಟ್ರಾ ಆಸ್ಪತ್ರೆಯ ಜನರಲ್ ಫಿಸಿಶಿಯನ್ ಡಾ. ಅಂಕಿತ್ ಹೇಳುವ ಪ್ರಕಾರ, ಮಕ್ಕಳಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಾಗಲು ಹಲವಾರು ಕಾರಣಗಳಿವೆ, ಮಕ್ಕಳ ಜೀವನಶೈಲಿ ಹದಗೆಡುತ್ತಿರುವುದು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಅದಲ್ಲದೆ ಈಗ ಮಕ್ಕಳು ಮೊಬೈಲ್ ಮತ್ತು ಕಂಪ್ಯೂಟರ್ ಮುಂದೆ ದೀರ್ಘಕಾಲ ಕುಳಿತುಕೊಳ್ಳುತ್ತಾರೆ. ಈ ಕಾರಣದಿಂದಾಗಿ, ಅವರ ದೈಹಿಕ ಚಟುವಟಿಕೆಯೂ ಕಡಿಮೆಯಾಗಿದೆ. ಮಕ್ಕಳಲ್ಲಿ ಜಂಕ್ ಫುಡ್ ತಿನ್ನುವ ಪ್ರವೃತ್ತಿಯೂ ವೇಗವಾಗಿ ಬೆಳೆಯುತ್ತಿದ್ದು ಇದು ಬೊಜ್ಜಿನ ಅಪಾಯವನ್ನು ಹೆಚ್ಚಿಸುತ್ತದೆ. ಇದಲ್ಲದೆ, ಬೊಜ್ಜು ಹೆಚ್ಚಾಗಲು ಹಲವಾರು ಕಾರಣಗಳಿವೆ. ಸ್ಥೂಲಕಾಯತೆಯು ಆನುವಂಶಿಕ ಕಾರಣಗಳಿಂದಲೂ ಉಂಟಾಗಬಹುದು. ಆದರೂ ಕೆಲವು ಸಂದರ್ಭಗಳಲ್ಲಿ, ಜೀವನಶೈಲಿ, ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳು ಸಹ ಬೊಜ್ಜನ್ನು ಉತ್ತೇಜಿಸಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಯಾವ ಅಡುಗೆ ಎಣ್ಣೆ ಬೊಜ್ಜನ್ನು ಕಡಿಮೆ ಮಾಡಲು ಸಹಾಯ ಮಾಡುತ್ತೆ
Image
ಹೊಟ್ಟೆ ಎಷ್ಟೇ ದಪ್ಪವಿದ್ದರೂ ಕರಗಿಸಲು ಇಲ್ಲಿದೆ ಸರಳ ಉಪಾಯ
Image
ಈ ಒಣಹಣ್ಣನ್ನು ನೆನೆಸಿಟ್ಟು ತಿಂದರೆ ತೂಕ ಇಳಿಯೋದು ಗ್ಯಾರಂಟಿ
Image
ನೀರು ಕುಡಿದರೆ ತೂಕ ಕಡಿಮೆ ಆಗುತ್ತಾ? ತಜ್ಞರು ಹೇಳುವುದೇನು?

ಇದನ್ನೂ ಓದಿ: ಇಂದು ವಿಶ್ವ ಶ್ರವಣ ದಿನ; ಶ್ರವಣ ದೋಷ ಬರದಂತೆ ನೋಡಿಕೊಳ್ಳಲು ಕಿವಿಗಳ ಆರೈಕೆ ಹೀಗಿರಲಿ

ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆಯನ್ನು ನಿಯಂತ್ರಿಸುವುದು ಹೇಗೆ?

*ಮಕ್ಕಳ ಹೊರಾಂಗಣ ಕ್ರೀಡೆಗೆ ಪ್ರೋತ್ಸಾಹ ನೀಡಬೇಕು.

*ಮಗುವಿನ ಆಹಾರದಲ್ಲಿ ಹಿಟ್ಟು, ಸಕ್ಕರೆ ಮತ್ತು ಉಪ್ಪನ್ನು ಕಡಿಮೆ ಮಾಡಬೇಕು.

*ಅಗತ್ಯಕ್ಕಿಂತ ಹೆಚ್ಚಾಗಿ ಯಾವುದೇ ಕಾರಣಕ್ಕೂ ಮಕ್ಕಳಿಗೆ ಫೋನ್ ಮತ್ತು ಲ್ಯಾಪ್ ಟಾಪ್ ಬಳಸಲು ಅವಕಾಶ ನೀಡಬೇಡಿ.

*ಮನೆಯ ವಾತಾವರಣವನ್ನು ಉತ್ತಮವಾಗಿರಿಸಿಕೊಳ್ಳಿ. ಏಕೆಂದರೆ ಮಕ್ಕಳಿಗಾಗುವ ಮಾನಸಿಕ ಒತ್ತಡ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

*ಪೋಷಕರಾಗಿ ನೀವು ನಿಮ್ಮ ಮಕ್ಕಳ ಆಹಾರ, ನಿದ್ರೆ ಮತ್ತು ಜೀವನಶೈಲಿಯನ್ನು ಸುಧಾರಿಸಬೇಕು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ