AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಹೆಚ್ಚುತ್ತಿದೆ ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ: ಹೊಸ ಸಮೀಕ್ಷೆಯಿಂದ ಹೆಚ್ಚಾಗಿದೆ ಆತಂಕ

ಇತ್ತೀಚಿನ ದಿನಗಳಲ್ಲಿ ಬೊಜ್ಜು ಮತ್ತು ಮಧುಮೇಹ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಅನೇಕರು ಇದರ ವಿರುದ್ಧ ಹೋರಾಡುತ್ತಿದ್ದಾರೆ. ಅದರ ಮಧ್ಯೆ ಹೊರಬಂದಿರುವ ಸಮೀಕ್ಷೆಯೊಂದು ಈ ಕಳವಳವನ್ನು ಹೆಚ್ಚಿಸಿದೆ. 2019 ರಿಂದ, ಬೊಜ್ಜು ಮತ್ತು ಮಧುಮೇಹ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಪುರುಷರಲ್ಲಿ ಶೇಕಡಾ 4.4ರಷ್ಟು ಮತ್ತು ಮಹಿಳೆಯರಲ್ಲಿ ಶೇಕಡಾ 6.7ರಷ್ಟು ಏರಿಕೆ ದಾಖಲಾಗಿದೆ. ಹೀಗಾಗಿ ಈ ಸಮಸ್ಯೆ ತಡೆಗಟ್ಟಲು ಕೆಲವು ಸಿಂಪಲ್ ಸಲಹೆ ನಿಮಗಾಗಿ.

ದೇಹದಲ್ಲಿ ಹೆಚ್ಚುತ್ತಿದೆ ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ: ಹೊಸ ಸಮೀಕ್ಷೆಯಿಂದ ಹೆಚ್ಚಾಗಿದೆ ಆತಂಕ
Obesity And DiabetesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 30, 2026 | 8:20 PM

Share

ದೇಶದಲ್ಲಿ ಸ್ಥೂಲಕಾಯತೆ (Obesity) ಮತ್ತು ಮಧುಮೇಹ (Diabetes) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಆರೋಗ್ಯ ಸಮೀಕ್ಷೆಯ ವರದಿ ತಜ್ಞರಲ್ಲಿ ಆತಂಕ ಮೂಡಿಸಿದೆ. 2019ರ ನಂತರ ಈ ಎರಡೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (NFHS-6) ವರದಿ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಲ್ಲಿ ಅಧಿಕ ತೂಕ ಹಾಗೂ ಸ್ಥೂಲಕಾಯದ ಪ್ರಮಾಣ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿದೆ. ಪುರುಷರಲ್ಲಿ ಶೇಕಡಾ 4.4ರಷ್ಟು ಮತ್ತು ಮಹಿಳೆಯರಲ್ಲಿ ಶೇಕಡಾ 6.7ರಷ್ಟು ಏರಿಕೆ ದಾಖಲಾಗಿದೆ.

2019-21ರಲ್ಲಿ ಶೇಕಡಾ 24ರಷ್ಟು ಮಹಿಳೆಯರು ಅಧಿಕ ತೂಕ ಅಥವಾ ಸ್ಥೂಲಕಾಯದಿಂದ ಬಳಲುತ್ತಿದ್ದರು. ಆದರೆ 2023-24ರಲ್ಲಿ ಈ ಪ್ರಮಾಣ ಶೇಕಡಾ 30.7ಕ್ಕೆ ಏರಿಕೆಯಾಗಿದೆ. ಅಂದರೆ, ಪ್ರತಿ ಮೂವರು ಮಹಿಳೆಯರಲ್ಲಿ ಒಬ್ಬರು ಈಗ ಸ್ಥೂಲಕಾಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮೀಕ್ಷೆಯನ್ನುದೇಶದ 715 ಜಿಲ್ಲೆಗಳಲ್ಲಿ ನಡೆಸಲಾಗಿದ್ದು, ಸುಮಾರು 6.79 ಲಕ್ಷ ಕುಟುಂಬಗಳನ್ನು ಒಳಗೊಂಡಿತ್ತು. ನಗರ ಪ್ರದೇಶಗಳಲ್ಲಿ ಸಮಸ್ಯೆ ಹೆಚ್ಚು ಗಂಭೀರವಾಗಿದ್ದು, ಶೇಕಡಾ 42.8ರಷ್ಟು ಮಹಿಳೆಯರು ಅಧಿಕ ತೂಕ ಅಥವಾ ಸ್ಥೂಲಕಾಯದಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣ ಶೇಕಡಾ 25.5ರಷ್ಟಿದೆ. ಜಂಕ್ ಫುಡ್ ಸೇವನೆ, ಕುಳಿತು ಕೆಲಸ ಮಾಡುವ ಅಭ್ಯಾಸ ಹಾಗೂ ವ್ಯಾಯಾಮದ ಕೊರತೆ ಪ್ರಮುಖ ಕಾರಣಗಳಾಗಿವೆ.

ಮಧುಮೇಹದ ಅಪಾಯವೂ ಹೆಚ್ಚಳ

ಅಷ್ಟೇಅಲ್ಲ, ಇತ್ತೀಚಿಗೆ ಮಧುಮೇಹದ ಅಪಾಯವೂ ಹೆಚ್ಚುತ್ತಿದೆ.15 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿರುವವರ ಸಂಖ್ಯೆ 2019-21ರ ಶೇಕಡಾ 15.6ರಿಂದ 2023-24ರಲ್ಲಿ ಶೇಕಡಾ 20.9ಕ್ಕೆ ಏರಿಕೆಯಾಗಿದೆ. ಮಹಿಳೆಯರಲ್ಲೂ ಮಧುಮೇಹದ ಪ್ರಕರಣಗಳು ಹೆಚ್ಚುತ್ತಿದ್ದು, ವಿಶೇಷವಾಗಿ ನಗರ ಪ್ರದೇಶದ ಮಹಿಳೆಯರಲ್ಲಿ ಈ ಪ್ರವೃತ್ತಿ ಹೆಚ್ಚು ಕಂಡುಬರುತ್ತಿದೆ.

ಇದನ್ನೂ ಓದಿ: ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು? ಇದು ಬರದಂತೆ ತಡೆಯಲು ಏನು ಮಾಡಬೇಕು?

ಈ ರೀತಿಯ ಸಮಸ್ಯೆ ತಡೆಗಟ್ಟಲು ವೈದ್ಯರು ನೀಡಿರುವ ಸಲಹೆ:

  • ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡಿ.
  • ಜಂಕ್ ಫುಡ್ ಮತ್ತು ಸಕ್ಕರೆಯುಕ್ತ ಆಹಾರವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ.
  • ಹಣ್ಣು, ತರಕಾರಿ ಹಾಗೂ ನಾರಿನಾಂಶಯುಕ್ತ ಆಹಾರ ಹೆಚ್ಚಿಸಿ.
  • ಸರಿಯಾಗಿ ನಿದ್ರೆ ಮಾಡಿ.
  • ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ.

ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದೇ ಸ್ಥೂಲಕಾಯ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುವ ಅತ್ಯುತ್ತಮ ಮಾರ್ಗವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!