Red Rock Candy: ಕಲ್ಲು ಸಕ್ಕರೆ ಸವಿದರೆ ಇದೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳು! ಆದರೂ ಇರಲಿ ಎಚ್ಚರಾ

ಕಲ್ಲು ಸಕ್ಕರೆ ಎಲ್ಲರಿಗೂ ಗೊತ್ತು. ಕಲ್ಲು ಸಕ್ಕರೆ ಅಂದರೆ ಬರೀ ಸಿಹಿಯಲ್ಲ ಜೊತೆಗೆ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ ಶೀತ, ಕಂದ ಶರ್ಕರ ಎಂದೂ ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಖಡಿ ಶಕ್ಕರ್ ಎಂದೂ ಆಂಗ್ಲ ಭಾಷೆಯಲ್ಲಿ Rock sugar, Red Rock Candy ಎಂದು ಕರೆಯುವುದುಂಟು. ಈ ಕಲ್ಲು ಸಕ್ಕರೆಯನ್ನು ಕಬ್ಬಿನ ಹಾಲನ್ನು ಘನೀಕೃತಗೊಳಿಸಿ ಯಾವುದೇ ರಾಸಾಯನಿಕ ವಸ್ತು ಸೇರಿಸದೆ ಹರಳುಗಳ ರೂಪದಲ್ಲಿ ತಯಾರಿಸಲಾಗುತ್ತದೆ! ಇನ್ನು, ಕೆಂಪು ಕಲ್ಲು ಸಕ್ಕರೆ ತಾಳೆ ಮರದ […]

Red Rock Candy: ಕಲ್ಲು ಸಕ್ಕರೆ ಸವಿದರೆ ಇದೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳು! ಆದರೂ ಇರಲಿ ಎಚ್ಚರಾ
ಕಲ್ಲು ಸಕ್ಕರೆಯ ಸವಿದರೆ ಇದೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳು! ಆದರೂ ಇರಲಿ ಎಚ್ಚರಾ
Follow us
| Updated By: ಸಾಧು ಶ್ರೀನಾಥ್​

Updated on: Mar 15, 2022 | 6:06 AM

ಕಲ್ಲು ಸಕ್ಕರೆ ಎಲ್ಲರಿಗೂ ಗೊತ್ತು. ಕಲ್ಲು ಸಕ್ಕರೆ ಅಂದರೆ ಬರೀ ಸಿಹಿಯಲ್ಲ ಜೊತೆಗೆ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ ಶೀತ, ಕಂದ ಶರ್ಕರ ಎಂದೂ ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಖಡಿ ಶಕ್ಕರ್ ಎಂದೂ ಆಂಗ್ಲ ಭಾಷೆಯಲ್ಲಿ Rock sugar, Red Rock Candy ಎಂದು ಕರೆಯುವುದುಂಟು. ಈ ಕಲ್ಲು ಸಕ್ಕರೆಯನ್ನು ಕಬ್ಬಿನ ಹಾಲನ್ನು ಘನೀಕೃತಗೊಳಿಸಿ ಯಾವುದೇ ರಾಸಾಯನಿಕ ವಸ್ತು ಸೇರಿಸದೆ ಹರಳುಗಳ ರೂಪದಲ್ಲಿ ತಯಾರಿಸಲಾಗುತ್ತದೆ! ಇನ್ನು, ಕೆಂಪು ಕಲ್ಲು ಸಕ್ಕರೆ ತಾಳೆ ಮರದ ಹಾಲಿನಿಂದ ತಯಾರಿಸಲಾಗುತ್ತದೆ. ಇದರ ಬೆಲೆ ಜಾಸ್ತಿ , ಸಿಗುವುದು ಅಪರೂಪ. ಕಲ್ಲುಸಕ್ಕರೆ ತಂಪು ಗುಣ ಹೊಂದಿದ್ದು ಶರೀರಕ್ಕೆ ಪುಷ್ಟಿದಾಯಕವಾಗಿದೆ. ಕಲ್ಲು ಸಕ್ಕರೆ, ಒಣ ಕೊಬ್ಬರಿ, ಒಣ ಖರ್ಜೂರ, ಬದಾಮಿ, ಗೋಡಂಬಿ ಚೂರು ಮಾಡಿ ಒಣ ದ್ರಾಕ್ಷಿ ಸೇರಿಸಿ ಬೆಳೆಯುವ ಮಕ್ಕಳಿಗೆ ತಿನ್ನಿಸಬೇಕು. ಕಲ್ಲು ಸಕ್ಕರೆಯ ಹತ್ತಾರು ಪ್ರಯೋಜನಗಳು ಹೀಗಿವೆ:

  1. ಅಕ್ರೋಟ (Walnut) ಹಾಗೂ ಕಲ್ಲು ಸಕ್ಕರೆಯನ್ನು ಒಟ್ಟಾಗಿ ಸೇವಿಸಿದರೆ ಮೆದುಳಿಗೆ ಶಕ್ತಿದಾಯಕ. * ಸೋಂಪು ಕಾಳು ಮತ್ತು ಕಲ್ಲು ಸಕ್ಕರೆಯ ಸೇವನೆಯು ಕಣ್ಣುಗಳ ದೃಷ್ಟಿ ಸಾಮರ್ಥ್ಯ ಹೆಚ್ಚಿಸುತ್ತದೆ. * ಕಾಳುಮೆಣಸಿನ ಪುಡಿ ಮತ್ತು ಕಲ್ಲು ಸಕ್ಕರೆಯ ಸೇವನೆಯು ಕೆಮ್ಮು ನಿವಾರಿಸುತ್ತದೆ. ಗಂಟಲಿಗೂ ಹಿತಕರ.
  2. ಮೂಗಿನಿಂದ ರಕ್ತ ಸೋರುತ್ತಿದ್ದರೆ ಕಲ್ಲು ಸಕ್ಕರೆ ಪುಡಿಯನ್ನು ಮೂಗಿನ ಹತ್ತಿರ ಹಿಡಿದು ವಾಸನೆಯನ್ನು ಆಘ್ರಾಣಿಸಬೇಕು. * ಬಾಯಿ ಹುಣ್ಣಿಗೆ ಕಲ್ಲು ಸಕ್ಕರೆ ಮತ್ತು ಜೀರಿಗೆ ರಾಮಬಾಣ. ಏಲಕ್ಕಿ ಪುಡಿಯನ್ನೂ ಸೇರಿಸಿಕೊಂಡು ತಿನ್ನಬಹುದು. * ಧ್ವನಿ ಒಡೆದಾಗ ಒಣ ಶುಂಠಿ, ಕಲ್ಲು ಸಕ್ಕರೆ ಪುಡಿ ಮಾಡಿ ಸೇವನೆ ಮಾಡಬಹುದು.
  3. ಬಿಳಿ ಈರುಳ್ಳಿ ರಸದಲ್ಲಿ ಕಲ್ಲು ಸಕ್ಕರೆ ಸೇರಿಸಿ ಕುಡಿದರೆ ಕಿಡ್ನಿ ಸ್ಟೋನ್ ಕರಗಿಸಲು ಸಹಕಾರಿಯಾಗಿದೆ. * ಗಂಟಲು ನೋವಿಗೆ ಗಸಗಸೆ ಮತ್ತು ಕಲ್ಲು ಸಕ್ಕರೆ ಸೇವನೆ ಒಳ್ಳೆಯದು. * ಮೂಲವ್ಯಾಧಿಗೆ ನಾಗಕೇಸರ ಕಲ್ಲು ಸಕ್ಕರೆ ಸೇವನೆ ಮಾಡಬಹುದು.
  4. ಭೇದಿಗೆ ಧನಿಯ ಪೌಡರ್ ಬೆರೆಸಿ ಸೇವಿಸಬೇಕು. * ಹೊಟ್ಟೆ ನೋವಿಗೆ 10ರಿಂದ15 ಬೇವಿನ ಎಲೆಗಳ ರಸದಲ್ಲಿ ಕಲ್ಲು ಸಕ್ಕರೆ ಸೇರಿಸಿ ಕುಡಿದರೆ ಉತ್ತಮ. * ಕಲ್ಲು ಸಕ್ಕರೆ ಬೆಳೆಯುವ ಮಕ್ಕಳಿಗೆ ತಿನ್ನಿಸಬೇಕು. ಇದರಿಂದ ದೇಹಕ್ಕೆ ಬಲ ಬರುತ್ತದೆ. ಮೆದುಳಿಗೂ ಒಳ್ಳೆಯದು.
  5. ನಿಂಬು ಶರಬತ್ತು ತಯಾರಿಸುವಾಗ ಕಲ್ಲು ಸಕ್ಕರೆ ಬಳಸುವುದರಿಂದ ವಿಶೇಷ ರುಚಿ ನೀಡುತ್ತದೆ. ಹಾಗೂ ಗುಲಾಬ್ ಜಾಮೂನು ತಯಾರಿಸುವಾಗ ಸಕ್ಕರೆ ಬದಲು ಕಲ್ಲು ಸಕ್ಕರೆಯ ಪಾಕ ಉತ್ತಮ.
  6. 15 ಗ್ರಾಂ ಕಲ್ಲು ಸಕ್ಕರೆ 60 ಕ್ಯಾಲೊರಿ ಹೊಂದಿದೆ ಎಂದು ಹೇಳಲಾಗುತ್ತದೆ. ಆದ್ಯವಾಗಿ ಗಮನಿಸಿ ಮಧುಮೇಹಿಗಳಿಗೆ ಇದು ಸೂಕ್ತವಲ್ಲ. ದೇಹಕ್ಕೆ ತಂಪು ನೀಡುವುದಲ್ಲದೆ ಬಲವನ್ನೂ ನೀಡುವ ಈ ಕಲ್ಲು ಸಕ್ಕರೆ ಯನ್ನು ಹಿತಮಿತವಾಗಿ ಬಳಸುವುದು ಒಳ್ಳೆಯದು ಅಲ್ಲವಾ!? (ಸಂಗ್ರಹ: ಎಸ್​ಹೆಚ್​ ನದಾಫ್​)

ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರು ಕಲ್ಲುಸಕ್ಕರೆ ಕೊಳ್ಳಿರೋ ||

ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು ಪುಲ್ಲಲೋಚನ ಶ್ರೀಕೃಷ್ಣನಾಮವೆಂಬ ||

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ ಒತ್ತೊತ್ತಿ ಗೋಣಿಯೊಳು ತುಂಬುವದಲ್ಲ | ಎತ್ತ ಹೋದರು ಬಾಡಿಗೆ ಸುಂಕವಿದಕಿಲ್ಲ ಉತ್ತಮ ಸರಕಿದು ಅತಿ ಲಾಭ ಬರುವಂಥ ||

ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ ಎಷ್ಟು ಒಯ್ಡರು ಬೆಲೆ ರೊಕ್ಕವಿದಕಿಲ್ಲ | ಕಟ್ಟಿರುವೆಯು ತಿಂದು ಕಡಮೆಯಾಗುವುದಲ್ಲ ಪಟ್ಟಣದೊಳಗೆ ಪ್ರಸಿದ್ದವಾಗಿರುವಂಥ ||

ಸಂತೆ ಸಂತೆಗೆ ಹೋಗಿ ಶ್ರಮಪಡುವುದಲ್ಲ ಸಂತೆಯೊಳಗೆ ಇಟ್ಟು ಮಾರುವುದಲ್ಲ | ಸಂತತ ಭಕ್ತರ ನಾಲಗೆ ಸವಿಗೊಂಬ ಕಾಂತ ಪುರಂದರವಿಠಲ ನಾಮವೆಂಬ || Kallu sakkare kolliro nivellaru kallu sakkare kolliro

ತಾಜಾ ಸುದ್ದಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್