AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Rock Candy: ಕಲ್ಲು ಸಕ್ಕರೆ ಸವಿದರೆ ಇದೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳು! ಆದರೂ ಇರಲಿ ಎಚ್ಚರಾ

ಕಲ್ಲು ಸಕ್ಕರೆ ಎಲ್ಲರಿಗೂ ಗೊತ್ತು. ಕಲ್ಲು ಸಕ್ಕರೆ ಅಂದರೆ ಬರೀ ಸಿಹಿಯಲ್ಲ ಜೊತೆಗೆ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ ಶೀತ, ಕಂದ ಶರ್ಕರ ಎಂದೂ ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಖಡಿ ಶಕ್ಕರ್ ಎಂದೂ ಆಂಗ್ಲ ಭಾಷೆಯಲ್ಲಿ Rock sugar, Red Rock Candy ಎಂದು ಕರೆಯುವುದುಂಟು. ಈ ಕಲ್ಲು ಸಕ್ಕರೆಯನ್ನು ಕಬ್ಬಿನ ಹಾಲನ್ನು ಘನೀಕೃತಗೊಳಿಸಿ ಯಾವುದೇ ರಾಸಾಯನಿಕ ವಸ್ತು ಸೇರಿಸದೆ ಹರಳುಗಳ ರೂಪದಲ್ಲಿ ತಯಾರಿಸಲಾಗುತ್ತದೆ! ಇನ್ನು, ಕೆಂಪು ಕಲ್ಲು ಸಕ್ಕರೆ ತಾಳೆ ಮರದ […]

Red Rock Candy: ಕಲ್ಲು ಸಕ್ಕರೆ ಸವಿದರೆ ಇದೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳು! ಆದರೂ ಇರಲಿ ಎಚ್ಚರಾ
ಕಲ್ಲು ಸಕ್ಕರೆಯ ಸವಿದರೆ ಇದೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳು! ಆದರೂ ಇರಲಿ ಎಚ್ಚರಾ
TV9 Web
| Updated By: ಸಾಧು ಶ್ರೀನಾಥ್​|

Updated on: Mar 15, 2022 | 6:06 AM

Share

ಕಲ್ಲು ಸಕ್ಕರೆ ಎಲ್ಲರಿಗೂ ಗೊತ್ತು. ಕಲ್ಲು ಸಕ್ಕರೆ ಅಂದರೆ ಬರೀ ಸಿಹಿಯಲ್ಲ ಜೊತೆಗೆ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಸಂಸ್ಕೃತ ಭಾಷೆಯಲ್ಲಿ ಶೀತ, ಕಂದ ಶರ್ಕರ ಎಂದೂ ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಖಡಿ ಶಕ್ಕರ್ ಎಂದೂ ಆಂಗ್ಲ ಭಾಷೆಯಲ್ಲಿ Rock sugar, Red Rock Candy ಎಂದು ಕರೆಯುವುದುಂಟು. ಈ ಕಲ್ಲು ಸಕ್ಕರೆಯನ್ನು ಕಬ್ಬಿನ ಹಾಲನ್ನು ಘನೀಕೃತಗೊಳಿಸಿ ಯಾವುದೇ ರಾಸಾಯನಿಕ ವಸ್ತು ಸೇರಿಸದೆ ಹರಳುಗಳ ರೂಪದಲ್ಲಿ ತಯಾರಿಸಲಾಗುತ್ತದೆ! ಇನ್ನು, ಕೆಂಪು ಕಲ್ಲು ಸಕ್ಕರೆ ತಾಳೆ ಮರದ ಹಾಲಿನಿಂದ ತಯಾರಿಸಲಾಗುತ್ತದೆ. ಇದರ ಬೆಲೆ ಜಾಸ್ತಿ , ಸಿಗುವುದು ಅಪರೂಪ. ಕಲ್ಲುಸಕ್ಕರೆ ತಂಪು ಗುಣ ಹೊಂದಿದ್ದು ಶರೀರಕ್ಕೆ ಪುಷ್ಟಿದಾಯಕವಾಗಿದೆ. ಕಲ್ಲು ಸಕ್ಕರೆ, ಒಣ ಕೊಬ್ಬರಿ, ಒಣ ಖರ್ಜೂರ, ಬದಾಮಿ, ಗೋಡಂಬಿ ಚೂರು ಮಾಡಿ ಒಣ ದ್ರಾಕ್ಷಿ ಸೇರಿಸಿ ಬೆಳೆಯುವ ಮಕ್ಕಳಿಗೆ ತಿನ್ನಿಸಬೇಕು. ಕಲ್ಲು ಸಕ್ಕರೆಯ ಹತ್ತಾರು ಪ್ರಯೋಜನಗಳು ಹೀಗಿವೆ:

  1. ಅಕ್ರೋಟ (Walnut) ಹಾಗೂ ಕಲ್ಲು ಸಕ್ಕರೆಯನ್ನು ಒಟ್ಟಾಗಿ ಸೇವಿಸಿದರೆ ಮೆದುಳಿಗೆ ಶಕ್ತಿದಾಯಕ. * ಸೋಂಪು ಕಾಳು ಮತ್ತು ಕಲ್ಲು ಸಕ್ಕರೆಯ ಸೇವನೆಯು ಕಣ್ಣುಗಳ ದೃಷ್ಟಿ ಸಾಮರ್ಥ್ಯ ಹೆಚ್ಚಿಸುತ್ತದೆ. * ಕಾಳುಮೆಣಸಿನ ಪುಡಿ ಮತ್ತು ಕಲ್ಲು ಸಕ್ಕರೆಯ ಸೇವನೆಯು ಕೆಮ್ಮು ನಿವಾರಿಸುತ್ತದೆ. ಗಂಟಲಿಗೂ ಹಿತಕರ.
  2. ಮೂಗಿನಿಂದ ರಕ್ತ ಸೋರುತ್ತಿದ್ದರೆ ಕಲ್ಲು ಸಕ್ಕರೆ ಪುಡಿಯನ್ನು ಮೂಗಿನ ಹತ್ತಿರ ಹಿಡಿದು ವಾಸನೆಯನ್ನು ಆಘ್ರಾಣಿಸಬೇಕು. * ಬಾಯಿ ಹುಣ್ಣಿಗೆ ಕಲ್ಲು ಸಕ್ಕರೆ ಮತ್ತು ಜೀರಿಗೆ ರಾಮಬಾಣ. ಏಲಕ್ಕಿ ಪುಡಿಯನ್ನೂ ಸೇರಿಸಿಕೊಂಡು ತಿನ್ನಬಹುದು. * ಧ್ವನಿ ಒಡೆದಾಗ ಒಣ ಶುಂಠಿ, ಕಲ್ಲು ಸಕ್ಕರೆ ಪುಡಿ ಮಾಡಿ ಸೇವನೆ ಮಾಡಬಹುದು.
  3. ಬಿಳಿ ಈರುಳ್ಳಿ ರಸದಲ್ಲಿ ಕಲ್ಲು ಸಕ್ಕರೆ ಸೇರಿಸಿ ಕುಡಿದರೆ ಕಿಡ್ನಿ ಸ್ಟೋನ್ ಕರಗಿಸಲು ಸಹಕಾರಿಯಾಗಿದೆ. * ಗಂಟಲು ನೋವಿಗೆ ಗಸಗಸೆ ಮತ್ತು ಕಲ್ಲು ಸಕ್ಕರೆ ಸೇವನೆ ಒಳ್ಳೆಯದು. * ಮೂಲವ್ಯಾಧಿಗೆ ನಾಗಕೇಸರ ಕಲ್ಲು ಸಕ್ಕರೆ ಸೇವನೆ ಮಾಡಬಹುದು.
  4. ಭೇದಿಗೆ ಧನಿಯ ಪೌಡರ್ ಬೆರೆಸಿ ಸೇವಿಸಬೇಕು. * ಹೊಟ್ಟೆ ನೋವಿಗೆ 10ರಿಂದ15 ಬೇವಿನ ಎಲೆಗಳ ರಸದಲ್ಲಿ ಕಲ್ಲು ಸಕ್ಕರೆ ಸೇರಿಸಿ ಕುಡಿದರೆ ಉತ್ತಮ. * ಕಲ್ಲು ಸಕ್ಕರೆ ಬೆಳೆಯುವ ಮಕ್ಕಳಿಗೆ ತಿನ್ನಿಸಬೇಕು. ಇದರಿಂದ ದೇಹಕ್ಕೆ ಬಲ ಬರುತ್ತದೆ. ಮೆದುಳಿಗೂ ಒಳ್ಳೆಯದು.
  5. ನಿಂಬು ಶರಬತ್ತು ತಯಾರಿಸುವಾಗ ಕಲ್ಲು ಸಕ್ಕರೆ ಬಳಸುವುದರಿಂದ ವಿಶೇಷ ರುಚಿ ನೀಡುತ್ತದೆ. ಹಾಗೂ ಗುಲಾಬ್ ಜಾಮೂನು ತಯಾರಿಸುವಾಗ ಸಕ್ಕರೆ ಬದಲು ಕಲ್ಲು ಸಕ್ಕರೆಯ ಪಾಕ ಉತ್ತಮ.
  6. 15 ಗ್ರಾಂ ಕಲ್ಲು ಸಕ್ಕರೆ 60 ಕ್ಯಾಲೊರಿ ಹೊಂದಿದೆ ಎಂದು ಹೇಳಲಾಗುತ್ತದೆ. ಆದ್ಯವಾಗಿ ಗಮನಿಸಿ ಮಧುಮೇಹಿಗಳಿಗೆ ಇದು ಸೂಕ್ತವಲ್ಲ. ದೇಹಕ್ಕೆ ತಂಪು ನೀಡುವುದಲ್ಲದೆ ಬಲವನ್ನೂ ನೀಡುವ ಈ ಕಲ್ಲು ಸಕ್ಕರೆ ಯನ್ನು ಹಿತಮಿತವಾಗಿ ಬಳಸುವುದು ಒಳ್ಳೆಯದು ಅಲ್ಲವಾ!? (ಸಂಗ್ರಹ: ಎಸ್​ಹೆಚ್​ ನದಾಫ್​)

ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರು ಕಲ್ಲುಸಕ್ಕರೆ ಕೊಳ್ಳಿರೋ ||

ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು ಪುಲ್ಲಲೋಚನ ಶ್ರೀಕೃಷ್ಣನಾಮವೆಂಬ ||

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ ಒತ್ತೊತ್ತಿ ಗೋಣಿಯೊಳು ತುಂಬುವದಲ್ಲ | ಎತ್ತ ಹೋದರು ಬಾಡಿಗೆ ಸುಂಕವಿದಕಿಲ್ಲ ಉತ್ತಮ ಸರಕಿದು ಅತಿ ಲಾಭ ಬರುವಂಥ ||

ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ ಎಷ್ಟು ಒಯ್ಡರು ಬೆಲೆ ರೊಕ್ಕವಿದಕಿಲ್ಲ | ಕಟ್ಟಿರುವೆಯು ತಿಂದು ಕಡಮೆಯಾಗುವುದಲ್ಲ ಪಟ್ಟಣದೊಳಗೆ ಪ್ರಸಿದ್ದವಾಗಿರುವಂಥ ||

ಸಂತೆ ಸಂತೆಗೆ ಹೋಗಿ ಶ್ರಮಪಡುವುದಲ್ಲ ಸಂತೆಯೊಳಗೆ ಇಟ್ಟು ಮಾರುವುದಲ್ಲ | ಸಂತತ ಭಕ್ತರ ನಾಲಗೆ ಸವಿಗೊಂಬ ಕಾಂತ ಪುರಂದರವಿಠಲ ನಾಮವೆಂಬ || Kallu sakkare kolliro nivellaru kallu sakkare kolliro

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್